Blog

  • *ದೊಡ್ಡಬಳ್ಳಾಪುರದಲ್ಲಿ ನಾದ ಧ್ಯಾನ ಯಜ್ಞ 3 : ಇದೇ ಆಗಸ್ಟ್ 15ರಂದು ಶ್ರೀ ನಾರಾಯಣ ಪಿರಮಿಡ್ ಧ್ಯಾನ ಮಂದಿರಕ್ಕೆ ಚಾಲನೆ*

    ದೊಡ್ಡಬಳ್ಳಾಪುರ: ತಾಲ್ಲೂಕಿನ ಜನತೆಯ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 15 ರಂದು ಬ್ರಹ್ಮಶ್ರೀ ಪತ್ರೀಜಿ ರವರ ಮಾರ್ಗದರ್ಶನದೊಂದಿಗೆ ದೊಡ್ಡಬಳ್ಳಾಪುರ ನಾದ ಧ್ಯಾನ ಯಜ್ಞ 3ರ ಅಡಿಯಲ್ಲಿ ಶ್ರೀ ನಾರಾಯಣ ಪಿರಮಿಡ್ ಧ್ಯಾನ ಮಂದಿರದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ನಾರಾಯಣ ಪಿರಮಿಡ್ ಧ್ಯಾನ ಮಂದಿರದ ಮುಖ್ಯಸ್ಥ ಬಿ.ಎನ್. ಅಶ್ವಥ್ ನಾರಾಯಣ ತಿಳಿಸಿದರು.

    ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಸ್ತುತ ಸಮಾಜದಲ್ಲಿ ಸಾಮಾನ್ಯ ಜನತೆ ಹಲವಾರು ತೊಂದರೆಗಳಿಂದ ಬಳಲುತ್ತಿದ್ದು ಸರ್ವ ಸಮಸ್ಯೆಗೂ ರಾಮಬಾಣದಂತೆ ಕೆಲಸ ಮಾಡುವ ಪಿರಮಿಡ್ ಧ್ಯಾನದ ತರಬೇತಿಯನ್ನು ಉಚಿತವಾಗಿ ಶ್ರೀ ನಾರಾಯಣ ಪಿರಮಿಡ್ ಧ್ಯಾನ ಮಂದಿರದಲ್ಲಿ ಆಯೋಜನೆ ಮಾಡಲಾಗಿದ್ದು. ಆಗಸ್ಟ್ 15ರಂದು ಧ್ಯಾನ ಮಂದಿರದ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆಎಂದರು.

     

    ಕಾರ್ಯಕ್ರಮದಲ್ಲಿ 4000ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು ಸಕಲ ಸಿದ್ಧತೆ ನಡೆದಿದೆ . ನಾದ ಧ್ಯಾನ ಯಜ್ಞ 3ರ ಅಡಿಯಲ್ಲಿ ಆಸಕ್ತರಿಗೆ ಉಚಿತವಾಗಿ ಪಿರಮಿಡ್ ಧ್ಯಾನವನ್ನು ಮುಖ್ಯ ತರಬೇತುದಾರರಾದ ಅಯ್ಯಪ್ಪ ಪಿಂಡಿ ರವರ ನೇತೃತ್ವದಲ್ಲಿ ಆ ಯೋಜನೆ ಮಾಡಿದ್ದು ತಾಲೂಕಿನ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.

    ಮುಖ್ಯ ತರಬೇತುದಾರ ಅಯ್ಯಪ್ಪ ಪಿಂಡಿ ಮಾತನಾಡಿ ಅತ್ಯಂತ ಪ್ರಭಾವಿಶಾಲಿಯಾದ ಪಿರಮಿಡ್ ಧ್ಯಾನವು ಸರ್ವರಿಗೂ ಲಭಿಸಲಿ ಎಂಬ ಸದುದ್ದೇಶದಿಂದ ಈ ಕಾರ್ಯಕ್ರಮದ ಆಯೋಜನೆ ಮಾಡಲಾಗಿದೆ . ಇದು ಮೂರನೇ ಧ್ಯಾನ ಮಂದಿರವಾಗಿದ್ದು ನಾದ ಧ್ಯಾನ ಯಜ್ಞ ವಿಶೇಷವಾಗಿರುತ್ತದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಧ್ಯಾನದ ಉಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡುತ್ತೇನೆ ಎಂದರು

     

    ನಿತ್ಯ ಧ್ಯಾನ ಮಾಡುವ ಮೂಲಕ ಆರೋಗ್ಯ ಸಮಸ್ಯೆ ಹಾಗೂ ಮಾನಸಿಕ ತೊಂದರೆಗಳಿಂದ ದೂರವಿರಬಹುದಾಗಿದೆ. ಕಲುಷಿತ ವಾತಾವರಣದಲ್ಲಿ ನಮ್ಮ ಮನಸ್ಸು ಮತ್ತು ದೇಹದ ಮೇಲೆ ಆಗುವ ದುಷ್ಪರಿಣಾಮಗಳಿಂದ ದೂರವಿರಲು ಧ್ಯಾನ ಅತ್ಯುತ್ತಮ ಮಾರ್ಗವಾಗಿದೆ.ಸರ್ವರೂ ಈ ಮಾರ್ಗವನ್ನು ಅನುಸರಿಸುವಂತೆ ಮನವಿ ಮಾಡಿದರು.

    Ad

    ಧ್ಯಾನ ಮಂದಿರದ ಸಿಬ್ಬಂದಿ ಉಮೇಶಯ್ಯ ಮಾತನಾಡಿ ಧ್ಯಾನಕ್ಕೆ ಬರುವ ಪ್ರತಿ ಸಾರ್ವಜನಿಕರಿಗೂ ಉಚಿತ ಪ್ರವೇಶ ಕಲ್ಪಿಸಲಾಗಿದ್ದು ಉಪಹಾರದ ವ್ಯವಸ್ಥೆ ಕೂಡ ಮಾಡಲಾಗಿದೆ . ತುಮಕೂರು ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಪಿರಮಿಡ್ ಧ್ಯಾನದ ಲಾಭಗಳನ್ನು ಸಾರ್ವಜನಿಕರು ಪಡೆದಿದ್ದು. ತಾಲೂಕಿನ ಜನತೆಯ ಉಪಯೋಗಕ್ಕಾಗಿ ಈ ಕಾರ್ಯಕ್ರಮದ ಆಯೋಜನೆ ಮಾಡಲಾಗಿದೆ. ನಿರಂತರ ಧ್ಯಾನ ನಮ್ಮ ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ರಂಗರಾಜು, ಎಲ್. ಕೆ.ನಂದಕುಮಾರ್,ಆರ್ ಶ್ರೀನಿವಾಸ್, ಲಿಂಗರಾಜು,ಅರುಣ್ ಕುಮಾರ್, ಹೆಚ್. ಬಿ.ದೊಡ್ಡ ರಂಗಪ್ಪ, ಎ ಚಿತ್ರ ಶ್ರೀ, ಏನ್. ಸವಿತಾ ಸೇರಿದಂತೆ ಹಲವರು ಉಪಸಿತರಿದ್ದರು.

  • *ಕೆರೆ ಕುಂಟೆ ಸೇರುತ್ತಿರುವ ಕಲುಷಿತ ನೀರು : ಮಳೆ ನೀರಿನ ಜೊತೆ ತಾಜ್ಯ ನೀರು ಹರಿಬಿಟ್ಟ ಕಾರ್ಖಾನೆ*

    ದೊಡ್ಡಬಳ್ಳಾಪುರ : ತಾಲ್ಲೂಕಿನ ಕೆರೆಕುಂಟೆಗಳು ಈಗಾಗಲೇ ನಶಿಸಿಹೋಗಿವೆ , ಕಾರ್ಖಾನೆಗಳು ಹೊರಸೂಸುವ ತ್ಯಾಜ್ಯ ನೀರು ಸ್ಥಳೀಯ ಜಲ ಮೂಲಗಳನ್ನು ಸೇರಿ ಅಂತರ್ಜಾಲ ಸಂಪೂರ್ಣ ಹಾಳಾಗುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ನಗರಕ್ಕೆ ಕೂಗಳತೆ ದೂರದಲ್ಲಿರುವ ಬಾಂಬೆ ರಯಾನ್ ಫ್ಯಾಷನ್ (ಬಟನ್ ತಯಾರಿಕ ಘಟಕ )ಕಾರ್ಖಾನೆಯಿಂದ ಮಳೆ ಬಂದ ಸಮಯದಲ್ಲಿ ತಮ್ಮ ಕಾರ್ಖಾನೆಯಲ್ಲಿ ಇರುವ ವಾಷಿಂಗ್ ಮಾಡಲಾದ ತ್ಯಾಜ್ಯದ ನೀರು ಕಾರ್ಖಾನೆ ಪಕ್ಕದಲ್ಲಿ ಇರುವ ಕಾಲುವೆಗೆ ಹರಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಈ ಕಾಲುವೆಯ ನೀರು ( ಕಲುಷಿತ ನೀರು )ಬಾಶೆಟ್ಟಹಳ್ಳಿ ಹಾಗೂ ದೊಡ್ಡತುಮಕೂರು ಕೆರೆಗಳಿಗೆ ಸೇರುತ್ತಿರುವುದು ಕಂಡು ಬಂದಿದೆ.ಈ ನೀರನ್ನು ಬಳಸುವ ಸಾರ್ವಜನಿಕರು ಮಾರಕ ರೋಗಳಿಗೆ ಬಲಿಯಾಗುತ್ತಿದ್ದಾರೆ. ಅಲ್ಲದೇ ಬಿಪಿ ಮದುಮೇಹ ಕ್ಯಾನ್ಸರ್ ಇಂತಹ ಮಾರಾಂತಿಕ ಖಾಯಿಲೆಗಳಿಗೆ ಒಳಗಾಗುತ್ತಿದ್ದು ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

  • *ದಲಿತರ ಜಮೀನಿಗೆ ಅತಿಕ್ರಮ ಪ್ರವೇಶ ಆರೋಪ : ರಕ್ಷಣೆ ನೀಡುವಂತೆ ಕೋರಿ ಡಿವೈಎಸ್ಪಿ ಕಚೇರಿ ಮುಂದೆ ಧರಣಿ ಕುಳಿತ ರೈತ ಕುಟುಂಬ*

    ದೊಡ್ಡಬಳ್ಳಾಪುರ : ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದಲಿತ ಮಹಿಳೆ‌ ಮುನಿನಾರಾಯಣಮ್ಮ ಅವರಿಗೆ ಸೇರಿದ 5ಎಕ್ಕರೆ 3ಗುಂಟೆ ಜಾಗವನ್ನು ಪ್ರಭಾವಿಗಳು ಅಕ್ರಮವಾಗಿ ವಶಪಡಿಸಿಕೊಳ್ಳಲು ಯತ್ನಿಸುತ್ತಿದ್ದು , ಸದರಿ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಿ ನ್ಯಾಯ ಕೊಡಿಸುವಂತೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಗರದ ಡಿವೈಎಸ್ಪಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಮಾಡಲಾಯಿತು.

    ನಗರದ ಡಾ.ಬಿಆರ್.ಅಂಬೇಡ್ಕರ್ ವೃತ್ತ(ಪ್ರವಾಸಿ ಮಂದಿರ)ದಿಂದ ಮೆರವಣಿಗೆ ಮೂಲಕ ತೆರಳಿದ ಪ್ರತಿಭಟನಾಕಾರರು ಸ್ಥಳಕ್ಕೆ ಡಿವೈಎಸ್ಪಿ ಬರುವವರೆಗೂ ಧರಣಿ ಮುಂದುವರಿಸುವುದಾಗಿ ಪಟ್ಟುಹಿಡಿದರು.

     

     

    ಏನಿದು ಸಮಸ್ಯೆ…??

    ತಾಲೂಕಿನ ಹೆಗ್ಗಡಿಹಳ್ಳಿಯ ಸರ್ವೆ ನಂಬರ್ 102ರಲ್ಲಿ ಮುನಿನಾರಾಯಣಮ್ಮ ಅವರಿಗೆ ಪಿತ್ರಾರ್ಜಿತವಾದ ಆಸ್ತಿ ಕೋರ್ಟ್ ಆದೇಶದ ಮೂಲಕ 5 ಎಕರೆ 3 ಗುಂಟೆ ಭೂಮಿ ಡಿಕ್ರಿ ಆಗಿದೆ ಎಂದು,ಜಮೀನಿಗೆ ಸಂಬಂಧಿಸಿ‌ದ ಎಫ್‌ಡಿಪಿ ಪ್ರಕರಣ ನ್ಯಾಯಾಲಯದಲ್ಲಿದ್ದರೂ ವಿಕ್ರಂ ಮತ್ತು ಅವರ ಸಹಚರರು ಅತಿಕ್ರಮ ಪ್ರವೇಶ ಮಾಡಿ ಕಾಂಪೌಂಡ್ ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

    ಕಣಿವೇಪುರದ ದಿವಗಂತ ಮುನಿಯಪ್ಪನವರ ಮೊದಲ ಹೆಂಡತಿ ಚಿಕ್ಕತಿಮ್ಮಕ್ಕನವರ ಒಬ್ಬಳೇ ಮಗಳು ಮುನಿನಾರಾಯಣಮ್ಮ. ಅವರ ತಂದೆ ಮುನಿಯಪ್ಪನವರಿಗೆ ಒಟ್ಟು 9 ಎಕರೆ 17 ಗುಂಟೆ ಜಮೀನಿದ್ದು, 2011ರಲ್ಲಿ ದೊಡ್ಡಬಳ್ಳಾಪುರದ ನ್ಯಾಯಾಲಯದಲ್ಲಿ ಭಾಗಾಂಶದ ಕೇಸ್ ಹಾಕಲಾಗಿತ್ತು. ಕೋರ್ಟ್ ಆದೇಶದಂತೆ ಮುನಿನಾರಾಯಣಮ್ಮ ಅವರಿಗೆ 5 ಎಕರೆ 3 ಗುಂಟೆ ಜಮೀನು ನೀಡಲಾಗಿದೆ. ಸರ್ವೇ ನಡೆಸಿ ಜಾಗವನ್ನು ಗುರುತಿಸುವ ಕಾರಣಕ್ಕೆ ಕೋರ್ಟ್ ನಲ್ಲಿ ಎಫ್‌ಡಿಪಿ ಕೇಸ್ ಸಹ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

     

     

    ಸೂಕ್ತ‌ ರಕ್ಷಣೆ ನೀಡುವಂತೆ ಕೋರಿ ನಗರ ಠಾಣೆ ಇನ್ಸ್ಪೆಕ್ಟರ್ ಎ.ಅಮರೇಶ್ ಗೌಡ ಅವರಿಗೆ ಜಮೀನಿನ ವಾರಸುದಾರರು ಹಾಗೂ ಸಂಘಟನೆಯ ಮುಖಂಡರು ಮನವಿ ಸಲ್ಲಿಸಿದರು.

