ದೊಡ್ಡಬಳ್ಳಾಪುರ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ : ಸಚಿವ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ಧಾಳಿ

Doddaballapura : ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರಿಯತೆಯನ್ನು ಸಹಿಸದ ಬಿಜೆಪಿಯ ಸಂಸದ ಅನಂತ ಕುಮಾರ್ ಹೆಗಡೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಕುರಿತು ಬಾಯಿಗೆ ಬಂದಂತೆ ತಮ್ಮ ನಾಲಿಗೆಯನ್ನು ಹರಿಬಿಡುತ್ತೀದ್ದಾರೆ ಈ ಕೂಡಲೇ ಅವರು ರಾಜ್ಯದ ಜನತೆಯ ಸಮ್ಮುಖದಲ್ಲಿ ಕ್ಷಮೆಯಾಚಿಸಬೇಕು ಎಂದು ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ
ಆಕ್ರೋಶ ವ್ಯಕ್ತಪಡಿಸಿದರು.


ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನಂತ್ ಕುಮಾರ್ ಹೆಗಡೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ದೊಡ್ಡಬಳ್ಳಾಪುರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ತಾಲ್ಲೂಕು ಕಛೇರಿವೃತ್ತದಲ್ಲಿ ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಿ ಸಚಿವ ಅನಂತ್ ಕುಮಾರ್ ಹೆಗಡೆ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಪ್ರತಿಕೃತಿ ದಹಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನ ಜನಪ್ರಿಯತೆಯನ್ನ ಸಹಿಸದ ಕೋಮುವಾದಿಗಳು ರಾಜ್ಯದಲ್ಲಿ ಗಲಭೆಗಳ ಸೃಷ್ಟಿಸಲು ಪ್ರಯತ್ನ ಮಾಡುವ ಹುನ್ನಾರ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳಿಂದಾಗಿ ಜನಪ್ರಿಯತೆಯನ್ನು ಪಡೆದವರು, ತಾರತಮ್ಯವಿಲ್ಲದೆ ಎಲ್ಲಾ ವರ್ಗದ ಜನರಿಗೂ ಸ್ಪಂದಿಸಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ ಇಂತಹವರ ವಿರುದ್ದ ನಾಲಿಗೆ ಹರಿಬಿಟ್ಟು ತಮ್ಮ ಸಣ್ಣತನದ ಪ್ರದರ್ಶನ ಮಾಡುತ್ತೀರುವ ಅನಂತ್ ಕುಮಾರ್ ಹೆಗಡೆ ಹಿರಿಯರನ್ನು ಗೌರವಿಸುವ ಸಭ್ಯತೆ ಕಲಿಯಬೇಕಿದೆ ಇಂತಹ ಮನಸ್ಥಿತಿಯುಳ್ಳ ನಾಯಕರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರು ತಕ್ಕಪಾಠ ಕಲಿಸಲಿದ್ದಾರೆ , ಇಂತಹ ಸಚಿವರನ್ನ ಕೇಂದ್ರ ಸರ್ಕಾರವು ತಮ್ಮ ಸಂಪುಟದಿಂದ ವಜಾಗೊಳಿಸಬೇಕು ಎಂದರು.

ಸಿಎಂ ಸಿದ್ದರಾಮಯ್ಯರವರು ಜನಪರವಾದ ವಿಶೇಷ ಯೋಜನೆಗಳನ್ನು ರೂಪಿಸಿ ರಾಜ್ಯದ ಜನರಿಗೆ ನೀಡುವ ಮೂಲಕ ಕನ್ನಡಿಗರ ನೆಚ್ಚಿನ ನಾಯಕರಾಗಿದ್ದಾರೆ.
ಹಿರಿಯರನ್ನು ಗೌರವದಿಂದ ಕಾಣದ ಒಬ್ಬ ಸಂಸದ ರಾಜ್ಯಕ್ಕೆ ಯಾವ ಕೊಡುಗೆ ಕೊಡಬಲ್ಲರು ,ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ಸೂಚಿಸಬೇಕೆಂಬ ಕನಿಷ್ಠ ಸಂಯಮ ಸಹ ಇಲ್ಲ, ಪ್ರಜ್ಞಾವಂತರಾದವರು ವಿಚಾರದ ಬಗ್ಗೆ ಅರಿತು ಮಾತನಾಡಬೇಕು ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷವು ರಾಜ್ಯದ ಜನತೆಗೆ ನೀಡುತ್ತಿರುವ ಅಭಿವೃದ್ದಿ ಕಾರ್ಯಗಳನ್ನು ನೋಡಿ ಸಹಿಸಿಕೊಳ್ಳಲಾಗದ ಬಿಜೆಪಿ ಪಕ್ಷದ ಮುಖಂಡರು ಬಾಯಿಗೆ ಬಂದಂತೆ ಮಾತನಾಡುವ ಅಭ್ಯಾಸ ಮಾಡಿಕೊಂಡಿದ್ದಾರೆ ನಮ್ಮದು ಅಭಿವೃದ್ಧಿಯ ಪಥ, ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಿಗೆ ಗೌರವ ನೀಡುವ ಕನಿಷ್ಠ ಸೌಜನ್ಯ ಇಲ್ಲದ ಬಿಜೆಪಿ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿಕೆಗಳಿಗೆ ಬಹಿರಂಗವಾಗಿ ರಾಜ್ಯದ ಜನರ ಮುಂದೆ ಕ್ಷಮೆಯಾಚನೆ ಮಾಡಬೇಕು, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ನ ಮುಖಂಡರಾದ ಕೃಷ್ಣಮೂರ್ತಿ , ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಕೆ ಪಿ ಜಗನ್ನಾಥ್, ಬೈರೇಗೌಡ ,ವೆಂಕಟೇಶ್ ( ಅಪ್ಪಿ) , ಕಾರ್ಯಾಧ್ಯಕ್ಷರಾದ ಅಂಜನ್ ಮೂರ್ತಿ , ನಗರಸಭಾ ಸದಸ್ಯರಾದ ನಾಗವೇಣಿ , ಕಸಬಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್, ಕಾಂಗ್ರೆಸ್ ಅಧ್ಯಕ್ಷರಾದ ಮುನಿರಾಜು , ರಾಜೇಶ್, ಮಹಿಳಾ ಜಿಲ್ಲಾ ಬ್ಲಾಕ್ ಅಧ್ಯಕ್ಷೆ ರೇವತಿ ಅನಂತ್ ರಾಮ್ ಹಾಗೂ ತಾಲ್ಲೂಕಿನ ವಿವಿಧ ಬ್ಲಾಕ್ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

Comments

Leave a Reply

Your email address will not be published. Required fields are marked *