ಕೌಟುಂಬಿಕ ಕಲಹ ಹಿನ್ನೆಲೆ : ಯುಗಾದಿ ಹಬ್ಬದಂದೇ ನೇಣು ಬಿಗಿದುಕೊಂಡು ಆತ್ಮಹತ್ಯೆ

ದೊಡ್ಡಬಳ್ಳಾಪುರ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಲೂಕಿನ ವೀರಾಪುರ ಗ್ರಾಮದ ನಿವಾಸಿ ವಾಸು ( 40ವರ್ಷ ) ನೇಣು ತೆಗೆದುಕೊಂಡು ಆತ್ಮಹತ್ಯೆ ಶರಣಾಗಿದ್ದು.

 

ಚಾಲಕ ವೃತ್ತಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ವಾಸು (ಮಾ 30) ಭಾನುವಾರ ಮಧ್ಯಾಹ್ನದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ತನ್ನ ಸ್ವಗೃಹ ದಲ್ಲಿ ಆತ್ಮಹತ್ಯೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ್ದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ತನಿಖೆ ನಂತರವೇ ಸತ್ಯಸತ್ಯತೆ ಹೊರಬೀಳಲಿದೆ.

Comments

Leave a Reply

Your email address will not be published. Required fields are marked *