ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ : ಬೈಕ್‍ ಸವಾರರಿಗೆ 35 ಹೆಲ್ಮೆಟ್ ವಿತರಣೆ

ಚಿಕ್ಕಮಗಳೂರು ಜಿಲ್ಲೆ : ನರಸಿಂಹರಾಜಪುರ ತಾಲ್ಲೂಕಿನ ಎನ್ ಆರ್ (NR)ಪುರ ಪೊಲೀಸ್ ಠಾಣೆ ಮುಂಭಾಗ ರಸ್ತೆ ಸುರಕ್ಷತಾ ಜಾಗೃತಿ ಮೂಡಿಸುವ ಸಲುವಾಗಿ ಬೈಕ್ ಸವಾರರಿಗೆ ಹೆಲ್ಮೆಟ್ ವಿತರಣೆ ಮಾರಲಾಯಿತು.

 

ಸಿ ಜೆ (CJ) & ಜೆ ಎಂ ಎಫ್ ಸಿ (JMFC) ನ್ಯಾಯಾಧೀಶರಾದ ರಘುನಾಥ್ ಗೌಡ ಹಾಗೂ ಜೀತು ಆರ್.ಎಸ್ ರವರ ನೇತೃತ್ವದಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ನಡೆಯಿತು ಈ ವೇಳೆ ಬೈಕ್ ಸವಾರರಿಗೆ ಹೆಲ್ಮೆಟ್ ವಿತರಣೆ ಮಾಡಲಾಯಿತು

ಈ ವೇಳೆ ಮಾತನಾಡಿದ ಅವರು ರಸ್ತೆ ಅಪಘಾತವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ರಸ್ತೆ ಜಾಗೃತಿ ಕಾರ್ಯಕ್ರಮ ಮಾಡಲಾಗಿದೆ. ಬೈಕ್ ಸವಾರರು ರಸ್ತೆ ನಿಯಮಗಳನ್ನು ಪಾಲನೆಮಾಡಬೇಕು. ಇತ್ತೀಚಿನ ಅಪಘಾತಗಳಲ್ಲಿ ಹೆಲ್ಮೆಟ್ ಧರಿಸದೆ ಬೈಕ್ ಸವಾರರು ಸಾವನಪ್ಪುತ್ತಿದ್ದಾರೆ. ಹೆಲ್ಮೆಟ್ ಧರಿಸುವುದರಿಂದ ಅಪಘಾತ ಸಮಯದಲ್ಲಿ ಪ್ರಾಣಪಾಯದಿಂದ ಪಾರಾಗಬಹುದಾಗಿದೆ ಎಂದರು.

 

ನರಸಿಂಹರಾಜಪುರ ಪೊಲೀಸ್ ಇಲಾಖೆ ಸಹಕಾರದೊಂದಿಗೆ CJ & JMFC ಹೆಲ್ಮೆಟ್ ವಿತರಣೆ ಮಾಡಲಾಗಿದೆ

ಕಾರ್ಯಕ್ರಮದಲ್ಲಿ N.R ಪುರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಗುರುಕಾಮಥ್, ಎನ್ ಆರ್ ಪುರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಾಜರಿದ್ದರು.

 

Comments

Leave a Reply

Your email address will not be published. Required fields are marked *