    ಇನ್ಸ್ಪೆಕ್ಟರ್ ಅಮರೇಶ್ ಗೌಡ ಮನವಿ ಸ್ವೀಕರಿಸಿ ಮಾತನಾಡಿದರು ಈ ಪ್ರಕರಣ ಈಗ ಪೊಲೀಸ್ ಗಮನಕ್ಕೆ ಬಂದಿದೆ. ಇದನ್ನು ಡಿವೈಎಸ್‌ಪಿ ಅವರ ಗಮನಕ್ಕೆ ತಂದು, ಸ್ಥಳ ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

     

    ಪ್ರತಿಭಟನೆಯಲ್ಲಿ ಭಾರತೀಯ ಶೂದ್ರಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸಿದ್ದರಾಜು ಮಣೆಗಾರ, ಮುಖಂಡರಾದ ದೊಡ್ಡಯ್ಯ, ಚನ್ನಿಗರಾಯಪ್ಪ ಮತ್ತಿತರರು ಭಾಗವಹಿಸಿದ್ದರು.

  • *ಕರ್ನಾಟಕ ಸುವರ್ಣ ಸಂಭ್ರಮ : ಕನ್ನಡ ಜ್ಯೋತಿ ರಥಕ್ಕೆ ತಾಲ್ಲೂಕಿನಲ್ಲಿ ಅದ್ದೂರಿ ಸ್ವಾಗತ*

    ದೊಡ್ಡಬಳ್ಳಾಪುರ ಆಗಸ್ಟ್ 07 ( ವಿಜಯ ಮಿತ್ರ ) : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಂಡಿದೆ.   “ಹೆಸರಾಯಿತು  ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಧ್ಯೇಯವಾಕ್ಯದ ಅಡಿಯಲ್ಲಿ ರಾಜ್ಯದ ಎಲ್ಲೆಡೆ ಕರ್ನಾಟಕ ಸುವರ್ಣ ಸಂಭ್ರಮದ ಆಚರಣೆ ನಡೆಯುತ್ತಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.

    ಅವರು  ದೊಡ್ಡಬಳ್ಳಾಪುರ ತಾಲ್ಲೂಕಿಗೆ  ಆಗಮಿಸಿದ ಕರ್ನಾಟಕ ಸಂಭ್ರಮ 50 ರ  ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ  ಅಭಿಯಾನದ   ಕನ್ನಡ ಜ್ಯೋತಿ ರಥದ ಮೆರವಣಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

    ಕನ್ನಡ ಭಾಷೆಯನ್ನಾಡುವ  ಪ್ರದೇಶಗಳನ್ನು  ಮೈಸೂರು ರಾಜ್ಯ ಎಂದು  1956 ನವೆಂಬರ್  1 ರಂದು     ಹೆಸರಿಡಲಾಯಿತು.  ಕನ್ನಡಿಗರ ರಾಜ್ಯಕ್ಕೆ “ಕರ್ನಾಟಕ’ ಎಂದು 1973ರ   ನವೆಂಬರ್‌ 1ರಂದು  ಪುನರ್‌ನಾಮಕರಣ ಮಾಡಲಾಯಿತು.  ಕನ್ನಡ ಸಾಹಿತಿಗಳು, ಕನ್ನಡಪರ ಹೋರಾಟಗಾರರು, ಕನ್ನಡ ಅಭಿಮಾನಿಗಳ ನಿರಂತರ ಹೋರಾಟದಿಂದ   ಕರ್ನಾಟಕ ಏಕೀಕರಣವಾಯಿತು. ಕರ್ನಾಟಕ ಏಕೀಕರಣ  ಹೋರಾಟದ ಸಂದರ್ಭದಲ್ಲಿ  ಹುತಾತ್ಮನಾದ  ಬಳ್ಳಾರಿ ರಂಜಾನಸಾಬ್ ಅವರನ್ನು ನಾವು ಸ್ಮರಿಸಬೇಕಾಗಿದೆ ಎಂದರು.

     

    ದೊಡ್ಡಬಳ್ಳಾಪುರ  ಕನ್ನಡಪರ ಸಂಘಟನೆಗಳ ಮುಖಂಡರಾದ   ಕನ್ನಡ ಪಕ್ಷದ ರಾಜ್ಯಾಧ್ಯಕ್ಷ ಸಂಜೀವನಾಯಕ್, ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ, ಕಸಾಪ ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್  ಮುಂತಾದವರು  ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಕನ್ನಡಪರ ಸಂಘಟನೆಗಳು  ಕರ್ನಾಟಕದ ನಾಡು,ನುಡಿ ವಿಚಾರಗಳ ಹೋರಾಟದಲ್ಲಿ  ಸದಾ ಮುಂಚೂಣಿಯಲ್ಲಿರುವುದು ಶ್ಲಾಘನೀಯ ವಿಚಾರವಾಗಿದೆ. ಕನ್ನಡ ನಾಡು ನುಡಿ  ಅಭಿಮಾನ ನಿರಂತರವಾಗಿಬೇಕು. ಕನ್ನಡ ಭಾಷೆಯನ್ನು  ಬಳಸುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಾಗಿದೆ.  ಕನ್ನಡ ವಿರೋಧಿ ವಿಚಾರಗಳನ್ನು ಕನ್ನಡಿಗರು ಒಗ್ಗಟ್ಟಿನಿಂದ ಎದುರಿಸಬೇಕಾಗಿದೆ. ಕರ್ನಾಟಕ ಏಕೀಕರಣ ಚಳುವಳಿ, ಗೋಕಾಕ್ ಚಳುವಳಿ  ಇವು ಎಂದಿಗೂ ಕನ್ನಡಿಗರಿಗೆ ಸ್ಫೂರ್ತಿಯಾಗಿವೆ.  ಕನ್ನಡದ ಇತಿಹಾಸ ಮಹತ್ವ ಹೋರಾಟಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ  ಅಗತ್ಯವಿದೆ.   ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಮಹನೀಯರನ್ನು ಎಂದಿಗೂ ಸ್ಮರಿಸಬೇಕಾಗಿದೆ. ಕರ್ನಾಟಕ  ಕಲೆ, ಸಾಹಿತ್ಯ, ಸಾಂಸ್ಕೃತಿಕ ಪರಂಪರೆಯನ್ನು  ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ  ಕನ್ನಡಿಗರು ಮಾಡಬೇಕಾಗಿದೆ ಎಂದರು.

     

     

    ಮೊಕದ್ದಮೆ ವಾಪಸ್ಸಿಗೆ ಒತ್ತಾಯ :- ಕರ್ನಾಟಕ ಏಕೀಕರಣ, ಗೋಕಾಕ್ ಚಳುವಳಿ ಸೇರಿದಂತೆ ಹಲವಾರು ಮಹತ್ವದ ಕನ್ನಡಪರ ಹೋರಾಟಗಳಲ್ಲಿ ಕನ್ನಡಪರ ಹೋರಾಟಗಾರರ ಪಾತ್ರ ಮಹತ್ವದಾಗಿದೆ. ಕನ್ನಡ ನಾಡು, ನುಡಿ, ಪರಂಪರೆಗಳ ವಿಚಾರಗಳಲ್ಲಿ ಸಮಸ್ಯೆಗಳು  ಎದುರಾದಾಗ ಕನ್ನಡಪರ ಹೋರಾಟಗಾರರು ತಕ್ಷಣವೇ ಸ್ಪಂದಿಸಿ ಹೋರಾಟಗಳನ್ನು ಮಾಡುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ ಕನ್ನಡಪರ ಹೋರಾಟಗಾರ ವಿರುದ್ದ ದಾಖಲಾಗಿರುವ ಮೊಕದ್ದಮೆಗಳನ್ನು ರಾಜ್ಯ ಸರ್ಕಾರ ವಾಪಸ್ಸು ಪಡೆಯಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಒತ್ತಾಯಿಸಿದರು.

     

    ಕನ್ನಡ ರಥ ಜ್ಯೋತಿ ಸ್ವಾಗತ :–   ದೇವನಹಳ್ಳಿ ತಾಲ್ಲೂಕಿನಿಂದ ಆಗಮಿಸುವ  ಕನ್ನಡ ಜ್ಯೋತಿ ರಥವನ್ನು ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ದೇವನಹಳ್ಳಿ  ತಾಲ್ಲೂಕಿನ ಗಡಿಭಾಗದಲ್ಲಿ  ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಾಶ್ರೀ, ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಮತ್ತು ಕನ್ನಡಪರ ಸಂಘಟನೆಗಳ ಮುಖಂಡರು ಸ್ವಾಗತಿಸಿದರು.

     

     

    ಆದ್ದೂರಿ ಮೆರವಣಿಗೆ:–       ದೊಡ್ಡಬಳ್ಳಾಪುರ ತಾಲ್ಲೂಕಿಗೆ ಆಗಮಿಸಿ ಕನ್ನಡ ಜ್ಯೋತಿ ರಥಕ್ಕೆ ನಾಗದೇನಹಳ್ಳಿ, ಮೋಪರಹಳ್ಳಿ, ರಘುನಾಥಪುರ ಸರ್ಕಾರಿ ಶಾಲೆ ವಿದ್ಯಾರ್ಥಿಗಳು, ‌ಜವಾಹರ ನವೋವಿದ್ಯಾಲಯದ ವಿದ್ಯಾರ್ಥಿಗಳು ಪುಪ್ಪಾರ್ಚನೆ ಮಾಡಿದರು. ಬಾಶೆಟ್ಟಿಹಳ್ಳಿಯಲ್ಲಿ ನಡೆದ ಆದ್ದೂರಿ ಮೆರವಣಿಗೆಯಲ್ಲಿ ಮಹಿಳೆಯರಿಂದ ಪೂರ್ಣ ಕುಂಭ ಸ್ವಾಗತ ಮತ್ತು ಕಲಾ ತಂಡಗಳೊಂದಿಗೆ ಗ್ರಾಮದ ಮುಖಂಡರು ಮತ್ತು ಶಾಲಾ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

     

     

    ದೊಡ್ಡಬಳ್ಳಾಪುರ   ನಗರಸಭೆಯ ಸದಸ್ಯರುಗಳು ಮತ್ತು ಪೌರಾಯುಕ್ತ ಕಾರ್ತಿಕ್ ಈಶ್ವರ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್ ಡಿ ಕ್ರಾಸ್ ಬಳಿ‌ ಕನ್ನಡ ಜ್ಯೋತಿ ರಥವನ್ಬು ಸ್ವಾಗತಿಸಿದರು. ನಂತರ ಆಸ್ಪತ್ರೆ ವೃತ್ತ, ರಂಗಪ್ಪ ಸರ್ಕಲ್,  ಅರಳುಮಲ್ಲಿಗೆ ಬಾಗಿಲು,   ಕೆ.ಸಿ.ಪಿ ವೃತ್ತ,   ಕೊಂಗಾಡಿಯಪ್ಪ ಪ್ರೌಢಶಾಲೆ,  ಇಸ್ಲಾಂಪುರ , ತಾಲ್ಲೂಕು ಕಛೇರಿ ವೃತ್ತದ ತನಕ ನಡೆದ ಆದ್ದೂರಿ ಮೆರವಣಿಗೆಯಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಮತ್ತು ಕನ್ನಡಪರ ಸಂಘಟನೆಗಳು ಕನ್ನಡ ಭಾವುಟ ಹಿಡಿದು ಸ್ವಾಗತಿ, ಪುಷ್ಪ ನಮನ ಸಲ್ಲಿದರು.

     

     

    ಜಿಲ್ಲಾಧಿಕಾರಿ ಮಾಲಾರ್ಪಣೆ :- ದೊಡ್ಡಬಳ್ಳಾಪುರ ನಗರದ ನಡೆದ ಕನ್ನಡ ಜ್ಯೋತಿ ರಥದ ಮೆರವಣಿಗೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್, ಜಿಲ್ಲಾಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ ಭಾಗವಹಿಸಿ ರಥಕ್ಕೆ ಮಾಲಾರ್ಪಣೆ ಮಾಡಿದರು.

     

     

    ಕನ್ನಡ  ಜ್ಯೋತಿ ರಥದ ಮೆರವಣಿಗೆಯಲ್ಲಿ  ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು   ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರುಗಳಾದ. ತ.ನ.ಪ್ರಭುದೇವ್, ಸಂಜೀವನಾಯಕ್, ನಗರಸಭಾ ಸದಸ್ಯ ಮಲ್ಲೇಶ್, ಸು.ನರಸಿಂಹಮೂರ್ತಿ, ಬಿ.ಎಸ್.ಚಂದ್ರಶೇಖರ್, ರಾಜಘಟ್ಟರವಿ, ಮುರುಳಾರಾಧ್ಯ, ಡಿ.ಪಿ.ಆಂಜನೇಯ, ನಂಜಪ್ಪ, ಲೋಕೇಶ್, ನಾಗರಾಜು, ಡಿ.ವೆಂಕಟೇಶ್, ನಂಜಪ್ಪ, ತೂಬಗೆರೆ ಷರೀಫ್, ಪ್ರಮೀಳಾ ಮಹಾದೇವ್, ಮುನಿಪಾಪಣ್ಣ, ಪರಮೇಶ್, ನಾಗರತ್ನಮ್ಮ , ಕಮಲನಾಥ್, ದಾದಾಪೀರ್ ಮುಂತಾದವರು ಮತ್ತು ಕನ್ನಡಾಭಿಮಾನಿಗಳು ಭಾಗವಹಿಸಿದ್ದರು.

  • *ಕರ್ನಾಟಕ ಭೀಮ್ ಸೇನೆ ಪ್ರತಿಭಟನೆ : ಗ್ರಾಮಗಳ ಸಮಸ್ಯೆಬಗೆಹರಿಸಿ,ದಲಿತರ ಮೇಲಿನ ದೌರ್ಜನ್ಯ ನಿಲ್ಲಿಸಿ – ಶಂಕರ್ ರಾಮಲಿಂಗಯ್ಯ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 07 (ವಿಜಯ ಮಿತ್ರ): ಜಿಲ್ಲೆ ಹಾಗೂ ತಾಲ್ಲೂಕಿನ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಅಗ್ರಹಿಸಿ ಕರ್ನಾಟಕ ಭೀಮ್ ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆ ನೆಡೆಸಲಾಯಿತು.

     

    ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಶಂಕರ್ ರಾಮಲಿಂಗಯ್ಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಜೈ ಭೀಮ್ ಮಂಜುನಾಥ್ ನೇತೃತ್ವದಲ್ಲಿ ನಡೆದ ಜಿಲ್ಲಾಪ್ರತಿಭಟನೆಯಲ್ಲಿ ತಾಲೂಕಿನ ಹಲವು ಸಮಸ್ಯೆಗಳನ್ನು ಒಳಗೊಂಡಂತೆ ಹಾಡೋನಹಳ್ಳಿ ಗ್ರಾಮ ಪಂಚಾಯಿತಿಯ ಐಯ್ಯಮ್ಮನಹಳ್ಳಿ,ದುರ್ಗೇನಹಳ್ಳಿಯಲ್ಲಿ ಮತ್ತು ನೆಲ್ಲುಗುದಿಗೆ ಗ್ರಾಮಗಳ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಒತ್ತಾಯಿಸಲಾಯಿತು.

     

    ಈ ಸಂದರ್ಭದಲ್ಲಿ ಕರ್ನಾಟಕ ಭೀಮ್ ಸೇನೆ ಸಂಸ್ಥಾಪಕ ಅಧ್ಯಕ್ಷ ಶಂಕರ್ ರಾಮಲಿಂಗಯ್ಯ ಮಾತನಾಡಿ ಅಧಿಕಾರಕ್ಕೆ ಬರುವ ಮುನ್ನ ದಲಿತ ಪರ ದಲಿತರ ಧ್ವನಿಯಾಗಿ ಶ್ರಮಿಸುತ್ತೇವೆ ಎಂದು ವಾಗ್ದಾನ ಮಾಡುವ ಸರ್ಕಾರಗಳು ಅಧಿಕಾರಕ್ಕೆ ಬಂದ ಕೂಡಲೇ ಸಂಪೂರ್ಣ ದಲಿತ ವಿರೋಧಿ ಕಾರ್ಯಗಳನ್ನು ಮಾಡಲು ಮುಂದಾಗುವುದು ವಿಪರ್ಯಾಸವೇ ಸರಿ. ಬಿಜೆಪಿಯ ದಲಿತ ವಿರೋಧಿ ನೀತಿಯಿಂದ ಬೇಸತ್ತಿದ್ದ ಜನತೆ ಕಾಂಗ್ರೆಸ್ ಗೆ ಒಂದು ಅವಕಾಶ ಕೊಟ್ಟರು ಆದರೆ ಕಾಂಗ್ರೆಸ್ ದಲಿತರ ಧ್ವನಿಯಾಗಿ ಶ್ರಮಿಸುವುದು ಬಿಟ್ಟು ದಲಿತ ವಿರೋಧಿ ಆಡಳಿತವನ್ನು ನಡೆಸುತ್ತಿದೆ ರಾಜ್ಯದಲ್ಲಿ ದಲಿತರ ಮೇಲೆ ದೌರ್ಜನಗಳು ಹೆಚ್ಚಾಗುತ್ತಿವೆ. ಸರ್ಕಾರಿ ಜಾಗಗಳು ಕಬಳಿಸಲಾಗುತ್ತಿದೆ. ಈ ಕುರಿತು ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಕರ್ನಾಟಕ ಭೀಮ್ ಸೇನೆ ವತಿಯಿಂದ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು .

    ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸಾಕಷ್ಟು ಸಮಸ್ಯೆಯಿದ್ದು ಇಂದು ಸಾಂಕೇತಿಕವಾಗಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದೆ. ಜಿಲ್ಲಾಧಿಕಾರಿಗಳಿಗೆ ನೀಡಿರುವ ಮನವಿಯ ಕುರಿತು ಜಿಲ್ಲಾಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವ ಮೂಲಕ ಸ್ಥಳೀಯ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ನೀಡಬೇಕಿದೆ ಎಂದರು.

     

    ಸಂಘಟನೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಜೈ ಭೀಮ್ ಮಂಜುನಾಥ್ ಮಾತನಾಡಿ ತಾಲ್ಲೂಕಿನ ಐಯ್ಯಮ್ಮನಹಳ್ಳಿಯಲ್ಲಿ ಮಕ್ಕಳಿಗೆ ಅಂಗನವಾಡಿ ಕೇಂದ್ರದ ಕೊರತೆಯಿದ್ದು ಮಕ್ಕಳ ಪ್ರಾಥಮಿಕ ಬೆಳವಣಿಗೆಗೆ ಸಹಕಾರಿಯಾಗುವ ಅಂಗನವಾಡಿ ಕೇಂದ್ರವನ್ನು ಸ್ಥಾಪಿಸಲು ಮನವಿ ಮಾಡಿದರು.

    ಗ್ರಾಮದ ಸ್ಥಳೀಯ ನಾಗರಿಕರಿಗೆ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಹಾಗೂ ರಸ್ತೆ, ಚರಂಡಿಗಳ ವ್ಯವಸ್ಥೆ ಬೀದಿ ದೀಪಗಳ ಕೊರತೆ ಇದ್ದು ಸರಿಪಡಿಸುವಂತೆ ಕೋರಿದರು.

     

    ತಾಲೂಕಿನ ಗ್ರಾಮಗಳಲ್ಲಿ ಸ್ಮಶಾನಗಳ ಕೊರತೆ ತಾಂಡವವಾಡುತ್ತಿದ್ದು ಐಯಮ್ಮನಹಳ್ಳಿ, ದುರ್ಗೆನಹಳ್ಳಿ,ನೆಲ್ಲುಗುದ್ದಿಗೆ ಗ್ರಾಮಗಳಲ್ಲಿ ಸ್ಮಶಾನದ ಕೊರತೆ ಇದ್ದು ಪ್ರಸ್ತುತ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರು ಸತ್ತ ವ್ಯಕ್ತಿಯನ್ನು ಮಣ್ಣು ಮಾಡಲು ಪರದಾಡುವಂತೆ ಆಗಿದೆ ಸದರಿ ಗ್ರಾಮಗಳಿಗೆ ಸ್ಮಶಾಣಕ್ಕಾಗಿ ಭೂಮಿ ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.

     

    ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರುವ ದುರ್ಗೆನಹಳ್ಳಿ, ಮತ್ತು ನೆಲ್ಲುಗುದಿಗೆ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಹಿಂದುಳಿದವರು ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಮೇಲ್ಮಾತಿ ಬಡವರು ಒಂದೊಂದು ಸಣ್ಣ ಮನೆಗಳಲ್ಲಿ 2-3 ಕುಟುಂಬಗಳು ವಾಸವಾಗಿರುತ್ತಾರೆ. ಇವರು ಪರ್ಯಾಯವಾಗಿ ಮನೆಗಳನ್ನು ಕಟ್ಟಿಕೊಳ್ಳಲು ನಿವೇಶನಗಳಿರುವುದಿಲ್ಲ. ಈ ಹಿನ್ನೆಲೆಯಲ್ಲಿ ದುರ್ಗೆನಹಳ್ಳಿ ಹಾಗೂ ನೆಲುಗುದಿಗೆ ಎರಡು ಗ್ರಾಮಗಳ ದಾಖಲಾತಿಗಳನ್ನು ಪರಿಶೀಲಿಸಿ ಸೂಕ್ತ ಸ್ಥಳವನ್ನು ಗುರುತಿಸಿ ಬಡ ಕುಟುಂಬಗಳಿಗೆ ನಿವೇಶನಗಳನ್ನು ಹಂಚಿಕೆ ಮಾಡಬೇಕೆಂದು ಮನವಿ ಮಾಡಿದರು.

    ದಿವಂಗತ ಶ್ರೀಯುತ ಪರಶುರಾಮ್ .ಪಿ.ಎಸ್.ಐ ಸಾವಿನ ಪ್ರಕರಣವನ್ನು ಸಿ.ಐ.ಡಿ ಗೆ ಬದಲಾಗಿ ಸಿ.ಬಿ.ಐ ತನಿಖೆಗೆ ವಹಿಸುವಂತೆ ಒತ್ತಾಯ* 

     

    ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಪಿ ಎಸ್ ಐ ಪರಶುರಾಮ್ ಅನುಮಾನಾಸ್ಪದವಾಗಿ ಸಾವನಪ್ಪಿದ್ದು.ಕಾರಣರಾದವರನ್ನು ಈ ಕೂಡಲೇ ಬಂಧಿಸಿ ತನಿಖೆ ನಡೆಸುವಂತೆ ಹಾಗೂ ಪರಶುರಾಮ್ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿ ಮೃತ ಪರಶುರಾಮ್ ಅವರ ಮಡದಿಯ ವಿದ್ಯಾರ್ಹತೆಗೆ ತಕ್ಕಂತೆ ಹುದ್ದೆಯನ್ನು ನೀಡಬೇಕೆಂದು ಕರ್ನಾಟಕ ಭೀಮ್ ಸೇನೆ ಪದಾಧಿಕಾರಿಗಳು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಚಾಲಕರು ಗುರುಪ್ರಸಾದ್, ಬೆಂಗಳೂರು ಕಾರ್ಯದರ್ಶಿ ರಮೇಶ್,ಮದುಕುಮಾರ್, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ದಾಳಪ್ಪ, ನೆಲಮಂಗಲ ತಾಲ್ಲೂಕುಅಧ್ಯಕ್ಷ ಕುಮಾರ್ ಸೇರಿದಂತೆ ಜಿಲ್ಲೆಯ ಹಲವು ದಲಿತ ಮುಖಂಡರು,ಪ್ರಗತಿಪರ ಚಿಂತಕರು, ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.

