ಶಾಲೆಯ ಆವರಣದಲ್ಲಿ ಸಸಿ ನೆಟ್ಟು “ಹಸಿರು ಉಳಿಸುವಂತೆ ಯುವ ಸಮುದಾಯಕ್ಕೆ ಮನವಿ ಮಾಡಿದ ತೂಬಗೆರೆ ಯೂಥ್ ಕಾಂಗ್ರೆಸ್

ತೂಬಗೆರೆ ಯೂಥ್ ಕಾಂಗ್ರೆಸ್ ವತಿಯಿಂದ ಹೋಬಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಸಸಿ ನೆಡುವ ಮೂಲಕ ಆಚರಿಸಲಾಯಿತು.

ಪರಿಸರ ಸಂರಕ್ಷಣೆ ನಮ್ಮೆಲರ ಹೊಣೆಯಾಗದ್ದು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಯುವ ಸಮುದಾಯ ಮುಂದಾಗಿದೆ

 

ಹೌದು ತೂಬಗೆರೆ ಹೋಬಳಿಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ತೂಬಗೆರೆ ಯೂಥ್ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಸದಸ್ಯರು ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಯೂಥ್ ಕಾಂಗ್ರೆಸ್ ಕಾರ್ಯದರ್ಶಿಗಳಾದ ಗಿರೀಶ್ ಮಾತನಾಡಿ ಪ್ರತಿಫಲ ಬಯಸದೆ ನಮಗೆ ಅವಶ್ಯಕವಾದ ಶುದ್ಧ ಗಾಳಿ, ತಂಪಾದ ವಾತಾವರಣ ನೀಡುವ ಪರಿಸರದ ಸಂರಕ್ಷಣೆ ಕಾರ್ಯ ಪ್ರತಿನಿತ್ಯ ನೆಡೆಯಬೇಕಿದೆ, ನಮ್ಮ ತೂಬಗೆರೆ ಯುವ ಸಮುದಾಯವು ಇದು ಸಂಕೇತಿಕವಾಗಿ ಸಸಿ ನೆಡುವ ಮೂಲಕ ಸಮೃದ್ಧ ಪರಿಸರ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ ಎಂಬುದನ್ನು ತಿಳಿಸುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.

 

ತೂಬಗೆರೆ ಹೋಬಳಿ ಅಧ್ಯಕ್ಷರಾದ ನರಸಿಂಹಮೂರ್ತಿ ಮಾತನಾಡಿ ಇಂದಿನ ಯುವ ಪೀಳಿಗೆ ಮೋಜು ಮಸ್ತಿಯ ಹೆಸರಿನಲ್ಲಿ ಪರಿಸರ ಹಾಳು ಮಾಡಲು ಮುಂದಾಗಿದೆ ಯುವ ಸಮುದಾಯದ ಈ ವರ್ತನೆ ಬದಲಾಗಬೇಕು ಈ ನಿಟ್ಟಿನಲ್ಲಿ ನಮ್ಮ ತೂಬಗೆರೆ ಯೂಥ್ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಸದಸ್ಯರು ಸಸಿ ನೆಡುವ ಮೂಲಕ ಯುವ ಸಮುದಾಯದ ಜಾಗೃತಿಗೆ ಮುಂದಾಗಿದ್ದೇವೆ . ಇಂದಿನ ನಮ್ಮ ಶ್ರಮ ಮುಂದೆ ನಮ್ಮ ಪೀಳಿಗೆಗೆ ವರದಾನವಾಗಲಿ ಪ್ರತಿ ಯುವಕ ಯುವತಿಯರು ತಮ್ಮ ಕೈಲಾದಷ್ಟು ಸಸಿಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರದ ಸಮತೋಲನ ಕಾಪಾಡುವಲ್ಲಿ ಹಾಗೂ ಉತ್ತಮ ಪರಿಸರ ನಿರ್ಮಾಣಕ್ಕೆ ಮುಂದಾಗಬೇಕು ಅಲ್ಲದೇ ವಿಶ್ವ ಪರಿಸರ ದಿನಾಚರಣೆಯಂದು ಪರಿಸರವನ್ನು ಉಳಿಸುವ ಹಾಗೂ ಬೆಳೆಸುವ ಶಪಥವನ್ನು ಯುವ ಪೀಳಿಗೆ ಮಾಡಬೇಕಿದೆ ಎಂದರು

ಈ ಸಂದರ್ಭದಲ್ಲಿ ದೇವನಹಳ್ಳಿ ಯೂಥ್ ಕಾಂಗ್ರೆಸ್ ಅಧ್ಯಕ್ಷರಾದ ಸಾಗರ್, ತೂಬಗೆರೆ ಹೋಬಳಿ ಅಧ್ಯಕ್ಷರಾದ ನರಸಿಂಹಮೂರ್ತಿ, ದೇವನಹಳ್ಳಿ ಬ್ಲಾಕ್ ಅಧ್ಯಕ್ಷರಾದ ಪೃಥ್ವಿ, ವಿಜಯಪುರ ಬ್ಲಾಕ್ ಅಧ್ಯಕ್ಷರಾದ ಭಾನುಚಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನರ್ವಿಜ್ ಹಾಗೂ ಗಿರೀಶ್, ಉಪಾಧ್ಯಕ್ಷರಾದ ವೆಂಕಟೇಶ್, ಇಂಧದ್, ಕಾರ್ಯದರ್ಶಿ ರಾಜೇಶ್, ಹಾಗೂ ಯುವ ನಾಯಕರಾದ ಪುಟ್ಟು, ಚಂದ್ರು, ಮುನಿರಾಜ, ತೇಜಸ್, ಕಿರಣ್, ನಿತಿನ್, ಧನುಷ್,ಆಫ್ಫಾನ್ ಸೇರಿದಂತೆ ಹಲವು ಯುವಕರು ಹಾಜರಿದ್ದರು.

Comments

Leave a Reply

Your email address will not be published. Required fields are marked *