*ಜಿಲ್ಲಾಡಳಿತ ಭವನದಲ್ಲಿ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿ ಜಯಂತಿ ಆಚರಣೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ. 02:- ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ಕನ್ನಡ ಮತ್ತು ಸಂಸ್ಕೃತ ಇಲಾಖೆ ವತಿಯಿಂದ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿ ರವರ 144 ನೇ ಜಯಂತ್ಯೋತ್ಸವ ಅಂಗವಾಗಿ ಅಪರ ಜಿಲ್ಲಾಧಿಕಾರಿಗಳಾದ ಅಮರೇಶ ಹೆಚ್. ಅವರು ಡಾ. ಫ.ಗು ಹಳಕಟ್ಟಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.

 

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಯವರ ಕಚೇರಿ ಸಹಾಯಕರಾದ ರಾಜೀವ್ ಸುಲೋಚನ, ಆರ್.ಹೆಚ್. ಎಂ ಗಂಗಾಧರ್, ಜೆ.ಹೆಚ್ ಎಂ ಇಂದ್ರಮ್ಮ, ಜಿಲ್ಲಾಧಿಕಾರಿಯವರ ಆಪ್ತ ಸಹಾಯಕ ಅಭಿಷೇಕ್ ಸೇರಿದಂತೆ ಜಿಲ್ಲಾಡಳಿತ ಸಿಬ್ಬಂದಿ ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *