ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಕುರಿತು ಜನತೆಗೆ ಮಾಹಿತಿ : ಸಮಾವೇಶದಲ್ಲಿ ಸಚಿವರಾದ ಕೆ.ಎಚ್ ಮುನಿಯಪ್ಪ ಸೇರಿದಂತೆ ಹಲವು ಗಣ್ಯರು ಭಾಗಿ

ರಾಜ್ಯದ ಜನತೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 5 ಗ್ಯಾರೆಂಟಿ ಯೋಜನೆಗಳನ್ನು ತಲುಪಿಸುವಲ್ಲಿ ಯಶಸ್ವಿಯಾಗಿದೆ .ರಾಜ್ಯದ ಜನತೆ ನಮ್ಮ ಸರ್ಕಾರಕ್ಕೆ ನೀಡಿರುವ ಅವಕಾಶವನ್ನು ಪ್ರತಿ ಮನೆ ಬಾಗಿಲಿಗೆ 5 ಯಶಸ್ವಿ ಯೋಜನೆಗಳನ್ನು ತಲುಪಿಸುವ ಮೂಲಕ ಸದ್ಭಳಕೆ ಮಾಡಿಕೊಳ್ಳಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ ಕೆ ಏಚ್ ಮುನಿಯಪ್ಪ ತಿಳಿಸಿದರು

 

ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಜನರಿಗೆ ಮಾಹಿತಿ ನೀಡುವ ಸಮಾವೇಶವನ್ನು ತಾಲ್ಲೂಕಿನ ತೂಬಗೆರೆ ಹೋಬಳಿಯ , ಮೆಳೇಕೋಟೆ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು . ಮೆಳೆಕೋಟೆ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಮಾನ್ಯ ಸಚಿವರು ಉದ್ಘಾಟಿಸಿದರು ನಂತರ ಮಾತನಾಡಿದ ಅವರು ರಾಜ್ಯದ ಜನತೆಯ ಅಭಿವೃದ್ದಿಗಾಗಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ಕುಟುಂಬದ ಯಜಮಾನಿಕೆ 2000ರೂಪಾಯಿಗಳನ್ನು ನೀಡುತ್ತಿದ್ದು , ಗೃಹಜ್ಯೋತಿ ಯೋಜನೆ ಅಡಿಯಲ್ಲಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ಗಳ ವರೆಗಿನ ಉಚಿತ ವಿದ್ಯುತ್ ಕಲ್ಪಿಸಲಾಗಿದೆ , ಅನ್ನಭಾಗ್ಯಯೋಜನೆ ಅಡಿಯಲ್ಲಿ ಪ್ರತಿ ಕುಟುಂಬಕ್ಕೆ 10 ಕೆಜಿ ಅಕ್ಕಿ ನೀಡುವ ಭರವಸೆ ನೀಡಿದ್ದೆವು ಆದರೆ ಪ್ರಸ್ತುತ 5 ಕೆಜಿ ಅಕ್ಕಿ ನೀಡುತ್ತಿದ್ದು ಉಳಿಕೆ ನಗದು ರೂಪದಲ್ಲಿ ನೀಡಲಾಗುತ್ತಿದೆ , ಯುವನಿಧಿ ಪ್ರತಿ ನಿರುದ್ಯೋಗಿ ಪದವೀಧರ ಯುವಕ ಯುವತಿಯರಿಗೆ ತಿಂಗಳಿಗೆ 3000 ಮತ್ತು ಡಿಪ್ಲೊಮೊ ಮಾಡಿದವರಿಗೆ ತಿಂಗಳಿಗೆ 1500ಸಾವಿರ ರೂಪಾಯಿಗಳನ್ನು ನೀಡುತ್ತಿದ್ದೇವೆ , ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೂ ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ ಸಾಮಾನ್ಯ ಬಸ್ಸು ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಿದ್ದು .ಯೋಜನೆಗಳು ರಾಜ್ಯದ ಜನತೆಯ ಸಬಲೀಕರಣಕ್ಕೆ ಅನುವು ಮಾಡಿಕೊಟ್ಟಿವೆ ಹಾಗೂ ನಮ್ಮ ಸರ್ಕಾರವನ್ನು ಮತ್ತಷ್ಟು ರಾಜ್ಯದ ಜನತೆಗೆ ಹತ್ತಿರ ಮಾಡಿವೆ ಎಂದು ಅಭಿಪ್ರಾಯ ಪಟ್ಟರು .

ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ರಾದ ಮುನಿರಾಜು, ಕೆಪಿಸಿಸಿ ಸದಸ್ಯರಾದಎಸ್ ಆರ್ ಮುನಿರಾಜು , ತೂಬಗೆರೆ ಕಾಂಗ್ರೆಸ್ ಅಧ್ಯಕ್ಷರಾದ ರಂಗಪ್ಪ,ಮುಂಡರಾದ ರವಿ ಸಿದ್ದಪ್ಪ , ಜಗನ್ನಾಥ, ಪ್ರಸನ್ನ ಕುಮಾರ್ ,ಶಾಂತ ಕುಮಾರ್, ಮಹಿಳಾ ಮುಖಂಡರು, ರೈತ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *