ಜಿಲ್ಲಾಡಳಿತ ಭವನದಲ್ಲಿ ಸಂಸದರ ಕಛೇರಿ ಆರಂಭ

ಬೆಂ.ಗ್ರಾ. ಜಿಲ್ಲೆ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಸಂಸದರ ಕಛೇರಿಗೆ ಸಂಸದ ಡಾ.ಕೆ ಸುಧಾಕರ್ ಪೂಜೆ ಸಲ್ಲಿಸುವ ಮೂಲಕ ಕಾರ್ಯಾಲಯಕ್ಕೆ ಚಾಲನೆ ನೀಡಿದರು.

 

ನಂತರ ಮಾತನಾಡಿದ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜನರ ಕೆಲಸಗಳು ಸುಗಮವಾಗಿ ಸಾಗಲು ಕಛೇರಿ ತೆರೆಯಲಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕೆಂದರು.

 

ಕಲಾಪಕ್ಕೆ ಭಾಗವಹಿಸುವ ದಿನಗಳನ್ನು ಹೊರತುಪಡಿಸಿ, ಪ್ರತಿ ಸೋಮವಾರ ಅರ್ಧ ದಿನ ಈ ಕಛೇರಿಯಲ್ಲಿ ಲಭ್ಯವಿರುತ್ತೇನೆ. ಉಳಿದಂತೆ ನನ್ನ ಆಪ್ತ ಸಹಾಯಕರು ಪ್ರತಿದಿನ ಕಛೇರಿಯಲ್ಲಿ ಲಭ್ಯವಿದ್ದು ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಿದ್ದಾರೆ ಎಂದರು.

Comments

Leave a Reply

Your email address will not be published. Required fields are marked *