*ಎನ್ ಡಿಎ ಚುನಾವಣೆಗೆ ಹೋಗಿದ್ದು ದೇಶವನ್ನ ಗೆಲ್ಲಿಸಲು. ಆದ್ದರಿಂದ ದೇಶ ಗೆದ್ದಿದೆ – ಆರ್ ಅಶೋಕ್*

ಗ್ಯಾರೆಂಟಿಗಳು ಸೋತಿದೆ, ಗ್ಯಾರೆಂಟಿಗಳು ನಮಗೆ ಮತ ತಂದು ಕೊಟ್ಟಿಲ್ಲ, ಗ್ಯಾರೆಂಟಿಗಳ ಬಗ್ಗೆ ಪರಾಮರ್ಶೆ ಮಾಡಬೇಕು ಎಂದು ಹೇಳುತ್ತಿರುವುದು ನಾನಲ್ಲ ಸಿದ್ದರಾಮಯ್ಯನವರೇ, ನಿಮ್ಮ ಸಚಿವರುಗಳು, ಶಾಸಕರುಗಳೇ ಗ್ಯಾರೆಂಟಿಗಳ ಬಗ್ಗೆ ಅಪಸ್ವರ ಎತ್ತುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಮ್ಮ ಎಕ್ಸ್ ಖಾತೆ ಮೂಲಕ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

 

ಇಡೀ ದೇಶದಲ್ಲಿ 40 ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಸುಳ್ಳು, ಅಪಪ್ರಚಾರ ಮಾಡಿದರೂ ಬಿಜೆಪಿ ತನ್ನ ಸ್ವಂತ ಬಲದ ಮೇಲೆ ಪಡೆದಷ್ಟು ಸೀಟುಗಳನ್ನೂ INDI ಮೈತ್ರಿಕೂಟ ಪಡೆಯಲಾಗಲಿಲ್ಲ. ರಾಹುಲ್ ಗಾಂಧಿ ಅವರನ್ನು ಎಷ್ಟು ಬಾರಿ ರೀಲಾಂಚ್ ಮಾಡಿದರೂ ಕಾಂಗ್ರೆಸ್ ತಕ್ಕಡಿ ಎರಡಂಕಿ ದಾಟಲಿಲ್ಲ. ಈಗ ಹೇಳಿ ಸೋತಿದ್ದು ಯಾರು ಗೆದಿದ್ದು ಯಾರು?

Ad

ಇನ್ನು ರಾಜ್ಯದ ವಿಚಾರದಲ್ಲಿ ರಾಜ್ಯದ 154 ವಿಧಾನಸಭಾ ಕ್ಷೇತ್ರಗಳಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಮುನ್ನಡೆ ಸಿಕ್ಕಿದೆ. 17 ಸಂಪುಟ ಸಚಿವರ ತಮ್ಮ ಸ್ವಂತ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲೀಡ್ ಕೊಡಿಸಲು ವಿಫಲರಾಗಿದ್ದಾರೆ. ಸಚಿವರ ಮಕ್ಕಳು, ತಮ್ಮಂದಿರು, ಕುಟುಂಬ ಸದಸ್ಯರು ಸೋತಿದ್ದಾರೆ

 

ಕಾಂಗ್ರೆಸ್ ಪಕ್ಷ ಗೆದ್ದರೆ ಇವಿಎಂ ಸರಿಯಿದೆ. ಕಾಂಗ್ರೆಸ್ ಪಕ್ಷ ಸೋತರೆ ಇವಿಎಂ ಸರಿಯಿಲ್ಲ. ಇದು ನಿಮ್ಮ ಕಾಂಗ್ರೆಸ್ ಪಕ್ಷದ ಗೋಸುಂಬೆ ರಾಜಕಾರಣ. ಶತಾಯ ಗತಾಯ ಹೇಗಾದರೂ ಮಾಡಿ ಗೆಲ್ಲಲೇಬೇಕು ಎಂದು ನೀವು ನೀಡಿದ ಸುಳ್ಳು ಭರವಸೆಗಳಿಂದ ದೇಶಾದ್ಯಂತ ಹೆಣ್ಣುಮಕ್ಕಳ ನಿಮ್ಮ ಪಕ್ಷಕ್ಕೆ ಹೇಗೆ ಶಾಪ ಹಾಕುತ್ತಿದ್ದಾರೆ

Ad

ಕಾಂಗ್ರೆಸ್ ಪಕ್ಷ ಚುನಾವಣೆಗೆ ಹೋಗಿದ್ದು ಮೋದಿ ಅವರನ್ನು ಸೋಲಿಸಲು. ಎನ್ ಡಿಎ ಚುನಾವಣೆಗೆ ಹೋಗಿದ್ದು ದೇಶವನ್ನ ಗೆಲ್ಲಿಸಲು. ಆದ್ದರಿಂದ ದೇಶ ಗೆದ್ದಿದೆ, INDI ಸೋತಿದೆ ಎಂದು ಎಕ್ಸ್ ಖಾತೆಯ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *