*ಡಾ. ಕೆ ಸುಧಾಕರ್ ಗೆಲುವಿಗೆ ಸಂಭ್ರಮ, ಕಾರ‍್ಯಕರ್ತರ ವಿಜಯೋತ್ಸವ*

ದೊಡ್ಡಬಳ್ಳಾಪುರ (ತೂಬಗೆರೆ) : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ. ಕೆ ಸುಧಾಕರ್ ಜಯಭೇರಿ ಬಾರಿಸಿದ ಹಿನ್ನಲೆಯಲ್ಲಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಅಂಚಿ ವಿಜಯೋತ್ಸವ ಆಚರಿಸಿದರು.

ಈವೇಳೆ ಮಾತನಾಡಿದ ಜಿಲ್ಲ ಬಿಜೆಪಿ ಕಾರ್ಯದರ್ಶಿ ಪ್ರತಾಪ್ ನೂತನ ಸಂಸದರಾಗಿ ಆಯ್ಕೆಯಾಗಿರುವ ಸುಧಾಕರ್ ಅವರಿಗೆ ಶುಭಾಶಯಗಳು ಫಲಿತಾಂಶಕ್ಕಾಗಿ ಹಗಲಿರುಳು ದುಡಿದ ಪಕ್ಷದ ಕಾರ್ಯಕರ್ತರು ಮುಖಂಡರು ಮತ್ತು ಪಕ್ಷದ ಪರವಾಗಿ ಮತ ಚಲಾಯಿಸಿದ ಎಲ್ಲಾ ಮತದಾರರಿಗೂ ಕೃತಜ್ಞತೆ ತಿಳಿಸಿದರು.
ಜೆಡಿಎಸ್ ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಮೇಲೆ ವಿಶ್ವಾಸವಿತ್ತು ಮತ ಚಲಾಯಿಸಿರುವ ಎಲ್ಲಾ ಮತದಾರರ ಅಪೇಕ್ಷೆಯಂತೆ ಮುಂದಿನ ದಿನಗಳಲ್ಲಿ ಹೋಬಳಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಶ್ರಮಿಸುತ್ತೇವೆ. ದೇಶದಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ. ಇದು ಜನರು ನೀಡಿದ ಗೆಲುವು ಎಂದು ಬಣ್ಣಿಸಿದರು.

ಹೋಬಳಿ ಬಿಜೆಪಿ ಅಧ್ಯಕ್ಷ ವಾಸುದೇವ್, ಬಿಜೆಪಿ ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಪ್ರತಾಪ್, ಜೆಡಿಎಸ್ ಮುಖಂಡರಾದ ಉದಯ್ ಆರಾಧ್ಯ, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ಮುನಿಕೃಷ್ಣಪ್ಪ, ಮುಖಂಡರಾದ ಹರೀಶ್, ಕೃಷ್ಣಚಾರಿ, ದೇವರಾಜ್, ಗಂಗರಾಜು, ಇತರರು ಭಾಗವಹಿಸಿದ್ದರು.

Comments

Leave a Reply

Your email address will not be published. Required fields are marked *