  • *ಪ್ರೊ.ಬಿ. ಕೃಷ್ಣಪ್ಪರವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಗೆ 50ರ ಸಂಭ್ರಮೋತ್ಸವ : ಕಾರ್ಯಕ್ರಮದಲ್ಲಿ 10000ಕ್ಕೂ ಅಧಿಕ ಮಂದಿ ಭಾಗಿಯಾಗುವ ಸಾಧ್ಯತೆ*

    ದೊಡ್ಡಬಳ್ಳಾಪುರ ಆಗಸ್ಟ್ 07 ( ವಿಜಯಮಿತ್ರ) : ಬೆಂಗಳೂರಿನ ವಸಂತ ನಗರದ ಮಿಲ್ಲರ್ಸ್ ರಸ್ತೆಯ ಡಾ.ಅಂಬೇಡ್ಕರ್‌ಭವನದಲ್ಲಿ ನೆಡೆಯಲಿರುವ ಕರ್ನಾಟಕದ ದಲಿತ ಚಳವಳಿಯ 50 ವರ್ಷದ ಸಂಭ್ರಮೋತ್ಸವಕ್ಕೆ ಯುವ ದಲಿತ ಮುಖಂಡ ರಾಮಾಮೂರ್ತಿ (ರಾಮು)ನೇರಳಘಟ್ಟ ನೇತೃತ್ವದಲ್ಲಿ ನೂರಾರು ದಲಿತ ಮುಖಂಡರು ತಾಲ್ಲೂಕಿನಿಂದ ಕಾರ್ಯಕ್ರಮಕ್ಕೆ ತೆರಳಿದರು.

     

    ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಶಾಖೆ ಸಂಚಾಲಕ ರಾಮಾಮೂರ್ತಿ (ರಾಮು)ನೇರಳಘಟ್ಟ ಮಾತನಾಡಿ ಪ್ರೊಫೆಸರ್ ಬಿ ಕೃಷ್ಣಪ್ಪರವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ. ಸಂಖ್ಯೆ. 47/74-75) ಯ ಚಳವಳಿಗೆ 50 ವರ್ಷಗಳು ಪೂರ್ಣಗೊಂಡಿದ್ದು. ಈ ಸಂಭ್ರಮಾಚರಣೆಯಲ್ಲಿ ರಾಜ್ಯದ ಪ್ರತಿ ತಾಲ್ಲೂಕು ಹಾಗೂ ಗ್ರಾಮಗಳಿಂದ 10000ಕ್ಕೂ ಅಧಿಕ ಮುಖಂಡರು ಪಾಲ್ಗೊಳ್ಳುತ್ತಿದ್ದು. ಈ ಕಾರ್ಯಕ್ರಮವು ಇತಿಹಾಸ ಸೃಷ್ಟಿಸಲಿದೆ ಎಂದರು.

     

    ನಮ್ಮ ತಾಲ್ಲೂಕಿನಿಂದ ನೂರಾರು ಮುಖಂಡರು ಸಮಾರಂಭದಲ್ಲಿ ಭಾಗವಹಿಸುತ್ತಿದ್ದು ಹತ್ತಾರು ವಾಹನಗಳ ಮೂಲಕ ಕಾರ್ಯಕ್ರಮಕ್ಕೆ ತೆರಳುತ್ತಿದ್ದೇವೆ.ರಾಜ್ಯ ಸಮಿತಿ ನೇತೃತ್ವದಲ್ಲಿ ನೆಡೆಯುತ್ತಿರುವ ಸಂಭ್ರಮೋತ್ಸವ ರಾಜ್ಯ ಜನತೆಯ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯಲಿದೆ ಎಂದರು

     

    ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಪ್ರಮುಖರಾದ ನಂದಿಗುಂದ ಮೈಲಾರಪ್ಪ,ಮದುರೆ ನರಸಿಂಹಮೂರ್ತಿ, ನರಸಿಂಹಮೂರ್ತಿ ದೊಡ್ಡ ಕುಕ್ಕನಹಳ್ಳಿ, ನಾಗರತ್ನಮ್ಮ ಮಲ್ಲೋಹಳ್ಳಿ, ಮನು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

  • *ಕೊನಘಟ್ಟ ಪಂಚಾಯಿತಿ ಕಟ್ಟಡವನ್ನೇ ಖಾಸಗಿ ವ್ಯಕ್ತಿಗೆ ಖಾತೆ ಮಾಡಿರುವ ಆರೋಪ : ಗ್ರಾಮ ಪಂಚಾಯಿತಿ ಉಳಿಸಲು ಗ್ರಾಮಸ್ಥರ ಹೋರಾಟ*

    ದೊಡ್ಡಬಳ್ಳಾಪುರ : ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿ ಕಟ್ಟಡವನ್ನು ಖಾಸಗಿ ವ್ಯಕ್ತಿಗೆ ಖಾತೆ ಮಾಡಿಕೊಡಲಾಗಿದೆ ಎಂದು ಆರೋಪಿಸಿ ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

    ಕೊನಘಟ್ಟ ಗ್ರಾಮ ಪಂಚಾಯಿತಿ ಕಟ್ಟಡವಿರುವ ಜಾಗ ಖಾಸಗಿ ವ್ಯಕ್ತಿಯ ಹೆಸರಿಗೆ ಖಾತೆ ಮಾಡುವ ಮೂಲಕ ಪಂಚಾಯಿತಿ ಕಟ್ಟಡವು ಖಾಸಗಿ ವ್ಯಕ್ತಿಯ ಪಾಲಾಗಿದೆ, ಪಂಚಾಯಿತಿ ಕಟ್ಟಡದ ಜಾಗವನ್ನು ಉಳಿಸಿಕೊಳ್ಳಲು ಗ್ರಾಮಸ್ಥರು ಹೋರಾಟಕ್ಕೆ ಮುಂದಾಗಿದ್ದಾರೆ.

