ವಿಷ್ಣು ಅಭಿಮಾನಿಗಳಿಗೆ ಗುಡ್ ನ್ಯೂಸ್.. ಸೆಪ್ಟೆಂಬರ್ 18ಕ್ಕೆ ಸ್ಮಾರಕಕ್ಕೆ ಅಡಿಗಲ್ಲು

ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನು ಇತ್ತೀಚೆಗೆ ತೆರವುಗೊಳಿಸಲಾಗಿತ್ತು. ಇದೀಗ ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಹುಟ್ಟುಹಬ್ಬದ ದಿನವೇ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಅಭಿಮಾನಿಗಳು ಮುಂದಾಗಿದ್ದಾರೆ.

 

ಸೆಪ್ಟೆಂಬರ್ 18ರಂದು ಅಮೃತಾ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಇದೇ ದಿನದಂದು ಮಹತ್ವದ ಕೆಲಸಕ್ಕೆ ವಿಷ್ಣು ದಾದಾ ಫ್ಯಾನ್ಸ್ ಮುಂದಾಗುತ್ತಿದ್ದಾರೆ.

ಈ ಕುರಿತು ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ವೀರಕಪುತ್ರ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಸುದ್ದಿ ಗೋಷ್ಟಿ ನಡೆಸಲಾಯಿತು.

ಈ ವೇಳೆ ಮಾತನಾಡಿದ ವೀರಕಪುತ್ರ ಶ್ರೀನಿವಾಸ್ ಮಾತನಾಡಿ ಸೆಪ್ಟೆಂಬರ್ 2ರಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ದಿನದಂದು ಡಾ. ವಿಷ್ಣುವರ್ಧನ್ ಅವರ ಸ್ಮಾರಕದ ಬ್ಲ್ಯೂಪ್ರಿಂಟ್ ನ್ನು ಕಿಚ್ಚ ಅನಾವರಣ ಮಾಡಲಿದ್ದಾರೆ. ಸೆಪ್ಟೆಂಬರ್ 18ರಂದು ಡಾ.ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ದಿನದಂದೇ ಅವರ ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಗುವುದು ಎಂದು ತಿಳಿಸದ್ದಾರೆ.

ಅಮೃತವರ್ಷ ಆಚರಿಸಲು ಮೂರು ವರ್ಷದಿಂದ ಪ್ಲಾನ್ ಮಾಡಿಕೊಳ್ಳುತ್ತಿದ್ದೇವೆ. ಅದೇ ದಿನದಂದು ಸ್ಮಾರಕ ಕೆಲಸ ನಿರ್ಮಾಣ ಕೆಲಸ ಆರಂಭಿಸುತ್ತಿದ್ದೇವೆ. ಸೆಪ್ಟೆಂಬರ್ 2ರಂದು ಕಿಚ್ಚ ಸುದೀಪ್ ಸರ್ ಬರ್ತಡೇ ದಿನದಂದು ಸ್ಮಾರಕ ಹೇಗಿರಲಿದೆ ಎಂಬ ಮಾಡೆಲ್ ಪರಿಚಯಿಸಲಿದ್ದೇವೆ. ಮೈಸೂರಿನಲ್ಲಿರುವ ಸ್ಮಾರಕಕ್ಕೆ ಪ್ಯಾರೆಲ್ ಎಂದು ಹೇಳುವುದಿಲ್ಲ. ಇದು ಅಸಂಖ್ಯಾತ ಭಾವನೆ ಬೆಸೆದ ಜಾಗ ಇದು. ಪುಣ್ಯಭೂಮಿ ಉಳಿಸಿಕೊಳ್ಳುತ್ತೇವೆ. ಅದಕ್ಕಾಗಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ.

ಸಾಹಸ ಸಿಂಹ ವಿಷ್ಣುವರ್ಧನ್ ಅವರ ಯಜಮಾನರ ಅಮೃತ ಮಹೋತ್ಸವನ್ನ ಒಂದು ದಿನ ಮಾಡೋಕೆ ಪ್ಲಾನ್ ಮಾಡಲಾಗಿದೆ. ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಈ ಸಂಭ್ರಮ ಮಾಡಲಾಗುತ್ತಿದೆ. ಈ ಒಂದು ಅಮೃತ ಮಹೋತ್ಸವದಲ್ಲಿ ಇಡೀ ಇಂಡಸ್ಟ್ರಿ ಭಾಗಿ ಆಗಲಿದೆ ಅಂತಲೂ ಹೇಳಬಹುದು ಎಂದರು.

Comments

Leave a Reply

Your email address will not be published. Required fields are marked *