*ಘಾಟಿ ಸುಬ್ರಹ್ಮಣ್ಯ ಹುಂಡಿ ಎಣಿಕೆ ಕಾರ್ಯ ಮುಕ್ತಾಯ : 51 ಲಕ್ಷಕ್ಕೂ ಅಧಿಕ ಮೊತ್ತ ಸಂಗ್ರಹ*

ದೊಡ್ಡಬಳ್ಳಾಪುರ ಮೇ 20 ( ವಿಜಯಮಿತ್ರ) : ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಸೋಮವಾರ ಎಣಿಕೆ ಮಾಡಲಾಯಿತು.

ಹುಂಡಿ ಎಣಿಕೆಯಲ್ಲಿ ಒಟ್ಟು 51, 29,635ರೂ. ಮೊತ್ತ ಸಂಗ್ರಹವಾಗಿದೆ.

 

ಇದರೊಂದಿಗೆ 67,760 ರೂ ಮೌಲ್ಯದ 01 ಕೆಜಿ 540 ಗ್ರಾಂ ಬೆಳ್ಳಿ, 3,500 ರೂ ಮೌಲ್ಯದ 07 ಮಿ.ಲಿ ತೂಕದ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.

 

 

ಹುಂಡಿಯ ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.

 

ಈ ವೇಳೆ ಮುಜರಾಯಿ ಇಲಾಖೆ ತಹಶೀಲ್ದಾರ್ ಜಿ.ಜೆ.ಹೇಮಾ… ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗರಾಜು, ಪ್ರಧಾನ ಅರ್ಚಕ ಆರ್‌.ಸುಬ್ರಹ್ಮಣ್ಯ, ಸಿಬ್ಬಂದಿ ನಂಜಪ್ಪ ಸೇರಿದಂತೆ ಕೆನರಾ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗ, ಭಕ್ತಾದಿಗಳ ಸಮ್ಮುಖದಲ್ಲಿ ಹುಂಡಿ ಹಣ ಎಣಿಸಲಾಯಿತು.

Comments

Leave a Reply

Your email address will not be published. Required fields are marked *