ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿವತಿಯಿಂದ 2025ರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

ದೊಡ್ಡಬಳ್ಳಾಪುರ : ಪ್ರತಿವರ್ಷದ ಪರಂಪರೆಯಂತೆ ಈ ವರ್ಷವೂ ಕೂಡ ದಿನದ ಪ್ರಾಮುಖ್ಯತೆ ಹಾಗೂ ದಿನಾಂಕ ತಿಳಿಸುವ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಯುವ ಸಮಿತಿ ವತಿಯಿಂದ ಮಾಡಲಾಗಿದೆ ಎಂದು ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿ ಅಧ್ಯಕ್ಷ ಚಂದ್ರುಶೆಟ್ಟಿ ತಿಳಿಸಿದರು

 

ಗಾಣಿಗರ ಪೇಟೆಯ ಲಕ್ಷ್ಮೀ ನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಸೇವಾ ಸಮಿತಿ ವತಿಯಿಂದ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮಿತಿಯು ಹಲವು ವರ್ಷಗಳಿಂದ ನಿರಂತರವಾಗಿ ಕ್ಯಾಲೆಂಡರ್ ಬಿಡುಗಡೆ ಮಾಡುವ ಮೂಲಕ ಸಮುದಾಯಕ್ಕೆ ಶುಭಾಶಯ ಕೋರುವುದಷ್ಟೇ ಅಲ್ಲದೆ, ಸಮಿತಿಯ ಕಾರ್ಯವೈಖರಿಗಳ ಬಗ್ಗೆ ಮಾಹಿತಿ ರವಾನಿಸುವ ಕೆಲಸ ಮಾಡುತ್ತಿದ್ದು , ಅಂತೆಯೇ ಈ ವರ್ಷವೂ ಕೂಡ ಯುವ ಸಮಿತಿ ವತಿಯಿಂದ ಕ್ಯಾಲೆಂಡರ್ ಬಿಡುಗಡೆ ಮಾಡಿದ್ದೇವೆ. ವರ್ಷದ ಶುಭಾರಂಭಕ್ಕೆ ಇದೊಂದು ಉತ್ತಮ ಕಾರ್ಯವೆಂದು ಭಾವಿಸಿದ್ದೇವೆ , 2025ನೇ ವರ್ಷವೂ ಸರ್ವರಿಗೂ ಶುಭವುಂಟುಮಾಡಲಿ ಎಂದು ಹಾರೈಸಿದರು

 

ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷರ ಮಧುಚಂದ್ರ, ಗೋಪಿ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ,ಕಾರ್ಯದರ್ಶಿ ಪ್ರಸನ್ನ ಕುಮಾರ್ , ಸಹ ಕಾರ್ಯದರ್ಶಿ ವೆಂಕಟೇಶ್, ಖಜಾಂಚಿ ಲಕ್ಷ್ಮಣ್,ಸಂಚಾಲಕರಾದ ಮಂಜುನಾಥ್ ,ವಿಶ್ವಾಸ್ ಶೆಟ್ಟಿ ಹಾಗೂ ಸಮುದಾಯದ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *