ಫೆ. 24 ರಿಂದ ಅನಿರ್ಧಿಷ್ಟಾವಧಿವರೆಗೆ ಆಹೋರಾತ್ರಿ ಧರಣಿ : ಮೂಲಭೂತ ಹಕ್ಕುಗಳನ್ನು ಪಡೆಯಲು ಹೋರಾಟಕ್ಕೆ ಮುಂದಾದ ಶುಕ್ರೂಷಾಧಿಕಾರಿಗಳು

ಕರ್ನಾಟಕ : ನಮ್ಮ ಕುಂದುಕೊರತೆಗಳು ಹಾಗೂ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಈಗಾಗಲೇ ಹಲವಾರು ಬಾರಿ ಮನವಿಗಳನ್ನು, ಅಹವಾಲುಗಳನ್ನು ಕೊಟ್ಟಿದ್ದರೂ ಅವರು ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಆದ ಕಾರಣ ಫೆ. 24 ರಿಂದ ಅನಿರ್ಧಿಷ್ಟಾವಧಿವರೆಗೆ ಆಹೋರಾತ್ರಿ ಧರಣಿಗೆ ಕರೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆ ಶುಕ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಪಿ. ಎನ್. ರಾಧಾ ಸುರೇಶ್ ತಿಳಿಸಿದ್ದಾರೆ.

 

ಈ ಕುರಿತು ಮಾತನಾಡಿದ ಅವರು ನಾವು ಸುಮಾರು 15-20 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಅತೀ ಕಡಿಮೆ ವೇತನದಲ್ಲಿ ಯಾವುದೇ ಸೌಲಭ್ಯಗಳಿಲ್ಲದೇ ಖಾಯಂ ನೌಕರರಷ್ಟೇ ಇಲಾಖೆಯು ವಹಿಸಿದ ಎಲ್ಲಾ ಕೆಲಸಗಳನ್ನು ಚಾಚೂ ತಪ್ಪದೇ ನಿರ್ವಹಿಸುತ್ತಿದ್ದೇವೆ,”ಕೋವಿಡ್-19” ಸಂದರ್ಭದಲ್ಲೂ ಜೀವದ ಹಂಗು ತೊರೆದು ಸಾರ್ವಜನಿಕರಿಗೆ ಸೇವೆ ನೀಡಿದ್ದೇವೆ ಆದರೆ ನಮ್ಮ ಕುಂದು ಕೊರತೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ, ಈ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ “ಅನಿರ್ದೀಷ್ಟಾವದಿವರೆಗೆ ಆಹೋರಾತ್ರಿ ಧರಣಿಗೆ” ಕರೆ ನೀಡಿದ್ದು ಸನ್ಮಾನ್ಯ ರಾಜ್ಯಪಾಲರಿಗೆ “ಮುಷ್ಕರದ ಮುಂಗಡ ನೋಟಿಸು” ನೀಡಿದ್ದೇವೆ ಎಂದರು.

 

 

ಪ್ರಮುಖ ಬೇಡಿಕೆಗಳೇನು…??

1. ಗುತ್ತಿಗೆ ಶುಶೂಷಾಧಿಕಾರಿಗಳ “ಸೇವೆ ಖಾಯಂ” ಮಾಡಬೇಕು.

2. ಸುಪ್ರೀಂ ಕೋರ್ಟ್‌ ಆದೇಶದಂತೆ “ಸಮಾನ ಕೆಲಸಕ್ಕೆ ಸಮಾನ ವೇತನ” ನಿಗಧಿ ಪಡಿಸಬೇಕು.

ಕನಿಷ್ಠಪಕ್ಷ :- ಖಾಯಂ ಮಾಡುವವರೆಗೆ “ವೈಧ್ಯಕೀಯ ಶಿಕ್ಷಣ ಇಲಾಖೆಯಲ್ಲಿ” ಗುತ್ತಿಗೆ ಶುಶೂಷಾಧಿಕಾರಿಗಳಿಗೆ ವೇತನ ಕೊಟ್ಟಂತೆ ನಮಗೂ ಅದೇ ರೀತಿ ಕೊಡಬೇಕು.

