ನಗರಸಭಾ ಕಾರ್ಯಾಲಯದಲ್ಲಿ ಅನಧಿಕೃತ ವ್ಯಕ್ತಿಗಳ ಹಾವಳಿ ತಪ್ಪಿಸುವಂತೆ ಕರ್ನಾಟಕ ನವನಿರ್ಮಾಣ ಸೇನೆ ಮನವಿ

ದೊಡ್ಡಬಳ್ಳಾಪುರ : ನಗರಸಭಾ ಕಾರ್ಯಾಲಯದಲ್ಲಿ ಅನಧಿಕೃತ ವ್ಯಕ್ತಿಗಳ ಕೈಯಲ್ಲಿ ಕೆಲಸ ಮಾಡಿಸಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ ನಗರಸಭೆಯ ಪೌರಾಯುಕ್ತರಿಗೆ ಕರ್ನಾಟಕ ನವನಿರ್ಮಾಣ ಸೇನೆ ವತಿಯಿಂದ ದೂರು ಸಲ್ಲಿಸಲಾಯಿತು.

 

ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷ ಮುರಳಿ ಮೋಹನ ಮಾತನಾಡಿ ದೊಡ್ಡಬಳ್ಳಾಪುರ ನಗರಸಭಾ ಕಾರ್ಯಾಲಯದಲ್ಲಿ ಅನಧಿಕೃತವಾಗಿ ನೇಮಕಾತಿಯಿಲ್ಲದ ವ್ಯಕ್ತಿಗಳ ಕೈಯಲ್ಲಿ ನಗರಸಭಾ ಸಿಬ್ಬಂದಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ ಇಂತಹ ವ್ಯಕ್ತಿಗಳಿಂದ ನಗರಸಭೆಯ ದಾಖಲೆಗಳು ಹೊರಗಿನ ಕೆಲವು ಆಯ್ದ ವ್ಯಕ್ತಿಗಳಿಗೆ ರವಾನೆಯಾಗುತ್ತಿದೆ ಇದಲ್ಲದೆ ಅನಧಿಕೃತ ನೌಕರರೆನಿಸಿಕೊಂಡವರು ಅಧಿಕಾರಿಗಳ ಏಜೆಂಟರಾಗಿ ಸಾರ್ವಜನಿಕ ಕೆಲಸಕ್ಕೆ ಲಂಚ ಪಡೆದು ನಗರಸಭಾ ಅಧಿಕಾರಿ/ ಸಿಬ್ಬಂದಿಗಳಿಗೆ ತಲುಪಿಸುವಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದರು.

 

ನಗರಸಭೆಯಲ್ಲಿ ದಿನ ಬೆಳಗಾಯಿತೆಂದರೆ ಖಾತೆ ಮಾಡಿಸಲು ಮಧ್ಯವರ್ತಿಗಳು ತುಂಬಿರುತ್ತಾರೆ ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು ಇದರ ಬಗ್ಗೆ ಇಲಾಖಾ ಅಧಿಕಾರಿಗಳು ಕಾಣದಂತೆ ಮೌನ ವಹಿಸಿದ್ದಾರೆ ಆದ್ದರಿಂದ ಪೌರಾಯುಕ್ತರು ಅನಧಿಕೃತ ನೌಕರರನ್ನು ತೆರವು ಹಾಗೂ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಲು ತುರ್ತುಕ್ರಮ ಕೈಗೊಳ್ಳ ಬೇಕೆಂದು ಮನವಿ ಮಾಡಿದ್ದೇವೆ ಎಂದರು

 

ಈ ಕುರಿತು ಪೌರಾಯುಕ್ತರು ಸೂಕ್ತ ಕ್ರಮ ಕೈಗೊಳ್ಳದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ನಗರಸಭಾ ಕಛೇರಿ ಮುಂದೆ ಧರಣಿ ಮಾಡಲಾಗುವುದೆಂದು ತಿಳಿಸಿದರು.

 

ಈ ಸಂದರ್ಭದಲ್ಲಿ ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವಿ ಮಂಜುನಾಥ,ರಾಜ್ಯ ಸಂಚಾಲಕ ಬಿ ನಟರಾಜ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *