ನಗರದ ಡಿ ಕ್ರಾಸ್ ಬಳಿ ಯುವಕನ ಕೊಲೆ

ದೊಡ್ಡಬಳ್ಳಾಪುರ : ಯುವಕನನ್ನು ಮಾರಾಕಾಸ್ತ್ರಗಳಿಂದ ಹತ್ಯೆಗೈದು ಪರಾರಿಯಾಗಿರುವ ಘಟನೆ ನಗರದ ಡಿ ಕ್ರಾಸ್ ಬಳಿ ಸಂಭವಿಸಿದೆ.

 

ಇಂದು ರಾತ್ರಿ ಸುಮಾರು 10 :20ರ ಸಮಯದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಯುವಕನ ಕೊಲೆಯಾಗಿದೆ, ಮೃತ ಯುವಕ ಜಾಲಪ್ಪ ಕಾಲೇಜ್ ಬಳಿಯ ನಿವಾಸಿ ಎಂದು ತಿಳಿದು ಬಂದಿದೆ.

 

 

ಸ್ಥಳಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಅಂಬರೀಷ್ ಗೌಡ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಹತ್ಯೆಗೈದು ಪರಾರಿಯಾಗಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರ ತಂಡ ಮುಂದಾಗಿದ್ದು ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…

Comments

Leave a Reply

Your email address will not be published. Required fields are marked *