ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭ : ಮುಖ್ಯ ಪರೀಕ್ಷೆಗೆ ಸುಗಮವಾಗಿ ನೆಡೆಸಲು ಸಕಲ ಸಿದ್ಧತೆ – ಸಯೀದಾ ಅನೀಸ್ ಮುಜಾವರ

ದೊಡ್ಡಬಳ್ಳಾಪುರ : 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಗೆ ಸುಗಮವಾಗಿ ನೆಡೆಸಲು ಬೇಕಿರುವ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸಯೀದಾ ಅನೀಸ್ ಮುಜಾವರ ತಿಳಿಸಿದ್ದಾರೆ.

 

ಈ ಕುರಿತು ಮಾತನಾಡಿದ ಅವರು ತಾಲ್ಲೂಕಿನಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳನ್ನು ಗುರ್ತಿಸಿದ್ದು ಪರೀಕ್ಷೆಗೆ ಸಕಲ ಸಿದ್ಧತೆಯನ್ನು ಮಾಡಿ ಕೊಳ್ಳಲಾಗಿದೆ. ನಗರ ವ್ಯಾಪ್ತಿ-05 ಗ್ರಾಮೀಣ-09 ಕೇಂದ್ರಗಳನ್ನು ಮಾಡಲಾಗಿದೆ.

ತಾಲ್ಲೂಕಿನಲ್ಲಿ ಒಟ್ಟು 67 ಪ್ರೌಢಶಾಲೆಗಳಿದ್ದು ಅದರಲ್ಲಿ ಸರ್ಕಾರಿ (17)ಇತರೆ ಸರ್ಕಾರಿ(04) ಅನುದಾನಿತ(12) ಮತ್ತು ಅನುದಾನರಹಿತ(34) ಶಾಲೆಗಳಿಂದ 3800(ಗಂಡು-1921 ಹೆಣ್ಣು-1879) ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಹೊಸದಾಗಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುತ್ತಾರೆ.

 

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಖಾಸಗಿಯಾಗಿ ಒಟ್ಟು -44 (ಗಂಡು-24 ಹೆಣ್ಣು-20) ಹಾಗೂ ಪುನಾವರ್ತಿತ ವಿದ್ಯಾರ್ಥಿಗಳು -99 (ಗಂಡು-75 ಹೆಣ್ಣು-24)

 

ಒಟ್ಟಾರೆ ತಾಲ್ಲೂಕಿನಲ್ಲಿ ಗಂಡು-2020 ಹೆಣ್ಣು- 1923 ಸೇರಿದಂತೆ ಒಟ್ಟು-3943 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡು ಪರೀಕ್ಷೆ ಬರೆಯಲಿದ್ದಾರೆ.

 

ವಿಶೇಷವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಹಾಗೂ ನಕಲು ತಡೆಯಲು ಎಲ್ಲಾ 14 ಕೇಂದ್ರಗಳಲ್ಲಿ ಸಿಸಿಟಿವಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದನ್ನು ಜಿಲ್ಲಾ ಪಂಚಾಯತ್ ಸಿ ಇ ಓ ಕಚೇರಿಯಲ್ಲಿನ ಇಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತಿದೆ.ಪರೀಕ್ಷೆ ನಡೆಯುವ ಕೇಂದ್ರದ 200ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.ಜೊತೆಗೆ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ಬೆಳಿಗ್ಗೆ 9.00 ರಿಂದ ಮದ್ಯಾಹ್ನ 3.00 ಗಂಟೆಯವರೆಗೆ ಯಾವುದೇ ರೀತಿಯ ಎಸ್.ಟಿ.ಡಿ.ಜೆರಾಕ್ಸ್ ಟೈಪಿಂಗ್ ಮುಂತಾದವುಗಳನ್ನು ತೆರೆಯಲು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳಿಗೆ ಅನಧಿಕೃತ ವ್ಯಕ್ತಿಗಳ ಅಥವಾ ಗುಂಪು ಸೇರದಂತೆ ಪೊಲೀಸ್ ರಕ್ಷಣೆ ಪಡೆಯಲಾಗಿದೆ.ಪರೀಕ್ಷೆ ಸುಗಮವಾಗಿ ನಡೆಯಲು ಬೆಸ್ಕಾಂ.ಪೊಲೀಸ್,ಆರೋಗ್ಯ,ಖಜಾನೆ ,ಕಂದಾಯ,ಸಾರಿಗೆ ಸೇರಿದಂತೆ ಇತರ ಇಲಾಖೆಗಳ ಸಹಾಯ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಪರೀಕ್ಷಾ ಕಾರ್ಯಕ್ಕಾಗಿ 14 ಪರೀಕ್ಷಾ ಕೇಂದ್ರಗಳಿಗೆ 14 ಮುಖ್ಯ ಅಧಿಖಕ್ಷಕರು 14 ಕಸ್ಟೋಡಿಯನ್. 06, ಮಾರ್ಗಾಧಿಕಾರಿಗಳು, 14 ಮೊಬೈಲ್ ಸ್ವಾಧೀನಾಧಿಕಾರಿಗಳು, 14 ಸ್ಥಾನಿಕ ಜಾಗೃತದಳ,01 ವಿಚಕ್ಷಣ ದಳಗಳಿಗೆ ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ನೇಮಿಸಲಾಗಿದೆ.

ಬೇಸಿಗೆಯ ಬಿಸಿಲಿನಿಂದ ಬಳಲುವ ವಿದ್ಯಾರ್ಥಿಗಳಿಗೆ, ಪರೀಕ್ಷಾ ಆತಂಕದಲ್ಲಿರುವ ವಿದ್ಯಾರ್ಥಿಗಳು ಕಂಡುಬಂದಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆ ಕೈಗೊಳ್ಳಲು ಆರೋಗ್ಯ ಕಾರ್ಯಕರ್ತರನ್ನು ನಿಯೋಜಿಸಲಾಗಿದೆ.ಪರೀಕ್ಷೆ ಪ್ರಾರಂಭದಲ್ಲಿಯೇ, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳನ್ನು ನಿಖರವಾಗಿ ಗುರುತಿಸಿ, ತಪಾಸಣೆಗೆ ಒಳಪಡಿಸಿ ಪರೀಕ್ಷಾ ಕೊಠಡಿಗಳಿಗೆ ಕಳುಹಿಸುವುದು. ವಿದ್ಯಾರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ಸ್ ಸಾಮಗ್ರಿಗಳನ್ನು ತರದಂತೆ ನೋಡಿಕೊಳ್ಳುವುದು. ಸಿಸಿಟಿವಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರುವುದನ್ನು ಪ್ರತಿ ಪರೀಕ್ಷಾ ದಿನಗಳಂದು ಬೆಳಗ್ಗೆ 8-30 ಗಂಟೆಗೆ ಖಚಿತಪಡಿಸಕೊಳ್ಳುವುದು. ಜಾಗರೂಕತರಯಿಂದ, ಬದ್ಧತೆಯಿಂದ, ಪಾರದರ್ಶಕವಾಗಿ ನಿಯಮಾನುಸಾರ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಮೊಬೈಲ್ ಸ್ವಾಧೀನಾಧಿಕಾರಿಗಳನ್ನು ಉತ್ತಮವಾಗಿ ಕಾರ್ಯನಿರ್ವಹಿಸುವಂತಹ ಕ್ರಿಯಾಶೀಲ ಸಿಬ್ಬಂದಿಯನ್ನು ನೇಮಿಸಲಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ 7 ತಂಡಗಳ ಜಾಗೃತ ದಳದ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಭೇಟಿ ನೀಡುವ ಪರೀಕ್ಷಾ ಕೇಂದ್ರಗಳ ವೇಳಾ ಪಟ್ಟಿ ಹಂಚಿಕೆಯನ್ನು ಮಾಡಲು ತಿಳಿಸಲಾಗಿದೆ ಎಂದರು.

 

Comments

Leave a Reply

Your email address will not be published. Required fields are marked *