ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇಗುಲದಲ್ಲಿ ಸೋಮವಾರ ಕಾಣಿಕೆ ಹುಂಡಿ ಎಣಿಕೆ ಮಾಡಲಾಗಿದ್ದು ಒಟ್ಟು 55 ಲಕ್ಷ ಹಣ ಸಂಗ್ರಹವಾಗಿದೆ..
ತಾಲ್ಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಗಳನ್ನು ಸೋಮವಾರ ಎಣಿಕೆ ಮಾಡಲಾಯಿತು ಹುಂಡಿಯಲ್ಲಿ ಒಟ್ಟು 55 ಲಕ್ಷದ 24 ಸಾವಿರದ 663 ರೂ ಗಳ ಮೊತ್ತ ಸಂಗ್ರಹವಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.
6,900 ಮೌಲ್ಯದ 1 ಕೆಜಿ 390 ಗ್ರಾಂ ಬೆಳ್ಳಿ, 21,750 ರೂ ಮೌಲ್ಯದ 4ಗ್ರಾಂ 600 ಮಿಲಿ ತೂಕದ ಚಿನ್ನದ ಹರಕೆ ಹುಂಡಿಯಲ್ಲಿ ಹಾಕಲಾಗಿದೆ.
ಗುಂಡಿ ಎಣಿಕೆ ಕಾರ್ಯವನ್ನು ದೇವಾಲಯಕ್ಕೆ ಬಂದ ಭಕ್ತಾದಿಗಳ ಸಮ್ಮುಖದಲ್ಲಿ ನಡೆಸಲಾಯಿತು
ಈ ವೇಳೆ ಮುಜರಾಯಿ ಇಲಾಖೆ ತಹಶೀಲ್ದಾರ್ ಜೆಜೆ ಹೇಮಾವತಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ನಾಗರಾಜು, ಪ್ರಧಾನ ಅರ್ಚಕರಾದ ನಾಗೇಂದ್ರ ಶರ್ಮ, ಸಿಬ್ಬಂದಿ ನಂಜಪ್ಪ ಸೇರಿದಂತೆ ಇಂಡಿಯನ್ ಕೆನರಾ ಬ್ಯಾಂಕ್ ಸಿಬ್ಬಂದಿ, ಹಾಗೂ ದೇವಾಲಯಕ್ಕೆ ಆಗಮಿಸಿದ ಭಕ್ತಾದಿಗಳು ಉಪಸ್ಥಿತರಿದ್ದರು
Leave a Reply