ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತೂಬಗೆರೆ ಹೋಬಳಿಯ ಕಾರನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ಶಾಲಾ ಆವರಣದಲ್ಲಿ ಗಿಡ ನಾಟಿ ಮಾಡಿಸದಸ್ಯರಿಗೆ ಮತ್ತು ವಿಧ್ಯಾರ್ಥಿಗಳಿಗೆ ಗಿಡ ವಿತರಣೆ ಮಾಡಲಾಯಿತು
ತಾಲೂಕಿನ ಕೃಷಿ ಮೇಲ್ವಿಚಾರಕರಾದ ಲೋಹಿತ್ ಗೌಡ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು ಹವಾಮಾನ ವೈಪರೀತ್ಯ,ಕೈಗಾರಿಕರಣದಿಂದ ನಮ್ಮ ಸುತ್ತಮುತ್ತಲಿನ ವಾತಾವರಣ ಅಶುದ್ಧವಾಗುತ್ತಿದೆ. ಜನಸಾಮಾನ್ಯರು ಅನಾರೋಗ್ಯಕಿಡಾಗುತ್ತಿದ್ದಾರೆ ಆದ ಕಾರಣ ಪ್ರತಿಯೊಬ್ಬರೂ ತಮ್ಮ ಗಿಡ ನಾಟಿ ಮಾಡಿ ಪೋಷಣೆ ನೀಡುವ ಮೂಲಕ ಪರಿಸರಕ್ಕೆ ಕೊಡುಗೆ ನೀಡಬೇಕೆಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ್ ಶಿಕ್ಷಕರಾದ ಗೀತಾ , ಪುಷ್ಪಾವತಿ, ಹೋಬಳಿ ಆಶಾ ಕಾರ್ಯಕರ್ತೆ ಪ್ರೇಮ, ಅಂಗನವಾಡಿ ಕಾರ್ಯಕರ್ತೆ ಭಾಗ್ಯಲಕ್ಷ್ಮಿ, ಒಕ್ಕೂಟದ ಅಧ್ಯಕ್ಷರಾದ ಸಂತೋಷ್, ಸೇವಾಪ್ರತಿನಿಧಿ ಚೈತ್ರ,VLE ಮಂಜುಳ, ಶೃತಿ ಸಂಘದ ಸದಸ್ಯರು, ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
Leave a Reply