ಮಾವಿಗೆ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ:- ಕೆಹೆಚ್.ಮುನಿಯಪ್ಪ ಮನವಿ

ಬೆಂಗಳೂರು: ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್.ಮುನಿಯಪ್ಪ ರವರು ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರಕ್ಕೆ ಒತ್ತಾಯಿಸಿದರು.

 

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಮಾವಿನ ಹಣ್ಣಿಗೆ ಏಷ್ಯಾ ಖಂಡದಲ್ಲೇ ಅತಿ ಹೆಚ್ಚು ಪ್ರಸಿದ್ದಿ ಯಾಗಿದ್ದು ರೈತರು ನಿರ್ದಿಷ್ಟ ಬೆಲೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಈಗಾಗಲೇ ನೆರೆಯ ಆಂದ್ರ ಪ್ರದೇಶ ಸರ್ಕಾರವು ನಮ್ಮ ತೋತಾಪುರಿ ಮಾವಿನ ಹಣ್ಣಿನ ಮಾರಾಟಕ್ಕೆ ನಿರ್ಬಂಧವಿದಿಸಿದ್ದು ಮಾವಿಗೆ ಬೆಲೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ.

 

ಈಗಾಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಆಂದ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ರವರಿಗೆ ಪತ್ರ ಬರೆದಿದ್ದಾರೆ ನಮ್ಮ ಸರ್ಕಾರವು ರೈತರ ಪರವಾಗಿದ್ದು ರೈತರು ಬೆಲೆದ ಬೆಲೆಗೆ ಸಹಕಾರಿಯಾಗಲು ಬೆಂಬೆಲ ಬೆಲೆಯನ್ನು ನಿಗದಿಪಡಿಸಲು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು.

 

ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್ ,ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವರಾದ ಎಂ.ಸಿ ಸುಧಾಕರ್ ಹಾಗೂ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರವರು ದ್ವನಿಗೂಡಿಸಿದರು.

Comments

Leave a Reply

Your email address will not be published. Required fields are marked *