*ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ. 18 (ವಿಜಯಮಿತ್ರ):- ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ಸಹಯೋಗದಲ್ಲಿ ಬಾಶೆಟ್ಟಿಹಳ್ಳಿಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ, ಮಕ್ಕಳ ಹಕ್ಕುಗಳು, ಬಾಲ ನ್ಯಾಯ ಕಾಯ್ದೆ ಹಾಗೂ ಮಹಿಳೆಯರಿಗಿರುವ ಯೋಜನೆಗಳು, ಕಾಯ್ದೆ-ಕಾನೂನುಗಳ ಬಗ್ಗೆ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಹಾಗೂ ನಿರೂಪಣಾಧಿಕಾರಿ ಅನಿತಾಲಕ್ಷ್ಮಿ. ಎಸ್, ಕಾಲೇಜು ಕಾರ್ಯದರ್ಶಿ ಬಿನ್ನೋ ವರ್ಗಿಸ್, ಶಾಲಾ ಮುಖ್ಯೋಪಾಧ್ಯಾಯರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ
ಶ್ರೀಧರ್ ಯಾದವ್, ಮಕ್ಕಳ ಸಹಾಯವಾಣಿಯ ಶ್ರೀನಿವಾಸ್, ರಾಜಶೇಖರ.ಎನ್,, ಶಾಲಾ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *