ಮಹಾಲಯ ಅಮಾವಾಸ್ಯೆಗೆ ಬಿಗ್ ಶಾಕ್ : ನಾಳೆ ಮದ್ಯ, ಮಾಂಸ ಮಾರಾಟಕ್ಕಿಲ್ಲ ಅವಕಾಶ : ಕಟ್ಟುನಿಟ್ಟಾಗಿ ಆದೇಶ ಪಾಲಿಸಲು ಜಿಲ್ಲಾಧಿಕಾರಿಗಳ ಸೂಚನೆ

ದೊಡ್ಡಬಳ್ಳಾಪುರ ಅ 01 : ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಜಿಲ್ಲೆಯಾದ್ಯಂತ ಮಾಂಸ ಹಾಗೂ ಮದ್ಯ ಮಾರಾಟವನ್ನು ನಿಷೇದಿಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ವತಿಯಿಂದ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.

 

ಅಕ್ಟೋಬರ್ 2ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ಶಾಂತಿ ಮತ್ತು ಅಹಿಂಸಾ ತತ್ವಗಳನ್ನು ಪಾಲಿಸುವ ಸುಲುವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮಾಂಸ ಹಾಗೂ ಮದ್ಯ ಮಾರಾಟವನ್ನು 01.10.2024 ರ ರಾತ್ರಿ 11-00 ಗಂಟೆಯಿಂದ 02.10.20240 ರಾತ್ರಿ 12-00 ಗಂಟೆಯವರೆಗೆ ನಿಷೇಧಿಸಿ ಆದೇಶಿಸಿದೆ ಹಾಗೂ ಸದರಿ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಲು ಸೂಚಿಸಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.

 

ಅಕ್ಟೋಬರ್ 2 ರಂದು ಮಹಾಲಯ ಅಮಾವಾಸ್ಯೆ ಇರುವ ಕಾರಣ ಮಾಂಸ ಮಾರಾಟಗಾರರು ಹಾಗೂ ಕೆಲ ಸಮುದಾಯದ ಮುಖಂಡರು ಮಾಂಸ ಮಾರಾಟಕ್ಕೆ ಅನುಮತಿ ಕೊಡುವಂತೆ ಕೋರಿ ಸೆಪ್ಟೆಂಬರ್ 30ರಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಆದರೆ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಈ ಆದೇಶ ಹೊರಡಿಸಿದ್ದು , ಮಾಂಸ ಪ್ರಿಯರಿಗೆ ಹಾಗೂ ಮಾಂಸ ಮಾರಾಟಗಾರರಿಗೆ ಬಿಗ್ ಶಾಕ್ ಎಂದರೆ ತಪ್ಪಾಗಲಾರದು.

Comments

Leave a Reply

Your email address will not be published. Required fields are marked *