*ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ : ಸಮಿತಿಯ ನೂತನ ಸಾರಥಿಯಾಗಿ ಚಂದ್ರು ಶೆಟ್ಟಿ ಅಧಿಕಾರ ಸ್ವೀಕಾರ*

ದೊಡ್ಡಬಳ್ಳಾಪುರ : ಸಮುದಾಯದ ಏಳಿಗೆಗೆ ಸರ್ವ ಸದಸ್ಯರ ಸಹಮತದಿಂದ ಶ್ರಮಿಸಲಾಗುವುದು, ನನಗೆ ಕೊಟ್ಟಿರುವ ನೂತನ ಜವಾಬ್ಧಾರಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲಾಗುವುದು ಎಂದು ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿ ಅಧ್ಯಕ್ಷ ಚಂದ್ರುಶೆಟ್ಟಿ ತಿಳಿಸಿದರು


ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಗಾಣಿಗ ಸಮುದಾಯದಲ್ಲಿ ಹಲವಾರು ಸಮಸ್ಯೆಗಳಿದ್ದು ಸಮುದಾಯದ ಬೆಂಬಲವಾಗಿ ನಮ್ಮ ಸಮಿತಿ ನಿಷ್ಪಕ್ಷಪಾತವಾಗಿ ಶ್ರಮಿಸುವುದು. ವಿಶೇಷ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವ ಮೂಲಕ ಸಮುದಾಯದ ಘನತೆ ಮತ್ತಷ್ಟು ಹೆಚ್ಚಿಸುವಕಾರ್ಯ ಸಮಿತಿ ವತಿಯಿಂದ ನೆಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಸಮಿತಿಯ ಮಾಜಿ ಅಧ್ಯಕ್ಷ ನಟರಾಜ್ ನೂತನ ಅಧ್ಯಕ್ಷ ಚಂದ್ರು ಶೆಟ್ಟಿ ರವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷರ ಮಧುಚಂದ್ರ, ಗೋಪಿ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ,ಕಾರ್ಯದರ್ಶಿ ಪ್ರಸನ್ನ ಕುಮಾರ್ , ಸಹ ಕಾರ್ಯದರ್ಶಿ ವೆಂಕಟೇಶ್, ಖಜಾಂಚಿ ಲಕ್ಷ್ಮಣ್,ಸಂಚಾಲಕರಾದ ಮಂಜುನಾಥ್ ,ವಿಶ್ವಾಸ್ ಶೆಟ್ಟಿ ಹಾಗೂ ಸಮುದಾಯದ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *