*ಘಾಟಿ ಸುಬ್ರಹ್ಮಣ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಭಾರ ಎಂ ನಾರಾಯಣಸ್ವಾಮಿ ಅಧಿಕಾರ ಸ್ವೀಕಾರ*

ದೊಡ್ಡಬಳ್ಳಾಪುರ ಮೇ 31 ( ವಿಜಯಮಿತ್ರ ) :ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಎಂ. ನಾರಾಯಣಸ್ವಾಮಿ ರವರು ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಭಾರ ವಹಿಸಿಕೊಂಡಿರುತ್ತಾರೆ.

 

ಘಾಟಿ ಶ್ರೀ ಸುಬ್ರಹ್ಮಣ್ಯ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳ ಹುದ್ದೆಯಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಡಿ, ನಾಗರಾಜ್, ರವರು ಮೇ 31ರಂದು ವಯೋನಿವೃತ್ತಿ ಹೊಂದಲಿರುವುದರಿಂದ, ಘಾಟಿ ಶ್ರೀ ಸುಬ್ರಹ್ಮಣ್ಯ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ಶ್ರೀ ಎಂ.ನಾರಾಯಣಸ್ವಾಮಿ, ಕಾರ್ಯನಿರ್ವಾಹಕ ಅಧಿಕಾರಿಗಳು, ಶ್ರೀ ಕುಮಾರಸ್ವಾಮಿ ಮತ್ತು ಸಮೂಹ ದೇವಾಲಯಗಳು, ಹನುಮಂತನಗರ, ಬೆಂಗಳೂರು, ಇವರಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಗಳು, 1958ರ ನಿಯಮ 68ರಡಿ ವಹಿಸಿಕೊಳ್ಳುವಂತೆ ಆಯುಕ್ತರ ಪರವಾಗಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಅದೇಶಿಸಿದೆ.

 

ಈ ಕಾರ್ಯಕ್ರಮದಲ್ಲಿ ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರಾದ ಶ್ರೀ ಪಿ.ದಿನೇಶ್, ತಹಸಿಲ್ದಾರ್ ಜೆಜೆ ಹೇಮಾವತಿ ರವರು ಪ್ರಧಾನ ಅರ್ಚಕರು ಆರ್ ಸುಬ್ರಹ್ಮಣ್ಯ ದೇವಾಲಯದ ನಂಜಪ್ಪ ಮತ್ತು ದೇವಾಲಯದ ಸಿಬ್ಬಂದಿರವರು ಭಾಗವಹಿಸಿದ್ದರು.

Comments

Leave a Reply

Your email address will not be published. Required fields are marked *