ಬೆಂಗಳೂರು ಗ್ರಾಮಾಂತರ ಜಿಲ್ಲೆ : 21ನೇ ರಾಷ್ಟ್ರೀಯ ಜಾನುವಾರು ಗಣತಿ ಸಮೀಕ್ಷೆಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿ ಜಾನುವಾರು ಗಣತಿ ಸಮೀಕ್ಷೆಯಲ್ಲಿ ಎಲ್ಲಾ ಜಾನುವಾರುಗಳ ಸವಿವರ ಗಣತಿ ಸಂಗ್ರಹಿಸಲಾಗುವುದು. ಹೈನುಗಾರಿಕೆ ಹಾಗೂ ಕೃಷಿ ಕ್ಷೇತ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಆಧುನಿಕ ತಂತ್ರಜ್ಞಾನದ ಮೂಲಕ ನಿಖರವಾಗಿ ಜಾನುವಾರು ಗಣತಿ ಮಾಡಲಾಗುವುದು. ಈ ಸಮೀಕ್ಷಾ ವರದಿ ಪಶುಸಂಗೋಪನೆ ಅಭಿವೃದ್ಧಿ, ಮೇವಿನ ಲಭ್ಯತೆ, ಆರೋಗ್ಯ, ಔಷಧೋಪಚಾರ, ಉತ್ಪಾದಕತೆ ಹೆಚ್ಚಿಸಲು, ಯೋಜನೆ ರೂಪಿಸಲು ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದರು.
Leave a Reply