*ಅಂಕಿತ ಬಸಪ್ಪನವರಿಗೆ ಅಭಿನಂದನೆ ಸಲ್ಲಿಸಿದ ನವ ಕರ್ನಾಟಕ ಯುವಶಕ್ತಿ ವೇದಿಕೆ*

SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಮೂಲದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರನ್ನು ನವ ಕರ್ನಾಟಕ ಯುವ ಶಕ್ತಿ ವೇದಿಕೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

 

ಈ ಸಂದರ್ಭದಲ್ಲಿ ಹಳ್ಳಿ ರೈತ ಅಂಬರೀಶ್ ಮಾತನಾಡಿ ರಾಜ್ಯದ ವಿದ್ಯಾರ್ಥಿಗಳಿಗೆ ಅಂಕಿತ ಬಸಪ್ಪನವರು ಮಾದರಿಯಾಗಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ರಾಜ್ಯಕ್ಕೆ ಗೌರವ ತಂದುಕೊಟ್ಟಿರುವ ಅಂಕಿತ ಬಸಪ್ಪನವರು ಮುಂದಿನ ದಿನಗಳಲ್ಲಿ ಉತ್ತಮ ವಿದ್ಯಾಭ್ಯಾಸದೊಂದಿಗೆ ರಾಷ್ಟ್ರಕ್ಕೆ ಕೀರ್ತಿ ತರುವಂತಾಗಲಿ ಎಂದು ಹಾರೈಸಿದರು

 

ಈ ಸಂದರ್ಭದಲ್ಲಿ ಸಾಧಕಿ ಅಂಕಿತ ಬಸಪ್ಪ ನವರಿಗೆ ಸನ್ಮಾನಿಸಿ ಗೌರವಿಸಲಾಯಿತು ಹಾಗೂ ಧನ ಸಹಾಯ ಮಾಡುವ ಮೂಲಕ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಕೋರಲಾಯಿತು.

 

ಈ ಸಂದರ್ಭದಲ್ಲಿ ನವ ಕರ್ನಾಟಕ ಯುವಶಕ್ತಿ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *