ಪಾಲನಜೋಗಿಹಳ್ಳಿಯಲ್ಲಿ ಅಪಘಾತ : ಗಾಯಾಳು ಆಸ್ಪತ್ರೆಗೆ ದಾಖಲು

ದೊಡ್ಡಬಳ್ಳಾಪುರ : ಚಾಲಕನ ನಿಯಂತ್ರಣ ತಪ್ಪಿದ ಮಹೀಂದ್ರ ಕಂಪನಿಯಾ ಥಾರ್ ಜೀಪ್ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಹಿಂದೂಪುರ- ಯಲಹಂಕ ನಡುವಿನ ರಾಜ್ಯ ಹೆದ್ದಾರಿ ಪಾಲನಜೋಗಿಹಳ್ಳಿ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

 

ಕಂಟನಕುಂಟೆ ಕಡೆಯಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ವೇಳೆ ಪಾಲನಜೋಗಿಹಳ್ಳಿ ಬಳಿಯ ಪ್ರೆಂಡ್ಸ್ ಹಾಲ್ ಮುಂಭಾಗ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಸಿಮೆಂಟ್ ಲಾರಿಗೆ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ.

ಘಟನೆಯಲ್ಲಿ ಕಂಟನಕುಂಟೆ ನಿವಾಸಿ ಜೀಪ್ ಚಾಲಕನಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

 

ಘಟನೆಯಲ್ಲಿ ಮಹಿಂದ್ರಾ ಥಾರ್ ವಾಹನ ನುಜ್ಜುಗುಜ್ಜಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

Comments

Leave a Reply

Your email address will not be published. Required fields are marked *