ದೊಡ್ಡಬಳ್ಳಾಪುರ ತಾಲ್ಲೂಕು‌ ಕಚೇರಿ ಮೇಲೆ ಲೋಕಾಯುಕ್ತ ನ್ಯಾಯಮೂರ್ತಿ ಶಿವಕುಮಾರ್ ನೇತೃತ್ವದಲ್ಲಿ ದಾಳಿ

ದೊಡ್ಡಬಳ್ಳಾಪುರ: ತಾಲ್ಲೂಕು‌ ಕಚೇರಿ ಮೇಲೆ ಲೋಕಾಯುಕ್ತ ನ್ಯಾಯಮೂರ್ತಿ ಶಿವಕುಮಾರ್ ನೇತೃತ್ವದಲ್ಲಿ ದಾಳಿ‌ ನಡೆಸಿ, ಕಡತಗಳ ಪರಿಶೀಲನೆ ಆರಂಭಿಸಲಾಗಿದೆ.

ಯೋಜನೆಗಳ ಸವಲತ್ತು ವಿತರಣೆಗೆ ಅಧಿಕ ಹಣ ವಸೂಲಿ, ಗೋಮಾಳ ಜಮೀನು ಒತ್ತುವರಿಗೆ ಸಂಬಂಧಿಸಿ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ ದಾಳಿ ನಡೆದಿದೆ‌ ಎನ್ನಲಾಗಿದೆ.

 

ಲೋಕಾಯುಕ್ತ ಎಸ್ಪಿ, ಡಿವೈಎಸ್ಪಿ ಸೇರಿದಂತೆ ಹಲವರು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ. ಇದೇ ವೇಳೆ ತಾಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕರು ಅಧಿಕಾರಿಗಳ ಬಳಿ ಅಹವಾಲು ಹೇಳಿಕೊಂಡರು

Comments

Leave a Reply

Your email address will not be published. Required fields are marked *