ಅಹಂಕಾರ ಬದಿಗಿಟ್ಟು ಕನ್ನಡಿಗರಿಗೆ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್

ಕನ್ನಡ ಹಾಡು ಹೇಳುವಂತೆ ಒತ್ತಾಯಿಸಿದ್ದನ್ನು ಪಹಲ್ಗಾಮ್ ಘಟನೆಗೆ ಹೋಲಿಸಿದ್ದ ಗಾಯಕ ಸೋನು ನಿಗಮ್ ಕನ್ನಡಿಗರಿಗೆ ಕ್ಷಮೆ ಕೋರಿದ್ದಾರೆ.

ಹೌದು ” ನಿಮ್ಮ ಮೇಲೆ ನನಗೆ ಇರುವ ಪ್ರೀತಿಯು ನನ್ನ ಅಹಂಕಾರಕ್ಕಿಂತ ದೊಡ್ಡದು” ಎಂದು ಗಾಯಕ ಸೋನು ನಿಗಮ್ ಹೇಳಿದ್ದಾರೆ.

 

ಬೆಂಗಳೂರಿನಲ್ಲಿ ಸಂಗೀತ ಕಾರ್ಯಕ್ರಮ ನಡೆಸುವಾಗ ಸೋನು ನಿಗಮ್ ನೀಡಿದ್ದ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿಸಿತ್ತು. ‘ಕನ್ನಡ ಕನ್ನಡ ಎನ್ನುವುದಕ್ಕೇ ಪಹಲ್ಗಾಮ್ ಘಟನೆ ನಡೆದಿದ್ದು’ ಎಂದು ಅವರು ಹೇಳಿದ್ದರು. ಅವರ ಹೇಳಿಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿತ್ತು. ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಕನ್ನಡಪರ ಸಂಘಟನೆಗಳು,ಕನ್ನಡಿಗರು ಒತ್ತಾಯಿಸಿದ್ದರು. ಅದರಂತೆ ಅವರೀಗ ಕರುನಾಡಿನ ಜನರಲ್ಲಿ ಕ್ಷಮೆ ಕೇಳಿದ್ದಾರೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಸೋನು ನಿಗಮ್ ಪೋಸ್ಟ್ ಮಾಡಿದ್ದಾರೆ.

 

ಕರ್ನಾಟಕದಲ್ಲಿ ಬ್ಯಾನ್ ಮಾಡಲು ನಿರ್ಧರಿಸಲಾಗಿತ್ತು. ಅದರ ಬೆನ್ನಲ್ಲೇ ಅವರು ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದಾರೆ. ‘ನಿಮ್ಮ ಮೇಲೆ ನನಗೆ ಇರುವ ಪ್ರೀತಿಯು ನನ್ನ ಅಹಂಕಾರಕ್ಕಿಂತ ದೊಡ್ಡದು’ ಎಂದು ಅವರು ಹೇಳಿದ್ದಾರೆ.

 

 

Comments

Leave a Reply

Your email address will not be published. Required fields are marked *