ಪ್ರತಿ ತಿಂಗಳ 20ರೊಳಗೆ ಅನ್ನಭಾಗ್ಯ,ಗೃಹಲಕ್ಷ್ಮಿ ಹಣ ಜನರ ಖಾತೆಗೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ತನ್ನ ವಿವಿಧ ಗ್ಯಾರೆಂಟಿ ಯೋಜನೆಗಳಿಂದ ಅಧಿಕಾರದ ಚುಕ್ಕಾಣಿ ಹಿಡಿದಿದ್ದು .. ಆ ಗ್ಯಾರೆಂಟಿ ಯೋಜನೆಗಳಲ್ಲಿ ಅತ್ಯಂತ ಪ್ರಾಮುಖ್ಯತೆ ಹೊಂದಿರುವ ಗೃಹಲಕ್ಷ್ಮೀ ಯೋಜನೆ ಹಾಗೂ ಅನ್ನ ಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ವಿಶೇಷ ಘೋಷಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ

 

ಅನ್ನಭಾಗ್ಯ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಹಣವು ಜನಸಾಮಾನ್ಯರ ಖಾತೆಗೆ ಜಮೆಯಾಗದಿರುವುದು ಅಥವಾ ಜಮೆಯಾಗುವ ಪ್ರಕ್ರಿಯೆ ವಿಳಂಬವಾಗುತ್ತಿರುವ ಕಾರಣ ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕುರಿತಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಘೋಷಣೆಯನ್ನು ಮಾಡಿದ್ದಾರೆ …

 

 

ಇನ್ನು ಮುಂದೆ ಪ್ರತಿತಿಂಗಳು ದಿನಾಂಕ 20 ರೊಳಗೆ ಯೋಜನೆಗಳ ಹಣ ಸಂಬಂಧಪಟ್ಟವರ ಖಾತೆಗೆ ಜಮೆಯಾಗುವಂತೆ ಹಾಗೂ ಸಾಮಾಜಿಕ ಭದ್ರತಾ ಪಿಂಚಣಿ ಪ್ರತಿ ತಿಂಗಳು ದಿನಾಂಕ 5 ರೊಳಗೆ ಜನರಿಗೆ ತಲುಪಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ

 

ಎಕ್ಸ್ ಮೂಲಕ ಸಂದೇಶ ರವಾನಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿವೃದ್ಧಿಯ ಗ್ಯಾರಂಟಿ ಸರ್ಕಾರ ಎಂದು ತಿಳಿಸಿದ್ದಾರೆ

Comments

Leave a Reply

Your email address will not be published. Required fields are marked *