ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ಆಲಹಳ್ಳಿ ಡೈರಿಗೆ 2 ಲಕ್ಷ ಅನುದಾನದ ಡಿ ಡಿ ವಿತರಣೆ

ದೊಡ್ಡಬಳ್ಳಾಪುರ : ತಾಲೂಕಿನ ಆಲಹಳ್ಳಿ ಗ್ರಾಮದ ಡೈರಿಗೆ ಧರ್ಮಸ್ಥಳ ಯೋಜನೆ ವತಿಯಿಂದ 2 ಲಕ್ಷ ಅನುದಾನ ಮಂಜೂರಾತಿ ಆಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿರ್ದೇಶಕರಾದ ಉಮರಬ್ಬ DD ವಿತರಣೆ ಮಾಡಿದರು.

 

ಈ ಸಂದರ್ಭದಲ್ಲಿ ಮಾತನಾಡಿದ avaru ಬೆಂಗಳೂರು ಗ್ರಾಮಾಂತರದಲ್ಲಿ ಹೈನುಗಾರಿಕೆಗೆ ಹೆಚ್ಚಿನ ಆದ್ಯತೆ ಇದ್ದು, ಈ ಭಾಗದ ಹೆಚ್ಚಿನ ರೈತರು ಪಶುಸಂಗೋಪನೆಯಲ್ಲಿ ನಿರತರಾಗುವ ಮೂಲಕ ಹಾಲಿನ ಉತ್ಪಾದನೆಯಲ್ಲಿ ರಾಜ್ಯಕ್ಕೆ ಕೊಡುಗೆ ನೀಡುತ್ತಿದೆ ಎಂದರು.

 

ರೈತರು ಹಾಲಿನ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಕಾಲಕಾಲಕ್ಕೆ ಸರಿಯಾಗಿ ಲಸಿಕೆ ಹಾಕಿಸುವ ಮೂಲಕ ಜಾನುವಾರುಗಳ ಆರೋಗ್ಯ ಕಾಪಾಡುವುದರ ಜೊತೆ ಜೊತೆಗೆ ತಮ್ಮ ಹೈನುಗಾರಿಕೆಯನ್ನು ಕೂಡ ಅಭಿವೃದ್ಧಿಪಡಿಸಿಕೊಳ್ಳಲು ಮುಂದಾಗಬೇಕಿದೆ ಎಂದು ತಿಳಿಸಿದರು

 

ಈ ಸಂದರ್ಭದಲ್ಲಿ ಹಾಲು ಉತ್ಪಾದನಾ ಸಮಿತಿ ಅಧ್ಯಕ್ಷರಾದ ಸಿದ್ದಪ್ಪ ಮತ್ತು ಉಪಾಧ್ಯಕ್ಷರಾದ ನಾರಾಯಣಪ್ಪ ಕೇಂದ್ರ ಕಚೇರಿ ಯೋಜನಾಧಿಕಾರಿಯವರಾದ ಕಿಶೋರ್ ದೊಡ್ಡಬಳ್ಳಾಪುರ ಯೋಜನಾಧಿಕಾರಿ ಸುಧಾ ಭಾಸ್ಕರ್ ಮೇಲ್ವಿಚಾರಕರಾದ ಶಶಿಕಲಾ ಹಾಲು ಉತ್ಪಾದನಾ ಸಮಿತಿಯ ಸದಸ್ಯರು ಸಂಘದ ಸದಸ್ಯರು ಸೇವಾ ಪ್ರತಿನಿಧಿಗಳು ಹಾಜರಿದ್ದರು

Comments

Leave a Reply

Your email address will not be published. Required fields are marked *