ಕಾನೂನು ಪದವೀಧರರ ಶಿಷ್ಯವೇತನಕ್ಕೆ ಅರ್ಜಿ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಪಂಗಡದ ಕಾನೂನು ಪದವೀಧರರು ವೃತ್ತಿ ತರಬೇತಿ ಕಾರ್ಯಕ್ರಮದಡಿ ಶಿಷ್ಯವೇತನ ಪಡೆಯಲು ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 

ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. ವಕೀಲರ ಸಂಘದಲ್ಲಿ ಅಭ್ಯರ್ಥಿಯು ಹೆಸರನ್ನು ನೋಂದಾಯಿಸಿರಬೇಕು. ತರಬೇತಿ ಅವಧಿ ಎರಡು ವರ್ಷಗಳಾಗಿದ್ದು, ಮಾಸಿಕ ರೂ.10,000/-ಗಳ ಶಿಷ್ಯ ವೇತನ ನೀಡಲಾಗುವುದು.

 

ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಹಿರಿಯ ವಕೀಲರಲ್ಲಿ ತರಬೇತಿ ನಿಯೋಜಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಮಧ್ಯಂತರದಲ್ಲಿ ಬಿಟ್ಟು ಹೋಗಬಾರದು ಹಾಗೆ ಬಿಟ್ಟು ಹೊದ ಪಕ್ಷದಲ್ಲಿ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯವೇತನ ವಾಪಸ್ಸು ಪಡೆಯಲಾಗುವುದು ಹಾಗೂ ಈ ನಿಯಮ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ದಿಮೆಯಲ್ಲಿ ನೇಮಕ ಹೊಂದುವವರಿಗೆ ಅನ್ವಯಿಸುವುದಿಲ್ಲ. ಸುಳ್ಳು ದಾಖಲೆ ಮಾಹಿತಿಯನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗನ್ನು ಕಾನೂನಿನ ಅನ್ವಯ ಶಿಕ್ಷೆಗೆ ಗುರಿ ಪಡಿಸಲಾಗುವುದು ಹಾಗೂ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯವೇತನ ಶೇ.10 ರಂತೆ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು.

 

ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್ಸೈಟ್ ಆದ www.twd.kar.nic.in ಮೂಲಕ ಅರ್ಜಿಗಳನ್ನು ವರ್ಷದ ಎಲ್ಲಾ ದಿನಗಳು(365 ದಿನಗಳು) ಸಲ್ಲಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *