ಅನುದಾನಿತ ನೌಕರರ ಪ್ರಸ್ತುತ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ  ಚರ್ಚಿಸಿ  ಸರ್ಕಾರದ ಗಮನ ಸೆಳೆದು ಪರಿಹಾರ ಕಂಡುಕೊಳ್ಳಲಾಗುವುದು- ಎಸ್.ಬೋರಪ್ಪ

ಕರ್ನಾಟಕ ರಾಜ್ಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ  ಎರಡನೇ ರಾಜ್ಯ ಮಟ್ಟದ ಪೂರ್ವಭಾವಿ ಸಭೆ  ತುಮಕೂರಿನಲ್ಲಿ ನಡೆಯಲಿದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಶ್ರೀ ಕೊಂಗಾಡಿಯಪ್ಪ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಎಸ್.ಬೋರಪ್ಪ ತಿಳಿಸಿದ್ದಾರೆ.

Ad

ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಪೂರ್ವಭಾವಿ ಸಭೆ ಕುರಿತು ಮಾತನಾಡಿ,  ಅ.20 ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ  ತುಮಕೂರಿನ ರವೀಂದ್ರ ಕಲಾನಿಕೇತನ, ಆರ್.ಟಿ ನಗರ (ಸರ್ವೋದಯ ಪದವಿಪೂರ್ವ ಕಾಲೇಜಿನ ಹತ್ತಿರ) ಸಭೆ  ನಡೆಯಲಿದೆ.   ಈ ಸಭೆಯಲ್ಲಿ ಅನುದಾನಿತ ನೌಕರರ ಪ್ರಸ್ತುತ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ  ಚರ್ಚಿಸಿ  ಸರ್ಕಾರದ ಗಮನ ಸೆಳೆದು ಪರಿಹಾರ ಕಂಡುಕೊಳ್ಳಲಾಗುವುದು.   ಕರ್ನಾಟಕ ರಾಜ್ಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ರಾಜ್ಯ ಮಟ್ಟದ ಸಮಾವೇಶದಲ್ಲಿ  ಕೈಗೊಳ್ಳುವ ನಿರ್ಣಯಗಳನ್ನು ಕಾರ್ಯರೂಪಕ್ಕೆ ತರಲು ಯೋಜನೆ ರೂಪಿಸಲಾಗುತ್ತದೆ.

 

ತುಮಕೂರಿನಲ್ಲಿ ನಡೆಯುವ ಕರ್ನಾಟಕ ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ‌ ರಾಜ್ಯಮಟ್ಟದ ಸಮಾವೇಶದಲ್ಲಿ  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ ಹಾಗೂ  ಹೊಸಕೋಟೆ ತಾಲ್ಲೂಕಿನ  ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರು ಭಾಗವಹಿಸಬೇಕೆಂದು ಕೋರಿದ್ದಾರೆ.  ಸಮಾವೇಶದಲ್ಲಿ    ಕರ್ನಾಟಕ ರಾಜ್ಯ ಖಾಸಗಿ  ಅನುದಾನಿತ ಪದವಿ ಪೂರ್ವ ಕಾಲೇಜುಗಳ‌ ನೌಕರರ ಸಂಘದ  ಎಲ್ಲಾ ಪದಾಧಿಕಾರಿಗಳು ಮತ್ತು ಜಿಲ್ಲಾ ಘಟಕಗಳ ಅಧ್ಯಕ್ಷರು ಕಾರ್ಯದರ್ಶಿಗಳು ಮತ್ತು ಎಲ್ಲ ಪದಾಧಿಕಾರಿಗಳು   ಭಾಗವಹಿಸಲಿದ್ದಾರೆ ಎಂದರು.

Comments

Leave a Reply

Your email address will not be published. Required fields are marked *