     

    ತಾಲ್ಲೂಕಿನ ಕೊನಘಟ್ಟ ಗ್ರಾಮದ ಸರ್ವೆ ನಂಬರ್ 351/2 ಹಾಗೂ 351/3ರ ಒಟ್ಟು 4 ಗುಂಟೆ ಜಾಗದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡವಿದ್ದು , ಕಳೆದ 40 ವರ್ಷಗಳಿಂದ ಇದೇ ಜಾಗದಲ್ಲಿ ಪಂಚಾಯಿತಿ ಕಾರ್ಯನಿರ್ವಹಿಸುತ್ತಿದೆ, ಗ್ರಾಮ ಪಂಚಾಯಿತಿ ಹೆಸರಲ್ಲಿ 11 ಬಿ ಇ ಖಾತೆಯನ್ನ ಹೊಂದಿದೆ. ಆದರೆ 20 ದಿನಗಳ ಹಿಂದೆ ಪಂಚಾಯಿತಿ ಜಾಗವನ್ನು ಬೇರೆಯವರ ಹೆಸರಿಗೆ ಪೌವತಿ ಖಾತೆ ಮಾಡಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ ,

    ಸರ್ವೆ ನಂಬರ್ 351/2 ಮತ್ತು 351/3 ಅನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಖಾತೆಯಾಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.ಇಂದು ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಪಂಚಾಯತಿ ಸದಸ್ಯರು ಮತ್ತು ಗ್ರಾಮಸ್ಥರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು, ಇದೇ ವೇಳೆ ಗ್ರಾಮ ಪಂಚಾಯತಿ ಸದಸ್ಯರಾದ ಮಂಜುನಾಥ್ ಮಾತನಾಡಿ ಗ್ರಾಮ ಪಂಚಾಯಿತಿ ಜಾಗ ಬೇರೆಯವರಿಗೆ ಖಾತೆಯಾಗಿರುವುದು ತಿಳಿದ ತಕ್ಷಣವೇ ತುರ್ತು ಸಭೆಯನ್ನ ಕರೆಯಲಾಗಿತು, ಸಭೆಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಖಾತೆ ಬದಲಾವಣೆಯ ಬಗ್ಗೆ ಯಾವುದೇ ಉತ್ತರ ನೀಡಿಲ್ಲ, ಸಭೆಯನ್ನು ಆಯೋಜನೆ ಮಾಡಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳೇ ಸಭೆಗೆ ಗೈರು ಹಾಜರಾಗಿದ್ದು, ಸಭೆಯ ನಡುವೆ ಏಕಾಏಕಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಯಾವುದೇ ಕಾರಣ ಹೇಳದೆ ಎದ್ದು ಹೋದರು,ಈ ಬೆಳವಣಿಗೆಗಳನ್ನು ಗಮನಿಸಿದ್ದಾಗ ಖಾತೆ ಬದಲಾವಣೆಯ ಹಿಂದೆ ಇವರು ಶಾಮೀಲಾಗಿರುವ ಸಂಶಯ ಇದೆ ಎಂದರು.

    ಗ್ರಾಮದ ಮುಖಂಡರಾದ ಕೃಷ್ಣಪ್ಪ ಮಾತನಾಡಿ, ಖಾತೆ ಬದಲಾಣೆ ಮಾಡುವಾಗ ಕಂದಾಯ ಅಧಿಕಾರಿಗಳ ಸ್ಥಳಕ್ಕೆ ಬಂದು ಮಹಜರ್ ಮಾಡಿ ತದನಂತರ ಖಾತೆ ಬದಲಾವಣೆ ಮಾಡಬೇಕು, ಆದರೆ ರೆವೆನ್ಸೂ ಇನ್ಸ್ ಪೇಕ್ಟರ್ ಆಗಲಿ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬಾರದೇ ಖಾತೆ ಬದಲಾವಣೆ ಮಾಡಿದ್ದಾರೆ, ಗ್ರಾಮ ಪಂಚಾಯಿತಿ ಕಟ್ಟಡ ಜಾಗದ ಖಾತೆಯನ್ನು ಬದಲಾವಣೆ ಮಾಡುವಾಗಲು ಅಧಿಕಾರಿಗಳ ಸಾಮಾನ್ಯ ಜ್ಞಾನ ಬಳಸದೆ ಇರುವುದು ಸಂಶಯಕ್ಕೆ ಕಾರಣವಾಗಿದೆ ಎಂದರು.

     

    ಗ್ರಾಮ ಪಂಚಾಯಿತ ಜಾಗದ ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಕೊನಘಟ್ಟ ಪಿಡಿಓ ರಶ್ಮಿ, ಸರ್ವೆ ನಂಬರ್ 351/1 ಮತ್ತು 351/3 ಎರಡರ ಜಾಗದ ಖಾತೆ ಬದಲಾವಣೆ ಮಾಡುವಾಗ ಅಧಿಕಾರಿಗಳಿಂದ ಸ್ಥಳ ಪರಿಶೀಲನೆಯಾಗಿಲ್ಲ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದಿರುವುದಿಲ್ಲ ಹಾಗೂ ನೋಟಿಸ್ ಸಹ ನೀಡಿರುವುದಿಲ್ಲ, ಯಾವ ದಾಖಲೆಗಳ ಮೇಲೆ ಖಾತೆ ಬದಲಾವಣೆ ಮಾಡಲಾಗಿದೆ ಮತ್ತು ಗ್ರಾಮ ಪಂಚಾಯಿತಿ ಹೆಸರಿಗೆ ಮತ್ತೆ ಪಹಣಿ ಮತ್ತು ಖಾತೆ ಮಾಡಿಕೊಡುವಂತೆ ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದರು.

     

    ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಬಾಲರಾಜ್, ಗ್ರಾಮಸ್ಥರಾದ ಪುನೀತ್ ಕುಮಾರ್,ನಾಗೇಶ್, ನಂಜೇಗೌಡ, ಶ್ರೀನಿವಾಸ್ ಶೆಟ್ಟಿ ಸೇರಿದಂತೆ ಗ್ರಾಮಸ್ಥರು ಇದ್ದರು.

  • 3ನೇ ದಿನಕ್ಕೆ ಕಾಲಿಟ್ಟ ಮೈಸೂರು ಚಲೋ ಪಾದಯಾತ್ರೆ : ಸಾವಿರಾರು ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದ ರಾಜ್ಯ ನಾಯಕರು

    ಆಗಸ್ಟ್ 05 ( ವಿಜಯ ಮಿತ್ರ ) : ನಿರಂತರ 3ನೇ ದಿನಕ್ಕೆ ಕಾಲಿಟ್ಟಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಸಮಾಜ ಸೇವಕರು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎಸ್ ಎಂ. ಹರೀಶ್ ಗೌಡ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡು 2 ನೇ ದಿನದ ಮೈಸೂರು ಚಲೋ ಪಾದಯಾತ್ರೆ ಯಶಸ್ವೀಗೊಳಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಪಾದಯಾತ್ರೆ ನಮ್ಮ ಶಕ್ತಿ ಪ್ರದರ್ಶನಕ್ಕಾಗಿ ಅಲ್ಲ ರಾಜ್ಯದ ಜನರ ಉತ್ತಮ ಭವಿಷ್ಯಕ್ಕಾಗಿ ಮಾಡುತ್ತಿದ್ದೇವೆ ಈ ಕಾರ್ಯದಲ್ಲಿ ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಮುಖಂಡರು, ಕಾರ್ಯಕರ್ತರು ಭಾಗವಹಿಸುವುದಷ್ಟೇ ಅಲ್ಲದೆ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿರುವುದು ಸಂತೋಷದ ಸಂಗತಿಯಾಗಿದೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾರ್ಯಕರ್ತರು ವಿಶೇಷವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡು ಮೈಸೂರು ಚಲೋ ಕಾರ್ಯಕ್ರಮವನ್ನು ಯಶಸ್ವೀ ಗೊಳಿಸಿದ್ದಾರೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಶಾಂತಿನಗರ ಪ್ರವೀಣ್, ಮುತ್ತೂರು ಮೂರ್ತಿ, ಕೋದಂಡರಾಮ, ಗುಡದಹಳ್ಳಿಆಶಾ, ಮುನಿರತ್ನಮ್ಮ,ಗೌರಮ್ಮ, ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

  • *ಪ್ರೊ. ಬಿ. ಕೃಷ್ಣಪ್ಪರವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಗೆ 50ರ ಸಂಭ್ರಮ: ಮುಖಂಡರಿಂದ ಕಾರ್ಯಕ್ರಮದ ಕರಪತ್ರ ಬಿಡುಗಡೆ*

    ದೊಡ್ಡಬಳ್ಳಾಪುರ ಆಗಸ್ಟ್ 04 ( ವಿಜಯಮಿತ್ರ) : ಪ್ರೊಫೆಸರ್ ಬಿ ಕೃಷ್ಣಪ್ಪರವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ. ಸಂಖ್ಯೆ. 47/74-75) ಯ ಚಳವಳಿಗೆ 50 ವರ್ಷಗಳು ಪೂರ್ಣಗೊಂಡಿದ್ದು ಸಂಭ್ರಮೋತ್ಸವದ ಕರಪತ್ರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ದೊಡ್ಡಬಳ್ಳಾಪುರ ತಾಲ್ಲೂಕು ಶಾಖಾ ಸಂಚಾಲಕ ರಾಮಮೂರ್ತಿ ( ರಾಮು )ನೇರಳೆಘಟ್ಟ ಬಿಡುಗಡೆ ಮಾಡಿದರು.

