ನಾಳೆ (ಜು. 19)ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನೆಡೆಯಬೇಕಿದ್ದ ಸಭೆ ವಿಧಾನಸೌಧಕ್ಕೆ ಶಿಫ್ಟ್

2025ನೇ ಸಾಲಿನ 13ನೇ ಸಚಿವ ಸಂಪುಟದ ಸಭೆಯ ಸ್ಥಳವನ್ನು ದಿಡೀರ್ ಬದಲಾವಣೆ ಮಾಡಲಾಗಿದೆ.

 

 

ದಿನಾಂಕ: 19-06-2025, ಗುರುವಾರ ಮಧ್ಯಾಹ್ನ 12:00 ಗಂಟೆಗೆ ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ, ಸಚಿವ ಸಂಪುಟ ಸಭೆಯನ್ನು ಬೆಂಗಳೂರಿನ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರಕ್ಕೆ ಸ್ಥಳಾಂತರಿಸಲಾಗಿದೆ.

 

ಹೌದು ಈಗಾಗಲೇ ಸಭೆ ನೆಡೆಸಲು ತಯಾರಿ ನೆಡೆಸಿದ್ದ ನಂದಿ ಗಿರಿಧಾಮದ ಸ್ಥಳವನ್ನು ವಿಧಾನಸೌಧದ ಸೌಧಕ್ಕೆ ಸ್ಥಳಾಂತರಿಸಲಾಗಿದೆ ಎಂದುಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್. ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.

 

ಮುಂದಿನ ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Comments

Leave a Reply

Your email address will not be published. Required fields are marked *