ಕೆ ಎಸ್ ಆರ್ ಟಿ ಸಿ ಬಸ್ಸಿಗೆ ಓರ್ವ ಬಲಿ : ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವದಲ್ಲಿ ಘಟನೆ

ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವದ ಹಿನ್ನಲೆ ದೇವಾಲಯಕ್ಕೆ ಅಪಾರ ಪ್ರಮಾಣದ ಭಕ್ತಗಣ ಹರಿದುಬರುತ್ತಿದೆ.

 

ಬಸ್ ಚಾಲನೆಯಲ್ಲಿ ಇದ್ದಾಗಲೇ ತಾರಾತುರಿಯಲ್ಲಿ ಬಸ್ ಯಿಂದ ಇಳಿಯಲು ಮುಂದಾದ ವ್ಯಕ್ತಿ ಬಸ್ಸಿನ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಾಪಟ್ಟಿರುವ ಘಟನೆ ಘಾಟಿಸುಬ್ರಮಣ್ಯ ಕ್ಷೇತ್ರದ ಬಳಿಯ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್ ಸಮೀಪದಲ್ಲಿ ಸಂಭವಿಸಿದೆ.

 

 

ಹೌದು ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಭಕ್ತನ ಮೇಲೆ ಹರಿದ ಪರಿಣಾಮ ಕಾಲಿಗೆ ಗಂಭೀರ ಗಾಯವಾಗಿದ್ದು ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಯಿತು ಆದರೆ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಗೆ ಚಿಕಿತ್ಸೆ ಪಾಲಿಕಾರಿಯಾಗದೆ ಸಾವನಪ್ಪಿದ್ದಾನೆ ಎಂದು ಮೂಲಗಳು ತಿಳಿಸುವೆ

 

ಮೃತ ವ್ಯಕ್ತಿಯ ಗುರುತು ಇನ್ನು ಪತ್ತೆ ಆಗಿಲ್ಲ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಲು ಪೊಲೀಸ್ ಮುಂದಾಗಿದ್ದಾರೆ.

Comments

Leave a Reply

Your email address will not be published. Required fields are marked *