     

    ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕದ ದಲಿತ ಚಳವಳಿ 50 ವರ್ಷಗಳನ್ನು ಪೂರೈಸಿದ್ದು ಸಂಭ್ರಮೋತ್ಸವನ್ನು ಆಗಸ್ಟ್ 7ರಂದು ಬೆಂಗಳೂರಿನ ವಸಂತ ನಗರದ ಮಿಲ್ಲರ್ಸ್ ರಸ್ತೆಯ ಡಾ.ಅಂಬೇಡ್ಕರ್‌ಭವನದಲ್ಲಿ ಹಮ್ಮಿಕೊಂಡಿದ್ದು, ಕಾರ್ಯಕ್ರಮದ ಕರಪತ್ರವನ್ನು ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಬಿಡುಗಡೆ ಮಾಡಲಾಯಿತು.

    ನಂತರ ಮಧ್ಯಮಗಳೊಂದಿಗೆ ಮಾತನಾಡಿದ ಅವರು ನಮ್ಮ ತಾಲ್ಲೂಕಿನಿಂದ 200-300 ಜನರನ್ನು ಸಮಾರಂಭಕ್ಕೆ ಕರೆದೊಯ್ಯಲು ನಿರ್ಧರಿಸಲಾಗಿದೆ.ರಾಜ್ಯ ಸಮಿತಿ ನೇತೃತ್ವದಲ್ಲಿ ನೆಡೆಯುತ್ತಿರುವ ಸಂಭ್ರಮೋತ್ಸವವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ತೀರ್ಮಾನ ಕೈಗೊಂಡಿದ್ದೇವೆ ಎಂದರು.

     

    ಬೆಂಗಳೂರು ಗ್ರಾಮಾಂತರ,ದೊಡ್ಡಬಳ್ಳಾಪುರ ನಗರ ಹಾಗೂ  ಗ್ರಾಮಾಂತರ ಭಾಗದಿಂದ ತಾಲ್ಲೂಕಿನ ಪದಾಧಿಕಾರಿಗಳು, ಮುಖಂಡರು, ಸಮಾಜ ಬಾಂಧವರು ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಪ್ರಮುಖರಾದ ನಂದಿಗುಂದ ಮೈಲಾರಪ್ಪ,ಮದುರೆ ನರಸಿಂಹಮೂರ್ತಿ, ನರಸಿಂಹಮೂರ್ತಿ ದೊಡ್ಡ ಕುಕ್ಕನಹಳ್ಳಿ, ನಾಗರತ್ನಮ್ಮ ಮಲ್ಲೋಹಳ್ಳಿ, ಮನು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

  • *ಮೈಸೂರು ಚಲೋ : ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಎಂ.ಹರೀಶ್ ಗೌಡ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿ*

    ಬೆಂಗಳೂರು ಆಗಸ್ಟ್ 03 ( ವಿಜಯಮಿತ್ರ) : ರಾಜ್ಯ ಕಾಂಗ್ರೆಸ್ ಸರ್ಕಾರದ ಅಕ್ರಮಗಳ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಒಟ್ಟಾಗಿ ಪ್ರತಿಭಟನೆ ಮುಂದಾಗಿದ್ದು ಪ್ರತಿಭಟನೆಯ ಭಾಗವಾಗಿ ಆಯೋಜನೆ ಮಾಡಿರುವ ಬೃಹತ್ ಪಾದಯಾತ್ರೆ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಜೆಡಿಎಸ್ ಮುಖಂಡರು ಭಾಗಿಯಾದರು.

    ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಎಂ. ಹರೀಶ್ ಗೌಡ ಮಾತನಾಡಿ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಿ, ಕರ್ನಾಟಕವನ್ನು ಉಳಿಸಿ ಎಂಬ ಧ್ಯೆಯ ವಾಕ್ಯದೊಂದಿಗೆ ಪ್ರಾರಂಭಿಸಿರುವ ಪಾದಯಾತ್ರೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾವಿರಾರು ಜೆಡಿಎಸ್ ಕಾರ್ಯಕರ್ತರು

    ಕೆಂಗೇರಿ ಜೆಕೆ ಗ್ರಾಂಡ್ ಅರೆನಾ ಸೆಂಟರ್ ಬಳಿ ಆಯೋಜನೆ ಮಾಡಿರುವ ಪಾದಯಾತ್ರೆ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಮೂಲಕ ಯಶಸ್ವೀಗೊಳಿಸಿದ್ದೇವೆ ಎಂದು ತಿಳಿಸಿದರು.

     

    ಇದು ಕಾರ್ಯಕ್ರಮವಲ್ಲ ಇದು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನಮ್ಮ ಹೋರಾಟವಾಗಿದೆ. ಕರ್ನಾಟಕದ ಜನತೆಗೆ ಆಗುತ್ತಿರುವ ಮೋಸಕ್ಕೆ ತಕ್ಕ ಪಾಠ ಕಲಿಸುವವರೆಗೂ ಪಾದಯಾತ್ರೆ ನಿಲ್ಲಿಸುವ ಮತ್ತೆ ಇಲ್ಲ… ಜೆಡಿಎಸ್ ಪಕ್ಷದ ರಾಷ್ಟ್ರ ನಾಯಕರಾದ ಕುಮಾರಸ್ವಾಮಿ ಯವರ ಬೆಂಬಲವಾಗಿ ಆಸಾಂಖ್ಯಾತ ಅಭಿಮಾನಿಗಳ ಬಳಗ ಈ ಪಾದಯಾತ್ರೆಯಲ್ಲಿ ಸೇರುತ್ತಿದ್ದು. ಹಗರಣಗಳ ಸರಮಾಲೆ ಹೊತ್ತಿರುವ ಭ್ರಷ್ಟ ಸರ್ಕಾರಕ್ಕೆ ಬುದ್ದಿ ಕಲಿಸಿ,ಸ್ವಚ್ಛ ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ನಾಂದಿ ಈ ಪಾದಯಾತ್ರೆಯ ಮುಖ್ಯ ಉದ್ದೇಶ ಎಂದರು.

     

     

    ಈ ಸಂದರ್ಭದಲ್ಲಿ ಮುಖಂಡರಾದ ಪ್ರವೀಣ್ ಕುಮಾರ್, ಶಾಂತಿನಗರ ಅಶ್ವತ್ಥಪ್ಪ,ಸಂಜೀವ, ಮಹೇಶ್ ಹಾದ್ರಿಪುರ,. ಉಜ್ಜನಿ ನರಸಿಂಹಗೌಡ,ಕೋದಂಡ ರಾಮ, ಮಧು ಹಾಗೂ ಹಲವು ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.