12 ಕೋಟಿ ವೆಚ್ಚದಲ್ಲಿ ಕೊಡಗಿನ ಸಂಪ್ರದಾಯದಂತೆ ನೂತನ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಕಚೇರಿ ನಿರ್ಮಾಣ – ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ಪೊಲೀಸ್ ವಸತಿ ಗೃಹಗಳ ಕುರಿತಂತೆ ಮಡಿಕೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಕರ್ನಾಟಕ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮದ ವತಿಯಿಂದ 12 ಕೋಟಿ ರೂ.ಗಳ ವೆಚ್ಚದಲ್ಲಿ ಕೊಡಗಿನ ಸಂಪ್ರದಾಯದಂತೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ನಿರ್ಮಾಣವಾಗಿದೆ. ಕಚೇರಿ ಎಷ್ಟು ದೊಡ್ಡದು ಮುಖ್ಯವಲ್ಲ ಜನರ ಸಮಸ್ಯೆಗಳಿಗೆ ನ್ಯಾಯ ಕೊಡಿಸುವುದು ಬಹಳ ಮುಖ್ಯ.

 

ರಾಜ್ಯದಲ್ಲಿ ಪೊಲೀಸ್ ವಸತಿ ಗೃಹಗಳ ಕೊರತೆ ಇದ್ದು ಈ ನಿಟ್ಟಿನಲ್ಲಿ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ಗಮನ ಹರಿಸಲಿದೆ.

ಚಿಕ್ಕಹೆಜ್ಜಾಲದಲ್ಲಿ ಪೊಲೀಸ್ ತರಬೇತಿ ಶಾಲೆ ಸ್ಥಾಪನೆಯಾಗಬೇಕೆಂಬ ಬೇಡಿಕೆ ನನ್ನ ಗಮನಕ್ಕೆ ಬಂದಿಲ್ಲ, ಬಂದರೆ ಪರಿಶೀಲಿಸಲಾಗುವುದು.

 

ಹಿಂದಿನ ಸರ್ಕಾರದ ಅವಧಿಯಲ್ಲಿ ಗುಂಡೂರಾವ್ ಬಡಾವಣೆಯಲ್ಲಿನ ಪೊಲೀಸ್ ಇಲಾಖೆ ಕಟ್ಟಡಕ್ಕೆ ಅಡಿಪಾಯ ಹಾಕಿದ್ದು, ಅದಕ್ಕೆ ಉಚ್ಚನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ತಡೆಯಾಜ್ಞೆ ತೆರವುಗೊಂಡ ನಂತರ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *