ದೊಡ್ಡಬಳ್ಳಾಪುರ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ : ಬಂದ್ ಗೆ ಬೆಂಬಲ ನೀಡದ ನೇಕಾರ ಕೂಲಿ ಕಾರ್ಮಿಕರು 

ವಿಜಯಮಿತ್ರ ದೊಡ್ಡಬಳ್ಳಾಪುರ : ನೇಕಾರರ ಸಂಘಟನೆಗಳು (ಜ 05) ಸೋಮವಾರ ಕರೆ ನೀಡಿದ್ದ ದೊಡ್ಡಬಳ್ಳಾಪುರ ಬಂದ್‌ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ.

ಸೂರತ್‌ನಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿರುವ ಸೀರೆಗಳ ಹಾವಳಿಯಿಂದ ನೇಕಾರಿಕೆ ಉದ್ಯಮದಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಸರಿಪಡಿಸುವಂತೆ ಆಗ್ರಹಿಸಿ ಸೋಮವಾರ ವಿವಿಧ ನೇಕಾರ ಸಂಘಟನೆಗಳ ವತಿಯಿಂದ ಬೆಳಿಗ್ಗೆ 6ಗಂಟೆಯಿಂದ ಸಂಜೆ 6 ಗಂಟೆಯವರೆಗೆಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ವಿವಿಧ ನೇಕಾರ ಸಂಘಟನೆಗಳ ಮುಖಂಡರು, ಬೈಕ್ ಜಾಥಾ ಮೂಲಕ ಅಂಗಡಿ ಅಂಗಡಿಗಳಿಗೆ ತೆರಳಿ ನೇಕಾರರ ಸಮಸ್ಯೆಗಳ ಬಗ್ಗೆ ತಿಳಿಸಿ ಬಂದ್‌ಗೆ ಬೆಂಬಲ್ ನೀಡುವಂತೆ ಮನವಿ ಮಾಡಿದ್ದರು. ಆದರೆ ನಗರದ ಕೆಲವೆಡೆ ಅಂಗಡಿಗಳು ಮಾತ್ರ ಬಂದ್ ಆಗಿದ್ದು, ಉಳಿದಂತೆ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಬಲ ನೀಡದ ಕೂಲಿ ಕಾರ್ಮಿಕರು

ನೇಕಾರರ ಸಂಘಟನೆಗಳು ಕರೆ ನೀಡಿದ್ದ ದೊಡ್ಡಬಳ್ಳಾಪುರ ಬಂದ್‌ಗೆ ಕೆಲ ಕೂಲಿ ಕಾರ್ಮಿಕರು ಬೆಂಬಲವನ್ನು ನೀಡದೆ ಹೊರಗುಳಿದ್ದಿದ್ದು, ತಾಲೂಕಿನಲ್ಲಿ ಹೊಲಸಿಗತಾಲೂಕಿನಲ್ಲಿ ವಲಸಿಗ ಕಾರ್ಮಿಕರ ಹಾವಳಿ ಕಾರ್ಮಿಕರ ಹೆಚ್ಚಾಗಿದ್ದು ಸ್ಥಳೀಯ ಕಾರ್ಮಿಕರ ಪರಿಸ್ಥಿತಿ ಹದಗೆಟ್ಟಿದೆ ಮಾಲೀಕರು ತಮ್ಮ ಸಮಸ್ಯಗಳನ್ನು ಆಲಿಸುವಂತೆ ಕಾರ್ಮಿಕರು ಆಗ್ರಹಿಸಿದರು.

ಅಂಗಡಿ ಮುಗ್ಗಟ್ಟು ಬಂದ್ 

ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿರುವ ದೊಡ್ಡಬಳ್ಳಾಪುರ ನಗರದಲ್ಲಿ ನೇಕಾರರ ಸಂಘಟನೆಗಳು ನೀಡಿದ ಬಂದ್‌ಗೆ ಸೋಮವಾರ ಬೆಳಿಗ್ಗೆ ಕೆಲ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವ ಮೂಲಕ ಬೆಂಬಲ ಸೂಚಿಸಿದ್ದರು. ಇನ್ನೂ ಕೆಲ ಅಂಗಡಿಗಳು ಮಧ್ಯಾಹ್ನದ ವೇಳೆ ಮತ್ತೆ ತೆರೆದವು. ಬೆಳಿಗ್ಗೆ ಬಂದ್‌ಗೆ ಬೆಂಬಲ ನೀಡಿ ಮುಚ್ಚಲಾಗಿದ್ದ ಬೀದಿ ಬದಿ ವ್ಯಾಪಾರವೂ ಕೂಡ ಮಧ್ಯಾಹ್ನದ ಆರಂಭವಾಗಿತ್ತು. ನಗರದ ಕೃಷ್ಣರಾಜ ಮಾರುಕಟ್ಟೆಗಳಲ್ಲಿ ಕೆಲ ಅಂಗಡಿಗಳು ಕೂಡ ಬಂದ್ ಆಗಿದ್ದು, ಮಾರುಕಟ್ಟೆಯಲ್ಲಿ ಜನಸಂಖ್ಯೆ ವಿರಳವಾಗಿತ್ತು. ಇದನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ಜನಜೀವನವೂ ಸಾಮಾನ್ಯದಂತೆಯೇ ಇತ್ತು. ಸಾರಿಗೆ ವ್ಯವಸ್ಥೆ ಕೂಡ ಎಂದಿನಂತೆಯೇ ಇತ್ತು. ಯಾವುದೇ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರಲಿಲ್ಲ.

ನೇಯ್ಗೆ ಉದ್ಯಮದ ಬಿಕ್ಕಟ್ಟು ಪರಿಹರಿಸಲು ಸರ್ಕಾರ ತಕ್ಷಣ ಮಧ್ಯಪ್ರವೇಶ ಮಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ, ತಾಲೂಕು ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತದೆ. ಜತೆಗೆ ಮುಖ್ಯಮಂತ್ರಿಗಳು, ಕೇಂದ್ರ ಜವಳಿ ಸಚಿವರನ್ನು ಭೇಟಿ ಮಾಡಿ ಸಮಸ್ಯೆ ಬಗ್ಗೆ ತಿಳಿಸಲು ತೀರ್ಮಾನಿಸಲಾಗಿದೆ ಎಂದು ನೇಕಾರ ಮುಖಂಡರು ತಿಳಿಸಿದ್ದಾರೆ.

 

 

Comments

Leave a Reply

Your email address will not be published. Required fields are marked *