ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಸ್ವಾಮಿ ವಿವೇಕಾನಂದ ಸೇವಾಭಿವೃದ್ಧಿ ಟ್ರಸ್ಟ್ ವತಿಯಿಂದ ಅನ್ನದಾಸೋಹ ಮತ್ತು ಹೊದಿಕೆ ವಿತರಣಾ ಕಾರ್ಯಕ್ರಮ

ದೊಡ್ಡಬಳ್ಳಾಪುರ : ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಹಾಗೂ ವಿವೇಕಾನಂದರ ಜಯಂತೋತ್ಸವದ ಅಂಗವಾಗಿ ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಸ್ವಾಮಿ ವಿವೇಕಾನಂದ ಸೇವಾಭಿವೃದ್ದಿ ಟ್ರಸ್ಟ್ ವತಿಯಿಂದ ನಿರ್ಗತಿಕ ಕಡುಬಡವರಿಗೆ ಅನ್ನದಾಸೋಹ ಮತ್ತು ಉಚಿತ ಹೊದಿಕೆ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು

ದೊಡ್ಡಬಳ್ಳಾಪುರ ತಾಲ್ಲೂಕಿನ ದರ್ಗಜೋಗಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸತತವಾಗಿ 1387 ದಿನಗಳಿಂದ ಅನ್ನದಾಸೋಹ ಕಾರ್ಯಕ್ರಮವನ್ನು ದಾನಿಗಳ ನೆರವಿನಿಂದ ಮಲ್ಲೇಶ್ ಮತ್ತು ತಂಡ ನಡೆಸುತ್ತಿದ್ದು ಇಂದು ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಸ್ವಾಮಿ ವಿವೇಕಾನಂದ ಸೇವಾಭೀವೃದ್ದಿ ಟ್ರಸ್ಟ್ ವತಿಯಿಂದ ವಯೋವೃದ್ಧರಿಗೆ ಹೊದಿಕೆ ವಿತರಣೆ ಮಾಡಲಾಯಿತು

 

ಈ ಸಂದರ್ಭದಲ್ಲಿ ಟ್ರಸ್ಟ್ ನ ಉಪಾಧ್ಯಕ್ಷ ಕೆ ಎಸ್ ನರಸಿಂಹಮೂರ್ತಿ ಮಾತನಾಡಿ ನಮ್ಮ ಕೈಲಾದ ಅಳಿಲು ಸೇವೆಯನ್ನು ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಸ್ವಾಮಿ ವಿವೇಕಾನಂದರ ಜಯಂತೋತ್ಸವ ಸವಿ ನೆನಪಿನಲ್ಲಿ ಮಲ್ಲೇಶ್ ಸಹಕಾರದೊಂದಿಗೆ ನಿರಾಶ್ರಿತ ಕಡುಬಡವರಿಗೆ ಅನ್ನದಾಸೋಹದ ಜೊತೆಗೆ ಹೊದಿಕೆ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು

 

ಕಾರ್ಯಕ್ರಮದ ಆಯೋಜಕರಾದ ಅನ್ನದಾಸೋಹಿ ಮಲ್ಲೇಶ್ ಮಾತನಾಡಿ ಸತತವಾಗಿ 1387ನೇ ಕಾಲಿಟ್ಟಿರುವ ಅನ್ನ ದಾಸೋಹ ಕಾರ್ಯಕ್ರಮ ದಾನಿಗಳ ನೆರವಿನಿಂದ ಸಾಗುತ್ತಿದ್ದು ನಿರಂತರ ಬಡವರ ಹಸಿದವರ ಹೊಟ್ಟೆ ತುಂಬಿಸುವ ಕಾರ್ಯ ನಡೆಯುತ್ತಿದೆ ಎಂದು ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಸ್ವಾಮಿ ವಿವೇಕಾನಂದರ ಜಯಂತೋತ್ಸವದ ಅಂಗವಾಗಿ ವೃದ್ಧರಿಗೆ ಹೊದಿಕೆ ವಿತರಣೆ ಮಾಡಲಾಗಿದೆ ಎಂ ವಿಶ್ವೇಶ್ವರಯ್ಯ ಹಾಗೂ ಸ್ವಾಮಿ ವಿವೇಕಾನಂದ ಸೇವಾಭಿವೃದ್ದಿ ಟ್ರಸ್ಟ್ ನ ಎಲ್ಲಾ ಪದಾಧಿಕಾರಿಗಳಿಗೆ ನಮ್ಮ ಅನ್ನದಾಸೋಹ ಟ್ರಸ್ಟ್ ವತಿಯಿಂದ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದರು

 

ಈ ಸಂದರ್ಭದಲ್ಲಿ ಎಂ ವಿಶ್ವೇಶ್ವರಯ್ಯ ಹಾಗೂ ಸ್ವಾಮಿ ವಿವೇಕಾನಂದ ಸೇವಾಭಿವೃದ್ದಿ ಟ್ರಸ್ಟ್ ನ ಅಧ್ಯಕ್ಷರಾದ ನರಸಿಂಹ ಮೂರ್ತಿ ಉಪಾಧ್ಯಕ್ಷರಾದ ಕೆ ಎಸ್ ನರಸಿಂಹಮೂರ್ತಿ ಹಾಗೂ ಟ್ರಸ್ಟ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು

Comments

Leave a Reply

Your email address will not be published. Required fields are marked *