3. ಮುಂಬರುವ “ವಿಶೇಷ ನೇರ ನೇಮಕಾತಿಯಲ್ಲಿ ಜೇಷ್ಠತೆಯ ಆಧಾರದ” ಮೇಲೆ ಕೃಪಾಂಕ ಮತ್ತು ವಯೋಮತಿ ಸಡಿಲಿಕೆ ನೀಡಬೇಕು.

ಈಗಾಗಲೇ ನಮ್ಮ ಇಲಾಖೆಯ ಗುತ್ತಿಗೆ ವೈದ್ಯಾಧಿಕಾರಿಗಳಿಗೆ “30 ಕೃಪಾಂಕ ಕೊಟ್ಟಂತೆ, ನಮಿಗೂ 1 ವರ್ಷದ ಗುತ್ತಿಗೆ ಸೇವೆಗೆ 3 ಕೃಪಾಂಕದಂತೆ ಗರಿಷ್ಠ 30 ಕೃಪಾಂಕ ನೀಡಬೇಕು.

[ 8 ವರ್ಷಗಳಿಂದ ನೇಮಕಾತಿ ಆಗಿರುವುದಿಲ್ಲ ].

4. “ಜಿಲ್ಲೆ ಯಿಂದ ಜಿಲ್ಲೆಗೆ ವರ್ಗಾವಣೆ ನೀಡಬೇಕು” ಇಲ್ಲಿಯವರೆಗೂ 2 ವರ್ಷಗಳಿಂದ ಜಿಲ್ಲೆಯಿಂದ ಜಿಲ್ಲೆಗೆ ವರ್ಗಾವಣೆ ಕೊಡಲು ಹಲವಾರು ಸಭೆಗಳು [EC Meeting] ಗಳನ್ನು ಮಾಡಿದ್ದಾರೆ. Policy ಮಾಡಿ ವರ್ಗಾವಣೆಗೆ ಅವಕಾಶ ಕಲ್ಪಿಸಬೇಕು.

5.ಶುಕ್ರೂಷಾಧಿಕಾರಿ ತರಬೇತಿ ಪಡೆದು “PHCO [2 ANM] ಎದುರು ಹುದ್ದೆಯಲ್ಲಿ” ಸೇವೆ ಮಾಡಿರುವ ಶುಶ್ರುಷಾಧಿಕಾರಿಗಳ ಆ ಸೇವೆಯನ್ನು ನೇಮಕಾತಿಯಲ್ಲಿ ಪರಿಗಣಿಸಬೇಕು.[ಈಗಾಗಲೇ ಆದೇಶ ಹೊರಡಿಸಿದ್ದಾರೆ ಆದರೆ ಜಾರಿಗೆ ಆಗಿಲ್ಲ]

 

ನಾವು ಸರ್ಕಾರಕ್ಕೆ ಹಾಗೂ ಸಾಮಾನ್ಯ ಜನರಿಗೆ ಸೇವೆ ಮಾಡುವಲ್ಲಿ ತೊಂದರೆ ಕೊಡಲು ಇಚ್ಚಿಸುವುದಿಲ್ಲ. ಆದರೆ ನಮ್ಮನ್ನ ಎಲ್ಲಾ ಸೌಲಭ್ಯಗಳಿಂದಲೂ ಕಡೆಗಣಿಸಿರುವುದರಿಂದ ನಮ್ಮ ಮೂಲಭೂತ ಹಕ್ಕುಗಳನ್ನು ಪಡೆಯಲು ನಾವು ಈ ಮುಷ್ಕರವನ್ನು ಮಾಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.

 

 

 

Comments

Leave a Reply

Your email address will not be published. Required fields are marked *