ಧನ ಸಹಾಯ ಮಾಡುವ ಮೂಲಕ ಮೃತರ ಕುಟುಂಬಕ್ಕೆ ನೆರವಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘ

ದೊಡ್ಡಬಳ್ಳಾಪುರ : ಇತ್ತೀಚೆಗೆ ನುಮೋನಿಯ ತೊಂದರೆಯಿಂದ ಅಕಾಲಿಕ ಮರಣ ಹೊಂದಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ರಘು ಅವರ ಕುಟುಂಬಕ್ಕೆ ಧನ ಸಹಾಯ ಮಾಡುವ ಮೂಲಕ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಹೆಚ್.ವಿ. ಸಾಂತ್ವನ ಹೇಳಿದರು.

 

ತಾಲ್ಲೂಕಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪಡೆದು ಕುಟುಂಬದ ಜವಾಬ್ಧಾರಿ ಹೊತ್ತು ಕುಟುಂಬಕ್ಕೆ ಆಸರೆಯಾಗಿದ್ದ ರಘು ನುಮೋನಿಯ ತೊಂದರೆಯಿಂದ ಅಕಾಲಿಕ ಮರಣ ಹೊಂದಿದ್ದು,ಇಂದು ಅವರ ತಾಯಿಯವರಾದ ರತ್ನಮ್ಮ ರವರಿಗೆ ಧನ ಸಹಾಯ ಮಾಡಿ ಕುಟುಂಬಕ್ಕೆ ಸಾಂತ್ವಾನ ಹೇಳುವ ಮೂಲಕ ಅವರ ನೋವಿನಲ್ಲಿ ಭಾಗಿಯಾದರು.

 

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸದಾಶಿವ ರಾಮಚಂದ್ರ ಗೌಡ,ಕಾಲೇಜಿನ ಪ್ರಾದ್ಯಾಪಕರಾದ ಶ್ರೀನಿವಾಸ್,ಸಂಘದ ಖಜಾಂಜಿ ಮಹೇಶ್,ಸಂಘದ ನಿರ್ದೇಶಕರಾದ ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *