Blog

  • ‘₹’ ಸಂಕೇತ ಕೈಬಿಟ್ಟ ತಮಿಳುನಾಡು ಸರ್ಕಾರ : ಕರವೇ ನಾರಾಯಣಗೌಡರಿಂದ ಪ್ರಶಂಸೆ

    ತಮಿಳುನಾಡು ಸರ್ಕಾರ ರುಪಾಯಿ ಚಿಹ್ನೆಯನ್ನು ತಮಿಳಿನಲ್ಲಿಯೇ ಸಿದ್ಧಪಡಿಸಿ ಅದನ್ನು ಬಳಸಲು ಆರಂಭಿಸಿದೆ ಈ ಬೆಳವಣಿಗೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಸ್ವಾಗತಿಸಿದ್ದಾರೆ.

     

    ತಮಿಳುನಾಡು ಸರ್ಕಾರದ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ಮುಂಗಡಪತ್ರವನ್ನು ಓದುವ ಒಂದು ದಿನ ಮೊದಲು ತಮಿಳುನಾಡು ಸರ್ಕಾರ ತಮಿಳು ಭಾಷೆಯ ” ರೂ ” ರುಪಾಯಿ ಚಿಹ್ನೆಯನ್ನು ಬಳಸುವ ನಿರ್ಧಾರ ಕೈಗೊಂಡಿದ್ದು. ತಮಿಳುನಾಡಿನಲ್ಲಿ ತಮಿಳು ಲಿಪಿಯ ರೂಪಾಯಿ ಸಂಕೇತವನ್ನು ಬಳಸುವ ಗಟ್ಟಿಯಾದ ತೀರ್ಮಾನ ಮಾಡಿದ್ದಾರೆ.

    ಹೌದು ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ…ತಮಿಳಿಗರ ಸ್ವಾಭಿಮಾನದ ರಾಜಕಾರಣಕ್ಕೆ ಇದು ಸಾಕ್ಷಿ. ತಮಿಳಿಗರು ತಮ್ಮ ಮೇಲೆ ಇನ್ನೊಂದು ನುಡಿ ಹೇರಿಕೆಯಾಗುವುದನ್ನು ಎಂದೂ ಸಹಿಸೋದಿಲ್ಲ.ತಮಿಳುನಾಡು ಸರ್ಕಾರದ ಈ ಸ್ವಾಭಿಮಾನದ ನಡೆಯ ನಿರ್ಧಾರವನ್ನು ಅನುಸರಿಸಿ ಕರ್ನಾಟಕ ಸರ್ಕಾರವೂ ರುಪಾಯಿ ಚಿಹ್ನೆಯನ್ನು ಕನ್ನಡಲಿಪಿಗೆ ಅನುಗುಣವಾಗಿ ಬದಲಾಯಿಸಬೇಕು. ಕರ್ನಾಟಕದಲ್ಲಿ ಅದನ್ನೇ ಬಳಕೆಗೆ ತರಬೇಕು. ನಮ್ಮ‌ ಅಸ್ಮಿತೆ ಇರುವುದು ಕನ್ನಡ ಲಿಪಿಯಲ್ಲಿ, ಇನ್ಯಾವುದೋ ದೇವನಾಗರಿ ಲಿಪಿಯಲ್ಲಲ್ಲ. ಹೀಗಾಗಿ ರುಪಾಯಿಗೊಂದು ಕನ್ನಡದ ಚಿಹ್ನೆ ಸಿದ್ಧಪಡಿಸಬೇಕು ಎಂದಿದ್ದಾರೆ.

     

    ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಎಲ್ಲ ಪರೀಕ್ಷೆಗಳೂ ಕನ್ನಡದಲ್ಲೇ ನಡೆಯಬೇಕು ಎಂದು ಇತ್ತೀಚಿಗಷ್ಟೇ ಆಗ್ರಹಿಸಿದ್ದೆ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾದ್ದರಿಂದ ಕರ್ನಾಟಕ ಸರ್ಕಾರದ ಸೇವೆಗೆ ನೇಮಕ ಆಗುವ ಅಧಿಕಾರಿಗಳು ಕನ್ನಡವನ್ನೇ ಬಳಸಬೇಕು, ಕನ್ನಡದ ಜ್ಞಾನವೇ ಅವರಿಗೆ ಅತಿಮುಖ್ಯ ಅರ್ಹತೆ.‌ ಹೀಗಾಗಿ ಕನ್ನಡದಲ್ಲೇ ಕೆಪಿಎಸ್ಸಿ ನಡೆಸುವ ಪರೀಕ್ಷೆಗಳು ಮತ್ತು‌ ಕರ್ನಾಟಕ ಸರ್ಕಾರದ ಸೇವೆಗೆ ನಡೆಯುವ ಇತರ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳೂ ಕನ್ನಡದಲ್ಲೇ ನಡೆಯಬೇಕು ಎಂದು ನಾನು ಹೇಳಿದ್ದೆ.ವಿಶೇಷವೆಂದರೆ ನನ್ನ‌ ಆಗ್ರಹವನ್ನು ಮರಾಠಿ ನುಡಿಗೆ ಅನ್ವಯಿಸಿ ಮಹಾರಾಷ್ಟ್ರ ಸರ್ಕಾರ ಕಾಯ್ದೆ ರೂಪಿಸಿ ಜಾರಿ ಮಾಡಿದೆ. ಮಹಾರಾಷ್ಟ್ರ ಸರ್ಕಾರದ ಸೇವೆಗೆ ಸಿಬ್ಬಂದಿ ನೇಮಕಕ್ಕೆ ನಡೆಯುವ ಪೂರ್ವಭಾವಿ ಮತ್ತು‌ ಮುಖ್ಯ ಪರೀಕ್ಷೆಗಳನ್ನು ಮರಾಠಿಯಲ್ಲೇ ನಡೆಸುವ ಕಾಯ್ದೆ ಜಾರಿಯಾಗಿದೆ. ಇದರ ಪರಿಣಾಮವಾಗಿ ಮರಾಠಿ ಮಾಧ್ಯಮದ ಓದುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತೆ. ಮರಾಠಿ ನುಡಿ ಬಳಸುವವರ ಸಂಖ್ಯೆಯೂ ಹೆಚ್ಚಾಗುತ್ತದೆ. ಈ ನಿರ್ಧಾರಕ್ಕೆ ಮಹಾರಾಷ್ಟ್ರ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

     

    ಕರ್ನಾಟಕ ಸರ್ಕಾರವೂ ಕೂಡಲೇ ಸೂಕ್ತ ಕಾನೂನು ರೂಪಿಸಿ ಕೆಪಿಎಸ್ಸಿ ಸೇರಿದಂತೆ ಕರ್ನಾಟಕ ಸರ್ಕಾರದ ಸೇವೆಗೆ ನೇಮಕವಾಗುವ ಅಧಿಕಾರಿ, ನೌಕರರ ಆಯ್ಕೆಗೆ ನಡೆಯುವ ಎಲ್ಲ ಪರೀಕ್ಷೆಗಳನ್ನೂ ಕನ್ನಡದಲ್ಲೇ ನಡೆಸುವ ತೀರ್ಮಾನ ಕೈಗೊಳ್ಳಬೇಕು ಎಂದು ಮತ್ತೊಮ್ಮೆ ಆಗ್ರಹಿಸುತ್ತೇನೆ. ತಮ್ಮ ನುಡಿ, ಸಂಸ್ಕೃತಿಯನ್ನ ರಕ್ಷಿಸಲು ನೆರೆಯ ರಾಜ್ಯಗಳು ಕೈಗೊಳ್ಳುತ್ತಿರುವ ತೀರ್ಮಾನಗಳನ್ನು ನೋಡಿಯಾದರೂ ರಾಜ್ಯ ಸರ್ಕಾರ ಕನ್ನಡ ಅಸ್ಮಿತೆ ಉಳಿಸಲು ಉತ್ತಮ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

     

     

  • ಸಸಿ ನೀಡುವ ಮೂಲಕ ನೂತನ ಜಿಲ್ಲಾಧಿಕಾರಿಗಳನ್ನು ಸ್ವಾಗತಿಸಿದ ಜಿಲ್ಲಾ ಸಪಾಯಿ ಕರ್ಮಚಾರಿ ಸಮಿತಿಯ ಸದಸ್ಯ ಆರ್ ವಿ ಮನು

    ಬೆಂಗಳೂರು ಗ್ರಾಮಾಂತರ : ನೂತನ ಜಿಲ್ಲಾಧಿಕಾರಿ ರವರನ್ನು ಸ್ವಾಗತ ಕೋರಿದ ಜಿಲ್ಲಾ ಸಪಾಯಿ ಕರ್ಮಚಾರಿ ಸಮಿತಿಯ ಸದಸ್ಯರಾದ ಆರ್ ವಿ ಮನು ಹಾಗೂ ಜಿಲ್ಲಾಧಿಕಾರಿ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಫಾಯಿ ಕರ್ಮಚಾರಿ ಪುನರ್ ವಸತಿ ಸಮಿತಿ ಸಭೆ ನೆಡೆಯಿತು

     

    ಸಭೆಗೆ ಮುನ್ನ ನೂತನ ಜಿಲ್ಲಾಧಿಕಾರಿಗಳನ್ನು ಜಿಲ್ಲಾ ಸಪಾಯಿ ಕರ್ಮಚಾರಿ ಸಮಿತಿಯ ಸದಸ್ಯರಾದ ಆರ್ ವಿ ಮನು ಮತ್ತು ಇತರೆ ಸದಸ್ಯರು ಸಸಿ ನೀಡಿ ಸ್ವಾಗತಿಸಿದರು.

     

    ಈ ಕುರಿತು ಜಿಲ್ಲಾ ಸಪಾಯಿ ಕರ್ಮಚಾರಿ ಸಮಿತಿಯ ಸದಸ್ಯರಾದ ಆರ್ ವಿ ಮನು ಮಾತನಾಡಿ ಸಭೆಯಲ್ಲಿ ಸಪಾಯಿ ಕರ್ಮಚಾರಿಗಳ ಹಲವು ಸಮಸ್ಯೆಗಳನ್ನು ಒಳಗೊಂಡಂತೆ ಅನೇಕ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿತ್ತು.ಸಪಾಯಿ ಕರ್ಮಚಾರಿಗಳ ಅಭಿವೃದ್ಧಿಗಾಗಿ ಹಾಗೂ ಅವರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು ಎಂದರು.

     

    ಸರ್ಕಾರದ ಆದೇಶದಂತೆ ಶ್ರೀ ಶ್ರೀ ಯೋಗಿ ನಾರಾಯಣ ಶ್ರೀ ಕೈವಾರ ತಾತಯ್ಯನವರ ಪೂಜೆಯಲ್ಲಿ ಜಿಲ್ಲಾ ಸಪಾಯಿ ಕರ್ಮಚಾರಿ ಸಮಿತಿಯ ಸದಸ್ಯರಾದ ಮನು ಆರ್ ವಿ, ಮ್ಯಾಥೋ ಮುನಿಯಪ್ಪ,ರವಿ,ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಈ ಸಮಯದಲ್ಲಿ ಹಾಜರಿದ್ದರು.

  • ಕೊನಘಟ್ಟ : ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮನವರ 33 ನೇ ವರ್ಷದ ಸಂಭ್ರಮದ ಕರಗ ಮಹೋತ್ಸವ

    ದೊಡ್ಡಬಳ್ಳಾಪುರ : ಕೊನಘಟ್ಟ ಗ್ರಾಮದ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮನವರ 33 ನೇ ವರ್ಷದ ಸಂಭ್ರಮದ ಕರಗ ಮಹೋತ್ಸವ ಕಾರ್ಯಕ್ರಮವು ಆದಿಶಕ್ತಿ ಮಹಾಸಂಸ್ಥಾನ ಮಠದ ಶ್ರೀಶ್ರೀಶ್ರೀ ಪ್ರಣವಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಗುರುವಾರ ನೆರವೇರಿತು.

     

    ತಾಲ್ಲೂಕಿನ ಕೊನಘಟ್ಟ ಗ್ರಾಮದ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಮಾರ್ಚ್ 9 ರಿಂದ 16ರವರೆಗೆ 33ನೇ ವರ್ಷದ ಕರಗ ಮಹೋತ್ಸವದ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ವಹ್ನಿಕುಲ (ತಿಗಳರ) ಸಂಘದ ನಿರ್ದೇಶಕರಾದ ಕೆ.ಎಂ. ಮಂಜನಾಥ್ ತಿಳಿಸಿದರು.

    ಈ ಕುರಿತು ಮಾತನಾಡಿದ ಅವರು ಕೊನಘಟ್ಟ ಹಾಗೂ ಅಕ್ಕ ಪಕ್ಕದ ಗ್ರಾಮಗಳ ಗ್ರಾಮಸ್ಥರು,ಸರ್ವ ಸಮುದಾಯಗಳ ಮುಖಂಡರು ಒಟ್ಟಾಗಿ ಅತ್ಯಂತ ಸಂಭ್ರಮ ಹಾಗೂ ಸಂತೋಷದಿಂದ ಪಕ್ಷಾತೀತವಾಗಿ ಮಹೋತ್ಸವವನ್ನು ಆಚರಿಸುತ್ತಿರುವುದು ವಿಶೇಷ ಸಂಗತಿಯಾಗಿದೆ , ಈ ಬಾರಿ ಶ್ರೀ ವಿನಾಯಕ ಮುತ್ತಿನ ಪಲ್ಲಕ್ಕಿ ಉತ್ಸವ,ಶ್ರೀ ಕೃಷ್ಣದೇವರ ಮುತ್ತಿನ ಪಲ್ಲಕ್ಕಿ ಉತ್ಸವ,ಶ್ರೀ ಆಂಜನೇಯ ಸ್ವಾಮಿ ಮುತ್ತಿನ ಪಲ್ಲಕ್ಕಿ ಉತ್ಸವ,ಕೊನಘಟ್ಟ ಶ್ರೀ ವೀರಭದ್ರ ಸ್ವಾಮಿ ಮುತ್ತಿನ ಪಲ್ಲಕ್ಕಿ ಉತ್ಸವ,ಶ್ರೀ ಭೀಮನ ಮುತ್ತಿನ ಪಲ್ಲಕ್ಕಿ ಉತ್ಸವ ಸೇರಿದಂತೆ ಹಲವು ಉತ್ಸವಗಳು ಅದ್ದೂರಿಯಾಗಿ ನಡೆದವು.

     

    ವಹ್ನಿಕುಲ ಕ್ಷತ್ರಿಯ ಗುರುಪೀಠ ಆದಿಶಕ್ತಿ ಮಹಾಸಂಸ್ಥಾನ ಮಠದ ಶ್ರೀಶ್ರೀಶ್ರೀ ಪ್ರಣವಾನಂದಪುರಿ ಮಹಾಸ್ವಾಮಿಗಳು ಕಾರ್ಯಕ್ರಮ ದಿವ್ಯ ಸಾನಿಧ್ಯವಹಿಸಿ ಮಹೋತ್ಸವಕ್ಕೆ ಆಗಮಿಸಿದ ಭಕ್ತಾದಿಗಳನ್ನು ಆಶೀರ್ವದಿಸಿದರು.

    ದೇವಾಲಯದಲ್ಲಿ ವಿಶೇಷವಾಗಿ ಹೋಮ,ದೇವಾಲಯಕ್ಕೆ ಸುಣ್ಣ, ಬಣ್ಣ, ಪುಣ್ಯಾಹ ಗುರುಡ ಧ್ವಜಾರೋಹಣ, ಪೂಂಗಲ್ ಸೇವೆ,ಹಸಿಕರಗ, ವರ್ಣರಂಜಿತ ದೀಪಾಲಂಕಾರಗಳಿಂದ ಕೂಡಿದ ಆರತಿಗಳ ಅಗ್ನಿಕುಂಡ ಪ್ರವೇಶ, ಕೀಲು ಕುದುರೆ ನೃತ್ಯ,ವಾದ್ಯಗಳು, ಕಲ್ಯಾಣೋತ್ಸವ, ಕಣದ ಬಳಿ ಬಳೆ ತೊಡಿಸುವ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮಾರ್ಚ್ 9 ರಿಂದ 16 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

    ಸಾವಿರಾರು ಸಂಖ್ಯೆಯಲ್ಲಿ ತಾಲ್ಲೂಕಿನ ಜನತೆ ಕರಗ ಮಹೋತ್ಸವದಲ್ಲಿ ಭಾಗವಹಿಸಿ ಸಂಭ್ರಮಿಸಿದರು.

    ಕರಗ ಮಹೋತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದ ತಾಲೂಕಿನ ಜನತೆಗೆ ಕೊನಘಟ್ಟ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮಸೇವಾ ಟ್ರಸ್ಟ್ (ರಿ.) ವಹ್ನಿಕುಲ (ತಿಗಳರು) ಗೌಡರು, ಯಜಮಾನರು, ಗಣಾಚಾರರು ಕೋಲುಕಾರ್ ಕುಲಸ್ಥರು ಹಾಗೂ ಕುಮಾರ ಮಕ್ಕಳು ಹಾಗೂ ಕೊನಘಟ್ಟ ಹಾಗೂ ಅಕ್ಕಪಕ್ಕ ಗ್ರಾಮಗಳ ಗ್ರಾಮಸ್ಥರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

  • “ಗ್ಯಾರಂಟಿ ಅನುಷ್ಠಾನ ಸಮಿತಿ”ಹೆಸರಿನಲ್ಲಿ ಸಾರ್ವಜನಿಕರ ಹಣ ಪೋಲಾಗುತ್ತಿದ್ದು ಯಾವುದೇ ಭತ್ಯೆ, ಗೌರವಧನ ಪಡೆಯದೆ ಅನುಷ್ಠಾನ ಸಮಿತಿಯಲ್ಲಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಲು ಕೆ ಆರ್ ಎಸ್ ಸಿದ್ದ – ಬಿ. ಶಿವ ಶಂಕರ್

    ದೊಡ್ಡಬಳ್ಳಾಪುರ : ಕೆ ಆರ್ ಎಸ್ ಪಕ್ಷದ ಸದಸ್ಯರು ಯಾವುದೇ ಭತ್ಯೆ, ಗೌರವಧನ ಪಡೆಯದೆ ಅನುಷ್ಠಾನ ಸಮಿತಿಯಲ್ಲಿ ಸ್ವಯಂಸೇವಕರ ಕಾರ್ಯನಿರ್ವಹಿಸಲು ಸಿದ್ದರಿದ್ದೇವೆ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ತನ್ನ ಪಂಚ ಗ್ಯಾರೆಂಟಿ ಯೋಜನೆಗಳನ್ನು ಸಮಪರ್ಕವಾಗಿ ಅನುಷ್ಠಾನ ಮಾಡಬೇಕೆಂಬ ಉದ್ದೇಶ ಇದ್ದರೆ ಕೆ ಆರ್ ಎಸ್ ಪಕ್ಷದ ಸೈನಿಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಸಾರ್ವಜನಿಕ ಹಣವನ್ನು ಉಳಿಸಲಿ ಇಲ್ಲಾ ತಕ್ಷಣವೇ ಈ ಗ್ಯಾರೆಂಟಿ ಅನುಷ್ಠಾನ ಸಮಿತಿಗಳನ್ನು ರದ್ದುಪಡಿಸಲಿ ಎಂದು ಆರ್ ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ ಶಿವಶಂಕರ್ ಆಗ್ರಹಿಸಿದರು.

    ತಾಲೂಕಿನ ಕೆ ಆರ್ ಎಸ್ ಪಕ್ಷದ ಕಛೇರಿಯಲ್ಲಿ ನೆಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡುವ ಕಾರಣ ನಿಟ್ಟಿನಲ್ಲಿ “ಗ್ಯಾರಂಟಿ ಅನುಷ್ಠಾನ ಸಮಿತಿ”ಗಳನ್ನು ರಚಿಸಿದೆ ಸಮಿತಿಯ ಪದಾಧಿಕಾರಿಗಳಿಗೆ ಮಾಸಿಕ ವೇತನ ಮತ್ತು ಸದಸ್ಯರುಗಳಿಗೆ ಸಭಾ ಭತ್ಯೆ ನೀಡಲಾಗುತ್ತಿದ್ದು, ಇದರಿಂದ ಈ ತಿಂಗಳು ಅಂದಾಜು 2 ಕೋಟಿ ಸರ್ಕಾರಕ್ಕೆ ಹೊರೆಯಾಗುತ್ತಿದೆ. ಸರ್ಕಾರದಲ್ಲಿ ಹಣವಿಲ್ಲದೆ, ಗ್ಯಾರಂಟಿ ಯೋಜನೆಗಳಿಗೆ ಬಿಡುಗಡೆ ಮಾಡಲಾಗುತ್ತಿಲ್ಲ, ಆದರೆ, ವಾರ್ಷಿಕವಾಗಿ 30 ಕೋಟಿ ಹಣವನ್ನು ಸರ್ಕಾರ ಈ ಸಮಿತಿಗೆ ವೆಚ್ಚ ಮಾಡುತ್ತಿದೆ.ಗ್ಯಾರೆಂಟಿ ಅನುಷ್ಠಾನ ಸಮಿತಿಯಲ್ಲಿ ಉಚಿತವಾಗಿ ಕೆ ಆರ್ ಎಸ್ ಕಾರ್ಯಕರ್ತರು ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ತಿಳಿಸಿದರು.

     

    ಗ್ಯಾರೆಂಟಿ ಯೋಜನೆಯ ಭಾಗವಾಗಿ ಸಾರಿಗೆ ನಿಗಮಗಳಿಗೆ 900 ಕೋಟಿಗೂ ಅಧಿಕ ಹಣ ಪಾವತಿಸಬೇಕಿದೆ, ಇನ್ನೂ ಎರಡು ತಿಂಗಳ ಗೃಹಲಕ್ಷ್ಮಿ ಹಣ ರಾಜ್ಯದ ಮಹಿಳೆಯರಿಗೆ ತಲುಪಿಲ್ಲ, ಆದರೂ ಕಾಂಗ್ರೆಸ್ ಕಾರ್ಯಕರ್ತರ ಓಲೈಕೆಗೆ ಹಣ ವೆಚ್ಚ ಮಾಡಲಾಗುತ್ತಿದೆ. ಇನ್ನು ರಾಜ್ಯದ ಹಲವಾರು ಕೆರೆ ಅಭಿವೃದ್ಧಿಗಾಗಿ ಒಂದೆರಡು ಕೋಟಿಯ ಯೋಜನೆಗಳಿಗೆ ಹಣ ಇಲ್ಲವೆಂದು ಸರ್ಕಾರ ಪ್ರಸ್ತಾವನೆಗಳ ತಿರಸ್ಕರಿಸಿದೆ, ವಿದ್ಯಾರ್ಥಿ ವೇತನ ನೀಡಲು ಹಣವಿಲ್ಲ, ಆದರೆ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲು ಹಣ ಇದೆ ಎಂದು ಆರೋಪಿಸಿದರು.

     

    ಸರ್ಕಾರದ ಆಡಳಿತ ಯಂತ್ರ ಸುಸ್ಥಿಯಲ್ಲಿದ್ದರೆ ಮತ್ತು ಶಾಸಕರು ತಮ್ಮ ಕರ್ತವ್ಯವನ್ನು ಸೂಕ್ತವಾಗಿ ನಿಭಾಯಿಸಿದರೆ ಸಮಿತಿಗಳ ಅಗತ್ಯವೇ ಇರುವುದಿಲ್ಲ. ಗ್ಯಾರಂಟಿ ಅನುಷ್ಠಾನ ಸಮಿತಿಗಳ ಉದ್ದೇಶ ಸಾರ್ವಜನಿಕ ಹಿತಾಸಕ್ತಿಯೇ ಆಗಿದ್ದರೆ ಕೆ ಆರ್ ಎಸ್ ಪಕ್ಷದ ಸದಸ್ಯರು ಯಾವುದೇ ಭತ್ಯೆ, ಗೌರವಧನ ಪಡೆಯದೆ ಅನುಷ್ಠಾನ ಸಮಿತಿಯಲ್ಲಿ ಸ್ವಯಂಸೇವಕರ ಕಾರ್ಯನಿರ್ವಹಿಸಲು ಸಿದ್ದರಿದ್ದೇವೆ ಎಂದರು.

    ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಬಿ.ಶಿವಶಂಕರ್ , ಕಾರ್ಮಿಕ ಘಟಕ ಜಿಲ್ಲಾ ಕಾರ್ಯದರ್ಶಿ ಲೀಲಾ ರಾಮ್, ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಮಾರುತಿ, ತಾಲೂಕು ಪ್ರಧಾನ ಕಾರ್ಯದರ್ಶಿ ಮುರಾರಿ ದೊಡ್ಡಬಳ್ಳಾಪುರ , ದೊಡ್ಡಬಳ್ಳಾಪುರ ತಾಲೂಕು ಮಹಿಳಾ ಅಧ್ಯಕ್ಷರಾದ ಚಂದ್ರಿಕಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

  • ರಾಜಘಟ್ಟ ವಿಎಸ್ಎಸ್ಎನ್ ನೂತನ ಅಧ್ಯಕ್ಷರಾಗಿ ಮುನಿಹನುಮಯ್ಯ, ಉಪಾಧ್ಯಕ್ಷರಾಗಿ ಆನಂದ್ ಅವಿರೋಧ ಆಯ್ಕೆ.

    ದೊಡ್ಡಬಳ್ಳಾಪುರ : ತಾಲ್ಲೂಕಿನ ರಾಜಘಟ್ಟ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ನಿಯಮಿತಕ್ಕೆ ಮಂಗಳವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕ್ರಮವಾಗಿ ಮುನಿಹನುಮಯ್ಯ, ಆನಂದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಿಟರ್ನಿಂಗ್ ಅಧಿಕಾರಿ, ಚುನಾವಣಾಧಿಕಾರಿ ನಾಗಮಣಿ ಕೆ.ಎನ್ ಘೋಷಿಸಿದರು.

     

     

    ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನ ಶಾಸಕ ಧೀರಜ್ ಮುನಿರಾಜು ಅಭಿನಂದಿಸಿ ಮಾತನಾಡಿದರು 2024-29 ನೇ ಸಾಲಿನ ಅವಧಿಗೆ ಈ ಚುನಾವಣೆ ನಡೆದಿದ್ದು ಮುಂದಿನ ಐದು ವರ್ಷಗಳ ಕಾಲ ಸಂಘವು ರೈತರ ಪರವಾಗಿ ನಡೆದುಕೊಂಡು, ಸಂಘವನ್ನ ಲಾಭದತ್ತ ಕೊಂಡೊಯ್ಯಬೇಕು. ರಾಜಘಟ್ಟ ವಿಎಸ್ಎಸ್ಎನ್ ಬಲಿಷ್ಟವಾಗಿ ರೂಪಗೊಳ್ಳಲಿ, ಎಲ್ಲರೂ ಒಗ್ಗಟ್ಟಾಗಿ ಅಭಿವೃದ್ಧಿಗೆ ಶ್ರಮಿಸೋಣ ಎಂದು ಶುಭ ಹಾರೈಸಿದರು.

     

    ದೊಡ್ಡಬಳ್ಳಾಪುರದ ರಾಜಘಟ್ಟ ವಿಎಸ್ಎಸ್ಎನ್ ನೂತನ ಅಧ್ಯಕ್ಷ ಮುನಿಹನುಮಯ್ಯ, ಉಪಾಧ್ಯಕ್ಷ ಆನಂದ್ ರನ್ನ ಶಾಸಕ ಧೀರಜ್ ಮುನಿರಾಜು ಅಭಿನಂದಿಸಿದರು.

     

    ಈ ಸಂದರ್ಭದಲ್ಲಿ ನಿರ್ದೇಶಕರಾದ ಭೈರೇಗೌಡ, ಆಂಜಿನಪ್ಪ, ಬಾಬು, ದೇವರಾಜು, ಮುನಿಯಪ್ಪ, ಕೋಡಿ ನರಸಿಂಹಮೂರ್ತಿ, ಶಾಂತಮ್ಮ, ಓಬಳೇಶ್, ಚನ್ನಪ್ಪ. ಭಾಸ್ಕರ್ ರಾವ್, ಮುನಿರತ್ನಮ್ಮ ಮುಖಂಡರಾದ ಕುಮಾರ್, ಶಿವಕುಮಾರ್, ಅಂಬರೀಶ್, ಹರೀಶ್ , ಶಿವು, ಕಾಂತರಾಜು, ದಾಸಗೊಂಡನಹಳ್ಳಿ ಹರೀಶ್. ಚನ್ನಕೇಶವ ಉಪಸ್ಥಿತರಿದ್ದರು.

  • ನಾಳೆ (ಮಾರ್ಚ್ 14) ತೂಬಗೆರೆ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಬ್ರಹ್ಮರಥೋತ್ಸವ

    ದೊಡ್ಡಬಳ್ಳಾಪುರ: ತಾಲೂಕಿನ  ಇತಿಹಾಸ ಪ್ರಸಿದ್ದ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಸ್ವಾಮಿ ಬ್ರಹ್ಮರಥೋತ್ಸವ, ಸಕಲ ಸಿದ್ದತೆ ನಡೆದಿದೆ. ಬ್ರಹ್ಮರಥೋತ್ಸದ ಪ್ರಯುಕ್ತ ದೇಗುಲವನ್ನು  ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದೆ.

     

    ಮಧ್ಯಾಹ್ನ 12-12 ರಿಂದ 1:00 ರೊಳಗಿನ ಅಭಿಜಿನ್ ಲಗ್ನದಲ್ಲಿ ಬ್ರಹ್ಮ ರಥೋತ್ಸವ ನಡೆಯಲಿದೆ.

    ರಥೋತ್ಸವದ ನಂತರ ಅನ್ನಸಂತರ್ಪಣೆ ಹಾಗೂ ವಿವಿಧ ಸಂಘಟನೆಗಳ ಮೂಲಕ ಪಾನಕ ಮಜ್ಜಿಗೆ ವಿತರಣೆ  ಕಾರ್ಯಕ್ರಮಗಳಿಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

     

    ರಾತ್ರಿ 7 ಗಂಟೆಗೆ  ವರ್ಣರಜಿಂತ ಬಾಣಬಿರುಸುಗಳ ಪ್ರದರ್ಶನದ ಜೊತೆಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ.

     

    ಕಾರ್ಯಕ್ರಮದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುನಿಯಪ್ಪ, ಸಂಸದ ಸುಧಾಕರ್, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಶಾಮಪ್ಪ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

     

  • ಮಾಚಗೊಂಡನಹಳ್ಳಿ ವಿ. ಎಸ್. ಎಸ್. ಎನ್ ಅಧ್ಯಕ್ಷರಾಗಿ ಜಗನ್ನಾಥ್ ಹಾಗೂ ಉಪಾಧ್ಯಕ್ಷರಾಗಿ ಮಂಜುನಾಥ್ ಅವಿರೋಧ ಆಯ್ಕೆ

    ದೊಡ್ಡಬಳ್ಳಾಪುರ : ತಾಲ್ಲೂಕಿನ ಮಾಚಗೊಂಡನಹಳ್ಳಿ ವಿವಿದೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಎನ್.ಜಗನ್ನಾಥ್ ಹಾಗೂ ಉಪಾಧ್ಯಕ್ಷರಾಗಿ ಎ.ಮಂಜುನಾಥ್ ಆಯ್ಕೆಯಾಗಿದ್ದಾರೆ.

     

     

    ಮಾಚಗೊಂಡನಹಳ್ಳಿ ವಿವಿದೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬೇರೆ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಕಾರಣ ನಾಮಪತ್ರ ಸಲ್ಲಿಸಿದ್ದ ಎನ್ ಜಗನ್ನಾಥ್ ರವರನ್ನು ಅಧ್ಯಕ್ಷರನ್ನಾಗಿ ಹಾಗೂಎ. ಮಂಜುನಾಥ್ ರವರನ್ನು ಉಪಾಧ್ಯಕ್ಷರನ್ನಾಗಿ ಚುನಾವಣಾಧಿಕಾರಿ ಎಂ.ನಾಗಭೂಷಣ್ ರವರು ವಿದ್ಯುಕ್ತವಾಗಿ ಘೋಷಿಸಿದರು.

    ನೂತನ ಅಧ್ಯಕ್ಷ ಎನ್.ಜಗನ್ನಾಥ್ ಮಾತನಾಡಿ ಮಾಚಗೊಂಡನಹಳ್ಳಿ ಕೃಷಿ ಸಹಕಾರ ಸಂಘ ಹಿಂದೆ ಸುಮಾರು ಇಪ್ಪತ್ತು ವರ್ಷಗಳ ಕಾಲ ಮುಚ್ಚಲ್ಪಟ್ಟಿದ್ದು, ನಂತರ ಹೊಸ ನಾಯಕತ್ವದ ಕಾರಣ ಸಂಘಕ್ಕೆ ಮರುಜೀವ ಕೊಟ್ಟು ಸಂಘವು ಸುಸ್ಥಿತಿಗೆ ಬರಲು ಸಾಧ್ಯವಾಯಿತು . ಮುಂಬರುವ ದಿನಗಳಲ್ಲಿ ನನ್ನ ಅಧಿಕಾರಾವಧಿಯಲ್ಲಿ ಸಾರ್ವಜನಿಕರಿಗೆ ಸಮರ್ಪಕ ಪಡಿತರ, ರೈತರಿಗೆ ಸಾಲ ಸೌಲಭ್ಯ, ಬೆಳೆ ಸಾಲ, ಅಲ್ಪಾವದಿ ಸಾಲ, ಸಮರ್ಪಕ ರಸಗೊಬ್ಬರ ವಿತರಣೆ ಸೇರಿದಂತೆ ರೈತ ಪರ ಇನ್ನಷ್ಟು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುತ್ತೇನೆ ಎಂದರು.

     

    ಈಗಾಗಲೇ ನಮ್ಮ ಸಂಘವು ತಾಲೂಕಿನಲ್ಲಿ ನಂಬರ್ ಒನ್ ಸ್ಥಾನ ಪಡೆದಿದೆ. ಸುಮಾರು ಐದು ಕೋಟಿಯಷ್ಟು ಹಣ ರೈತರಿಗೆ ಸಾಲ ನೀಡಲಾಗಿದೆ. ವಾರ್ಷಿಕ ಹತ್ತು ಲಕ್ಷ ಹಣ ಸರ್ಕಾರದ ಅನುದಾನ ಬರುತ್ತದೆ. ಫುಡ್ ಮಾರಾಟದಲ್ಲೂ ಲಾಭ ಬರುತ್ತಿದೆ. ಸಾಲ ವಸೂಲಾತಿ ಸುಗಮವಾಗಿದ್ದು ಯಾವುದೇ ಸುಸ್ತಿದಾರರಿಲ್ಲದೆ ಸಂಘ ಅತ್ಯಂತ ಸುಸ್ಥಿತಿಯಲ್ಲಿದೆ. ಇದನ್ನು ಇನ್ನಷ್ಟು ಸುಸ್ಥಿತಿಗೆ ತಂದು ಎಲ್ಲರನ್ನು ಪಕ್ಷತೀತವಾಗಿ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಮುಖ್ಯವಾಗಿ ನನ್ನನ್ನು ಅಧ್ಯಕ್ಷರನ್ನಾಗಿ ಮಾಡಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಅರ್ಪಿಸುತ್ತೇನೆ ಎಂದು ಜಗನ್ನಾಥ್ ಹೇಳಿದರು.

    ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ನಿರ್ದೇಶಕರಾದ ರಾಮಾಂಜಿನಪ್ಪ, ಗೋಪಾಲ್ ರೆಡ್ಡಿ, ರಕ್ಷಿತ್, ವೆಂಕಟೇಶ್, ಮುನಿರಾಜು, ಭಾಗ್ಯಮ್ಮ, ಹಾಗೂ ತೆಂಗು ನಾರಿನ ಮಂಡಳಿ ಅಧ್ಯಕ್ಷರಾದ ಗಂಟಿಗಾನಹಳ್ಳಿ ವೆಂಕಟೇಶ್ ಬಾಬು, ಮಾಜಿ ವಿ. ಎಸ್. ಎಸ್. ಎನ್ ಅಧ್ಯಕ್ಷರಾದ ಮಂಜುನಾಥ್, ಮಂಜುನಾಥ್, ಗಂಟಿಗಾನಹಳ್ಳಿ ಸಂದೀಪ್, ಹೆಗ್ಗಡಿಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಮಂಜುಳಾ ಸುರೇಶ, ಮಾಜಿ ಅಧ್ಯಕ್ಷರಾದ ಶ್ರೀನಿವಾಸ್, ಬೀಡಿಕೆರೆ ಗೌರೀಶ್, ಕುಮಾರ್, ಭಾಸ್ಕರ್ ಮುಕ್ಕೆನಹಳ್ಳಿ, ಮೆಳೇಕೋಟೆ ಗ್ರಾಮಪಂಚಾಯ್ತಿ ಅಧ್ಯಕ್ಷರಾದ ಶ್ರೀನಿವಾಸ್, ಸಿ, ಏ. ಶ್ರೀನಿವಾಸ್ ಮೂರ್ತಿ ಹಾಗೂ ತಾಲೂಕಿನ ಹಲವಾರು ಮುಖಂಡರು ಅಭಿನಂದಿಸಿದ್ದಾರೆ.

  • ದೊಡ್ಡಬಳ್ಳಾಪುರ ಬಿಜೆಪಿ ಕಚೇರಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಂಭ್ರಮ

    ದೊಡ್ಡಬಳ್ಳಾಪುರ :ಬಿಜೆಪಿ ನಗರ ಮತ್ತು ತಾಲ್ಲೂಕು ಮಹಿಳಾ ಮೋರ್ಚಾ ತಂಡಗಳವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ವನ್ನು ಜಿಲ್ಲಾ ಬಿಜೆಪಿ ಕಚೇರಿ ದೊಡ್ಡಬಳ್ಳಾಪುರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

    ರಾಜ್ಯ ಮಹಿಳಾ ಮೋರ್ಚ ತಂಡದ ಡಾ.ಪದ್ಮಾಪ್ರಕಾಶ್ ಅಂಗಾಂಗ ದಾನ, ನೇತ್ರದಾನ ಮತ್ತು ದೇಹದಾನದ ಬಗ್ಗೆ ವಿಸ್ತಾರವಾಗಿ ಮಹಿಳೆಯರಿಗೆ ಮಾಹಿತಿ ನೀಡುವ ಮೂಲಕ ಎಲ್ಲರನ್ನು ಹುರಿದುಂಬಿಸಿದರು.

     

    ಈ ಕಾರ್ಯಕ್ರಮದಲ್ಲಿ ನೇತ್ರದಾನ ಮಾಡಿದ ಶ್ರೀಯುತ ಸುನಿಲ್ ರವರ ಕುಟುಂಬವನ್ನು ಹಾಗೂ ದೇಹದಾನ ಮಾಡಿದ ಎಸ್ .ಎಸ್ ಜಗನ್ ಮೋಹನ್ ಬಾಬು ಹಾಗೂ ಹೆಚ್ ಎನ್ .ನಾಗರಾಜುರವರ ಕುಟುಂಬ ಸದಸ್ಯರನ್ನು ಸನ್ಮಾನಿಸಲಾಯಿತು.

     

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ನಗರ ಮಹಿಳಾ ಮೋರ್ಚದ ಅಧ್ಯಕ್ಷರಾದ ಪ್ರಿಯಾಂಕ. ಬಿ.ಪಿ ರವರು ಮತ್ತು ಮಹಿಳಾ ಮೋರ್ಚ ತಾಲ್ಲೂಕು ಅಧ್ಯಕ್ಷರಾದ ಲಕ್ಷ್ಮಮ್ಮರವರ ಉಪಸ್ಥಿತಿಯಲ್ಲಿ ನಡೆಯಿತು

     

    ಈ ಕಾರ್ಯಕ್ರಮ ದಲ್ಲಿ ರಾಜ್ಯ ಬಿಜೆಪಿ ಮಹಿಳಾ ಮೋರ್ಚ ಕಾರ್ಯದರ್ಶಿಗಳಾದ ನಿರ್ಮಲಮ್ಮ , ರಾಜ್ಯ ಬಿಜೆಪಿ ಮಹಿಳಾ ಮೋರ್ಚ ಸದಸ್ಯರಾದ ವತ್ಸಲ .ಎಸ್ , ಜಿಲ್ಲಾ ಮಹಿಳಾ ಮೋರ್ಚ ಅಧ್ಯಕ್ಷರಾದ ಅನುರೆಡ್ಡಿ , ಜಿಲ್ಲಾ ಅಧ್ಯಕ್ಷರಾದ ರಾಮ್ ಕೃಷ್ಣಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಾಗವೇಣಿ , ದೊಡ್ಡಬಳ್ಳಾಪುರ ನಗರ ಮಂಡಲ ಅಧ್ಯಕ್ಷರಾದ ಮುದ್ದಪ್ಪ , ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷರಾದ ನಾಗೇಶ್ , ಹಿರಿಯ ಮಾರ್ಗದರ್ಶಿಗಳಾದ ಗೋವಿಂದರಾಜು , ಕಾರ್ಯಾಲಯದ ಕಾರ್ಯದರ್ಶಿಗಳಾದ ಜೆ. ಮಂಜುನಾಥ್ , ಮುಖಂಡರಾದ ವಾಣಿಿಿ ನಂದಕುಮಾರ, ಲೀಲಾವತಿ, ಸೇರಿದಂತೆ ಹಲವರು ಹಾಜರಿದ್ದರು.

  • ದೊಡ್ಡತುಮಕೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಟಿ ಜಿ ರಮೇಶ್ , ಉಪಾಧ್ಯಕ್ಷರಾಗಿ ಟಿ ಜಿ ಗಿಡ್ಡೇ ಗೌಡ ಅವಿರೋಧಆಯ್ಕೆ

    ದೊಡ್ಡಬಳ್ಳಾಪುರ : ದೊಡ್ಡತುಮಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಎರಡನೇ ಅವಧಿಗೆ ಚುನಾವಣೆ ನೆಡೆದಿದ್ದು ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಟಿ ಜಿ ರಮೇಶ್ , ಉಪಾಧ್ಯಕ್ಷರಾಗಿ ಟಿ ಜಿ ಗಿಡ್ಡೇ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ

    11 ಸದಸ್ಯರ ಬಲ ಹೊಂದಿರುವ ದೊಡ್ಡತುಮಕೂರು ಹಾಲು ಉತ್ಪಾದಕರ ಸಹಕಾರ ಚುನಾವಣೆ ನೆಡೆದಿದ್ದು ನೂತನ ನಿರ್ದೇಶಕರಾಗಿ ಚಿಕ್ಕಣಪ್ಪ,ಪದ್ಮಮ್ಮ, ನಂದಮ್ಮ, ಮುನಿರಾಜು,ಸೋಮಶೇಖರ್,ರಾಜಣ್ಣ, ನಂಜೇಗೌಡ,ವೆಂಕಟಸ್ವಾಮಿ ಆಯ್ಕೆಯಾಗಿದ್ದಾರೆ.

    ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಟಿ ಜಿ ಮಂಜುನಾಥ್ (LIC) ಅಭಿನಂದಿಸಿ ಮಾತನಾಡಿದ ಅವರು ಸ್ಥಳೀಯ ಮುಖಂಡರು ಹಾಗೂ ಸರ್ವ ಸದಸ್ಯರ ಆಶೀರ್ವಾದದಿಂದ ಇಂದಿನ ಗೆಲುವು ಲಭಿಸಿದೆ, ಹಾಲು ಉತ್ಪಾದಕರ ಅಭಿವೃದ್ಧಿಗಾಗಿ ನೂತನ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಹಾಲು ಉತ್ಪಾದನೆಯನ್ನು ಹೆಚ್ಚಿಸಿ ರೈತರಿಗೆ ಅನುಕೂಲ ಕಲ್ಪಿಸುವ ಮೂಲಕ  ಸರ್ಕಾರದ ಯೋಜನೆಗಳನ್ನು ರೈತರಿಗೆ ತಲುಪಿಸಲು ನೂತನ ಪದಾಧಿಕಾರಿಗಳು ಶ್ರಮಿಸಲಿ ಎಂದು ಶುಭ ಹಾರೈಸಿದರು.

     

    VSSN ಮಾಜಿ ಅಧ್ಯಕ್ಷ  ಟಿ ಏನ್ ನಾಗರಾಜ್ (ಬಾಬು ) ಮಾತನಾಡಿ ಉತ್ತಮ ಸೇವೆ ಸಲ್ಲಿಸುವ ಮೂಲಕ ಸ್ಥಳೀಯ ರೈತರ ಅಭಿವೃದ್ಧಿಗೆ ಒತ್ತು ನೀಡುವ ಮೂಲಕ , ಹಾಲು ಉತ್ಪಾದಕರ ಸಮಸ್ಯೆಗಳಿಗೆ ಶೀಘ್ರಗತಿಯಲ್ಲಿ  ಸ್ಪಂದಿಸಿ  ಪರಿಹಾರ ಕಲ್ಪಿಸುವ ಮೂಲಕ ಹೈನುಗಾರಿಕೆ ಉತ್ತಮಗೊಳಿಸುವಲ್ಲಿ  ಸಂಘದ ಅಭಿವೃದ್ಧಿಗೆ ಶ್ರಮಿಸಲಿ ಎಂದು ಶುಭ ಕೋರಿದರು.

    ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ಗ್ರಾ ಪಂ ಮಾಜಿ ಅಧ್ಯಕ್ಷರಾದ ಟಿ ಜಿ ಮಂಜುನಾಥ್, ಲಕ್ಷ್ಮೀ ದೇವಿ ಚನ್ನೇಗೌಡ,ತಾಲ್ಲೂಕು OBC ಮೋರ್ಚಾ ಅಧ್ಯಕ್ಷರು ಮಂಜುನಾಥ್ SST, ಗ್ರಾ ಪಂ ಸದಸ್ಯ ಪಿ ಲೋಕೇಶ್,ಮದುರೆ ಹೋಬಳಿಯ ಅಧ್ಯಕ್ಷರು ಹಾಗು VSSN ಮಾಜಿ ಅಧ್ಯಕ್ಷರು ಗಳಾದ ಟಿ ಏನ್ ನಾಗರಾಜ್ (ಬಾಬು ), ಟಿ ಹೆಚ್ ಶಿವಕುಮಾರ್, MPCS ನ ಮಾಜಿ ಅಧ್ಯಕ್ಷರು ಗಳಾದ ಅಂಜಿನಮೂರ್ತಿ, ಗೋಪಾಲಕೃಷ್ಣ, ಜಯರಾಮ್,ಮುಖಂಡರು ಗಳಾದ ಸುಬ್ರಾಯಪ್ಪ,ಪ್ರಕಾಶ್, ಮೋಹನ್ ಪುರುಷೋತ್ತಮ್ ಗೌಡ, ಯಲ್ಲಪ್ಪ, ಪುಟ್ಟರಾಜು, ಬೂತ್ ಅಧ್ಯಕ್ಷ ಟಿ.ಕೆ. ಸೋಮು,ಆನಂದ,ಹನುಮಂತರಾಜು,ರಾಮು,ಮುಂತಾದವರು ಅಭಿನಂದನೆ ಸಲ್ಲಿಸಿದರು.

  • ನಾಳೆ ( ಮಾ. 9 ರಂದು )ಕನಸವಾಡಿಯಲ್ಲಿ ಶನಿಮಹಾತ್ಮನ ಬ್ರಹ್ಮರಥೋತ್ಸವ

    ದೊಡ್ಡಬಳ್ಳಾಪುರ: ತಾಲೂಕಿನ ಕನಸವಾಡಿಯಲ್ಲಿ ಶನಿಮಹಾತ್ಮನ ಬ್ರಹ್ಮ ರಥೋತ್ಸವ ಮಾ.9ರಂದು ಮಧ್ಯಾಹ್ನ 1.35ಕ್ಕೆ ನಡೆಯಲಿದೆ.

    ಬ್ರಹ್ಮರಥೋತ್ಸವದ ಅಂಗವಾಗಿ ಒಂದು ವಾರ ನಡೆಯುವ ಜಾತ್ರೆಯಲ್ಲಿ ವಿವಿಧ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ನಾಟಕೋತ್ಸವ ನಡೆಯಲಿವೆ.

    ದೇವಾಲಯದ ಧರ್ಮದರ್ಶಿ ಕೆ.ಪಿ.ಪ್ರಕಾಶ್ ಮಾತನಾಡಿ ಮಾ.8ರಂದು ರಾತ್ರಿ 6 ಗಂಟೆಗೆ ಗಣಪತಿ ಪ್ರಾರ್ಥನೆ, ಧ್ವಜಾರೋಹಣ, ವಿವಿಧ ಹೋಮಗಳು ನಡೆಯಲಿವೆ. ಮಾ.10 ರಂದು ರಾತ್ರಿ 7.30ಕ್ಕೆ ಬೆಳ್ಳಿ ರಥದಲ್ಲಿ ಕಾಕವಾಹನೋತ್ಸವ, ತಮಟೆ ವಾಧ್ಯ ವೀರಗಾಸೆ ನೃತ್ಯ, ಸಂಗೀತ ರಸ ಸಂಜೆ ಕಾರ್ಯಕ್ರಮಗಳು ನಡೆಯಲಿವೆ. ಮಾ.11 ರಂದು ರಾತ್ರಿ 8 ಗಂಟೆಗೆ ಬೆಳ್ಳಿ ಪಲ್ಲಕ್ಕಿ ಉತ್ಸವ ಮತ್ತು ಸಂಗೀತ ರಸಸಂಜೆ ನಡೆಯಲಿದೆ. ಮಾ. 12 ರಂದು ರಾತ್ರಿ 9 ಗಂಟೆಗೆ ಚಂದ್ರ ಮಂಡಲೋತ್ಸವ, ಕೀಲುಕುದುರೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ, ಜೊತೆಗೆ ಮಾ. 14ರಂದು ಸಂಜೆ 7 ಗಂಟೆಗೆ ಕಾಕವಾಹನೋತ್ಸವ, ಸಂಗೀತ ಸಂಜೆ, ಮಾ.15ರಂದು ಬೆಳಿಗ್ಗೆ 9ಕೆಸುವ ಭಾತೋತ್ಸವ, ಡೊಳು ಕುಣಿತ ನಡೆಯಲಿದೆ, ಬ್ರಹ್ಮರಥೋತ್ಸವದ ಅಂಗವಾಗಿ ಪ್ರತಿದಿನ ರಾತ್ರಿ ನಡೆಯುವ ನಾಟಕೋತ್ಸವದಲ್ಲಿ ಭಾಗವಹಿಸುವ ಪ್ರತಿ ತಂಡಗಳಿಗೆ ದೇವಾಲಯದ ವತಿಯಿಂದ 26.500 ಪ್ರೋತಾಹ ಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.