ಘಾಟಿ ಸುಬ್ರಹ್ಮಣ್ಯ : ಹುಂಡಿ ಎಣಿಕೆ ಕಾರ್ಯ ಮುಕ್ತಾಯ : ಸಂಗ್ರಹವಾದ ಒಟ್ಟು ಮೊತ್ತ ಎಷ್ಟು.. ಗೊತ್ತಾ ???

ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ದ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಹುಂಡಿ ಏಣಿಕೆ ಕಾರ್ಯ ಮುಕ್ತಾಯವಾಗಿದ್ದು ಒಟ್ಟು 59,28,876 ಮೊತ್ತದ ಕಾಣಿಕೆ ಸಂಗ್ರಹವಾಗಿದೆ.

 

 

ಭಕ್ತಾದಿಗಳು 63, 000(1kg 400ಗ್ರಾಂ ) ರೂಗಳ ಮೌಲ್ಯದ ಬೆಳ್ಳಿ, 1,57,000( 19.500 ಮಿಲಿ ) ರೂಪಾಯಿಗಳ ಮೌಲ್ಯದ ಬಂಗಾರವನ್ನು ಕಾಣಿಕೆ ರೂಪದಲ್ಲಿ ದೇವಾಲಯದ ಹುಂಡಿಯಲ್ಲಿ ಹಾಕಿದ್ದಾರೆ. ದೇವಾಲಯಕ್ಕೆ ಆಗಮಿಸಿದ ಭಕ್ತಾದಿಗಳ ಸಮ್ಮುಖದಲ್ಲಿ ಹುಂಡಿ ಎಣಿಕೆ ಮಾಡಲಾಯಿತು.

 

ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯದರ್ಶಿ ಎಂ ನಾರಾಯಣಸ್ವಾಮಿ, ಪ್ರಧಾನ ಅರ್ಚಕರು ಶ್ರೀನಿಧಿ, ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಜೆ.ಎನ್. ರಂಗಪ್ಪ,ಕೆ. ಎಸ್. ರವಿ, ಲಕ್ಷ್ಮ ನಾಯಕ್, ಆರ್ ವಿ ಮಹೇಶ್ ಕುಮಾರ್, ಹೇಮಲತಾ ರಮೇಶ್ ಹಾಗೂ ಇಂಡಿಯನ್ ಓವರ್ಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಇಲಾಖೆ ಸಿಬ್ಬಂದಿ, ದೇವಾಲಯದ ಸಿಬ್ಬಂದಿ ಮತ್ತು ಭಕ್ತಾದಿಗಳು ಹಾಜರಿದ್ದರು.

Comments

Leave a Reply

Your email address will not be published. Required fields are marked *