*ಹಿರಿಯ ನಾಗರಿಕರಿಗೆ ಉಚಿತ ಅರೋಗ್ಯ ತಪಾಸಣಾ ಶಿಬಿರ l ಆಯುಷ್ಮಾನ್ ಆರೋಗ್ಯ ಮಂದಿರದ ವತಿಯಿಂದ ಐಇಸಿ ಕಿಟ್ ವಿತರಣೆ*

ದೊಡ್ಡಬಳ್ಳಾಪುರ : ಆಯುಷ್ ಇಲಾಖೆ ಬೆಂಗಳೂರು, ಸರ್ಕಾರಿ ಆಯುರ್ವೇದ ಚಿಕಿತ್ಸ್ಯಾಲಯ/ ಆಯುಷ್ಮಾನ್ ಆರೋಗ್ಯ ಮಂದಿರ (ಆಯುಷ್) ಹಣಬೆ ವತಿಯಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಆಯುಷ್ ಅಧಿಕಾರಿ ಡಾ// ಶುಹಾಬುದ್ದಿನ್ ಇವರ ಮಾರ್ಗದರ್ಶನದಲ್ಲಿ ದೊಡ್ಡಬಳ್ಳಾಪುರದಲ್ಲಿ ಹಿರಿಯ ನಾಗರಿಕರಾಗಿ ಆಯುಷ್ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿಗಳಾದ ಡಾ. ಪುಷ್ಪಾಲತಾ ರವರು ಹಿರಿಯ ನಾಗರಿಕರಿಗೆ ಆಯುಷ್ ಪದ್ಧತಿಗಳ ಬಗ್ಗೆ ಮಾಹಿತಿ, ಲಭ್ಯವಿರುವ ಸೌಲಭ್ಯಗಳು ಹಾಗೂ NCD ಖಾಯಿಲೆಗಳ ಬಗ್ಗೆ ಮಾಹಿತಿ ಹಾಗೂ ಉತ್ತಮ ಜೀವನಶೈಲಿಯಿಂದ ಅವುಗಳನ್ನು ನಿಯಂತ್ರಣ ದಲ್ಲಿ ಇಡುವುದರ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ನೆರೆದಿದ್ದ ಎಲ್ಲಾ ಹಿರಿಯ ನಾಗರಿಕರ ಆರೋಗ್ಯ ತಪಾಸಣೆಯನ್ನು ಮಾಡಿ ಚಿಕಿತ್ಸೆಯನ್ನು ನೀಡಲಾಯಿತು.

 

ಎಲ್ಲರಿಗೂ ಐ ಇ ಸಿ ಮೆಟೀರಿಯಲ್ ಗಳು ಹಾಗೂ ಆಯುಷ್ ಕಷಾಯವನ್ನು ಉಚಿತವಾಗಿ ವಿತರಣೆ ಮಾಡಲಾಯಿತು .

 

ಈ ಕಾರ್ಯಕ್ರಮದಲ್ಲಿ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ಸಿಬ್ಬಂದಿಗಳು ಹಾಗೂ ಕಲಿಕಾ ವೈದ್ಯರು, ಹಾಗೂ ಹಿರಿಯ ನಾಗರಿಕರ ಯೋಗ ಕ್ಷೇಮ ಕೇಂದ್ರದ ಮೋಹನ್ ಹಾಗೂ ಸೌಭಾಗ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *