ಕಣಿವೆ ಬಸವಣ್ಣ ದೇವಾಲಯದಲ್ಲಿ ಮಹಾಶಿವರಾತ್ರಿ ವಿಶೇಷ ಆಚರಣೆ : ದೇವಾಲಯಗೆ ಬರುವ ಭಕ್ತಾದಿಗಳಿಗೆ ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿ ವತಿಯಿಂದ ಅರವಂಟಿಕೆ ಹಾಗೂ ಪ್ರಸಾದ ವಿನಿಯೋಗ ಆಯೋಜನೆ

ಚಿಕ್ಕಬಳ್ಳಾಪುರ : ಸರ್ವರಿಗೂ ಅನುಕೂಲವಾಗುವ ಸಮಾಜಮುಖಿ ಕಾರ್ಯಗಳನ್ನು ಜನತೆಗೆ ತಲುಪಿಸುವ ಕಾರ್ಯವನ್ನು ನಮ್ಮ ಸೇವಾ ಸಮಿತಿಯ ವತಿಯಿಂದ ನೆಡೆಸುತ್ತಿದ್ದೇವೆ. ಶಿವರಾತ್ರಿ ಪ್ರಯುಕ್ತ ಸರ್ವ ಸದಸ್ಯರ ಸಹಕಾರದಿಂದ ಕಣಿವೆ ಬಸವಣ್ಣ ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಪ್ರಸಾದ ವಿನಿಯೋಗ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿಯ ತಾಲ್ಲೂಕು ಅಧ್ಯಕ್ಷರಾದ ಚಂದ್ರಶೆಟ್ಟಿ ತಿಳಿಸಿದರು

 

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಶ್ರೀ ಕ್ಷೇತ್ರ ನಂದಿಕಣಿವೆ ಬಸವಣ್ಣ ದೇವಾಲಯದಲ್ಲಿ ಸರ್ವ ಸದಸ್ಯರೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು ಮಹಾಶಿವರಾತ್ರಿ ಹಬ್ಬದಂದು ಜಾಗರಣೆ ಹಾಗೂ ಉಪವಾಸದ ಆಚರಣೆ ಮಾಡುವ ಮೂಲಕ ದೇವಾಲಯಕ್ಕೆ ಭೇಟಿ ಕೊಡುವ ಭಕ್ತದಿಗಳ ಸಂಖ್ಯೆ ಹೆಚ್ಚಾಗಿರುತ್ತದೆ. ಪವಿತ್ರವಾದ ಮಹಾಶಿವರಾತ್ರಿಯಂದು ದೇವಾಲಯಕ್ಕೆ ಆಗಮಿಸುವ ಭಕ್ತದಿಗಳಿಗೆ ನಮ್ಮ ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿಯ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಪ್ರಸಾದವಿನಿಯೋಗ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದೇವೆ ನಮ್ಮ ಸೇವಾ ಸಮಿತಿಯ ಸರ್ವ ಸದಸ್ಯರು ಈ ಪುಣ್ಯಕಾರ್ಯದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿರುವುದು ಸಂತಸ ತಂದಿದೆ ಎಂದರು.

 

ಈ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿ ಪ್ರಸನ್ನ ಕುಮಾರ್,ವೆಂಕಟೇಶ್,ನಾರಾಯಣಸ್ವಾಮಿ, ಮಲ್ಲಿಕಾರ್ಜುನ್,ಪಾಲನ್ ಜೋಗಳ್ಳಿ ರಾಜು,ರಕ್ಷಿತ್ , ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *