ದೊಡ್ಡಬಳ್ಳಾಪುರ : ESI ಆಸ್ಪತ್ರೆಗೆ ಚಾಲನೆ ನೀಡುವಂತೆ ಕನ್ನಡ ಜಾಗೃತಿ ವೇದಿಕೆ ಒತ್ತಾಯ

ದೊಡ್ಡಬಳ್ಳಾಪುರ : ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾ ಮತ್ತು ತಾಲ್ಲೂಕು ಘಟಕದ ವತಿಯಿಂದ ESI ಹಾಸ್ಪಿಟಲ್ ಶೀಘ್ರವಾಗಿ ಚಾಲನೆ ಸೇವೆ ಆರಂಭಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

 

ಈ ಕುರಿತು ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷರಾದ ಎಂ.ನಾಗರಾಜ್ ಮಾತನಾಡಿ ಈಗಾಗಲೇ ESI ಹಾಸ್ಪಿಟಲ್ ಕಟ್ಟಡ ಕಾಮಗಾರಿ ಮುಗಿದು ಎರಡು ವರ್ಷಗಳು ಕಳೆದರೂ ಸಹ ಈ ಭಾಗದ ಕಾರ್ಮಿಕರಿಗೆ ಸೇವೆ ಸಿಗುತ್ತಿಲ್ಲ.ಇಲ್ಲಿಯ ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ESI ಹಾಸ್ಪಿಟಲ್ ಗಾಗಿ ದೂರದ ಬೆಂಗಳೂರಿಗೆ ಹೋಗಬೇಕಾಗುತ್ತದೆ.ಅಲ್ಲದೆ ಈ ಭಾಗದಲ್ಲಿ ಸುಮಾರು 250ಕ್ಕೂ ಹೆಚ್ಚು ಕಾರ್ಖಾನೆಗಳಿವೆ, ಮತ್ತು ಸುಮಾರು 60 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಸ್ಥಳೀಯವಾಗಿ ಇಎಸ್ಐ ಆಸ್ಪತ್ರೆಯನ್ನು ಪ್ರಾರಂಭಿಸುವ ಮೂಲಕ ಕಾರ್ಮಿಕರಿಗೆ ಅನುಕೂಲ ಕಲ್ಪಿಸಬೇಕೆಂದು ತಿಳಿಸಿದರು.

ನಮ್ಮ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶವು ಏಷ್ಯಾದಲ್ಲಿ ಎರಡನೇ ಸ್ಥಾನವನ್ನು ಪಡೆದಿರುವುದು ಹೆಮ್ಮೆಯ ವಿಷಯ.. ಆದರೆ ಇಲ್ಲಿನ ಮೂಲಭೂತ ಸೌಕರ್ಯಗಳನ್ನು ಕೇಳುವವರು ಯಾರು ಇಲ್ಲ, ಇಲ್ಲಿನ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವವರು ಯಾರು ಇಲ್ಲದಂತಾಗಿದೆ.. ಅಲ್ಲದೆ ಈ ಭಾಗದಲ್ಲಿ ಅತಿ ಹೆಚ್ಚು ಟ್ಯಾಕ್ಸ್ ಸಂದಾಯ ಆಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

 

ನಂತರ ಮಾತನಾಡಿದ ತಾಲೂಕು ಅಧ್ಯಕ್ಷರಾದ ಶಶಿಧರ್ ESI ಹಾಸ್ಪಿಟಲ್ ಸೇವೆ ಪ್ರತಿಯೊಬ್ಬ ಕಾರ್ಮಿಕರಿಗೂ ಅತಿ ಮುಖ್ಯವಾಗಿದೆ.. ಏಕೆಂದರೆ ಈ ಭಾಗದಲ್ಲಿ ಹೆಚ್ಚಾಗಿ ರೈತಾಪಿ ಜನ ವಾಸಿಸುತ್ತಾರೆ.. ಇವರ ಮಕ್ಕಳು ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ, ಆರೋಗ್ಯ ಸಂಬಂಧಿತ ಸಮಸ್ಯೆಗಳು ಎದುರಾದಲ್ಲಿ ಕಾರ್ಮಿಕರು ಬೆಂಗಳೂರಿಗೆ ಹೋಗಬೇಕಾಗುತ್ತದೆ ನಮ್ಮಲ್ಲೇ ಆಸ್ಪತ್ರೆ ಕಟ್ಟಡ ನಿರ್ಮಾಣಗೊಂಡಿದ್ದು ಇನ್ನು ಪ್ರಾರಂಭ ಗೊಳ್ಳದೆ ಇರುವುದು ವಿಪರ್ಯಾಸವೇ ಸರಿ ಕೂಡಲೇ ಮಾನ್ಯ ಜಿಲ್ಲಾ ಮತ್ತು ತಾಲೂಕು ಆಡಳಿತ ಹಾಗೂ ಸ್ಥಳೀಯ ಶಾಸಕರು ಇಎಸ್ಐ ಆಸ್ಪತ್ರೆಯನ್ನು ಪ್ರಾರಂಭಿಸುವ ಮೂಲಕ ಕಾರ್ಮಿಕರಿಗೆ ಅನುಕೂಲ ಕಲ್ಪಿಸಬೇಕು, ತಕ್ಷಣ ESi ಹಾಸ್ಪಿಟಲ ಸೇವೆ ಆರಂಭವಾಗಬೇಕು.. ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಅಗ್ನಿ ವೆಂಕಟೇಶ್ ಮಾತನಾಡಿ ನಾವು ಈ ದಿನ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮತ್ತು ನಮ್ಮ ದೊಡ್ಡಬಳ್ಳಾಪುರ ತಾಲೂಕಿನ ಶಾಸಕರಿಗೆ ಮನವಿ ಪತ್ರವನ್ನು ಸಲ್ಲಿಸಿದ್ದೇವೆ.. ಅತಿ ಶೀಘ್ರದಲ್ಲೇ ಇಎಸ್ಐ ಹಾಸ್ಪಿಟಲ್ ಸೇವೆ ಆರಂಭಿಸಬೇಕು..ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಆರಂಭಿಸಬೇಕಾಗುತ್ತದೆ ಎಂದು ಹೇಳಿದರು

 

ಈ ಸಂದರ್ಭದಲ್ಲಿ ಕನ್ನಡ ಜಾಗೃತಿ ವೇದಿಕೆಯ ಕಾರ್ಮಿಕ ಘಟಕದ ಅಧ್ಯಕ್ಷರಾದ ಗುರುಪ್ರಸಾದ್, ಜಿಲ್ಲಾ ಕಾರ್ಮಿಕ ಘಟಕದ ಉಪಾಧ್ಯಕ್ಷರಾದ ಸುರೇಶ್ ಸಿಂಗಂ, ತಾಲೂಕು ಉಪಾಧ್ಯಕ್ಷರಾದ ಮಹದೇವ್, ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್, ಶಿವಕುಮಾರ ಸ್ವಾಮಿ, ಮಂಜುನಾಥ್ ನಿಜಗಲ್ ಸೇರಿದಂತೆ ಹಲವು ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.

Comments

Leave a Reply

Your email address will not be published. Required fields are marked *